ಗುಬ್ಬಿ | ಡಿಕೆಶಿ ಹುನ್ನಾರಕ್ಕೆ ಅಹಿಂದ ನಾಯಕ ಕೆ.ಎನ್.ರಾಜಣ್ಣ ಬಲಿ : ಬಿಜೆಪಿ ಮುಖಂಡ ದಿಲೀಪ್ ಕುಮಾರ್.

Date:

ಅಹಿಂದ ನಾಯಕ, ಸಹಕಾರ ಕ್ಷೇತ್ರದ ಆಸ್ತಿ ಕೆ.ಎನ್.ರಾಜಣ್ಣ ಅವರು ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು. ಇಂತಹ ದಲಿತ ನಾಯಕರನ್ನು ತುಳಿಯಲಿಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹುನ್ನಾರ ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ ಅದೋಗತಿ ತಿಳಿಸುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ತಿಳಿಸಿದರು.

ಗುಬ್ಬಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಪಾಪದ ಕೂಸು ರಾಹುಲ್ ಗಾಂಧಿ ಅವರ ಮೂಲಕ ಮತಗಳ್ಳತನ ಎಂದು ಹೇಳಿಸಿದ್ದು ನೇರವಾಗಿ ಖಂಡಿಸಿ ನಮ್ಮ ತಪ್ಪಿದೆ ಎಂದು ಸತ್ಯ ಹೇಳಿದ್ದಕ್ಕೆ ರಾಜಣ್ಣ ಅವರಿಗೆ ವಜಾ ಮಾಡುವ ಶಿಕ್ಷೆ ನೀಡಿದೆ ಎಂದರೆ ಕಾಂಗ್ರೆಸ್ ಸರ್ಕಾರ ಯಾವ ಸ್ಥಿತಿಯಲ್ಲಿವೆ ಎಂದು ಜನರೇ ತಿಳಿಯಬೇಕಿದೆ ಎಂದು ಛೇಡಿಸಿದರು.

ಅಹಿಂದ ವರ್ಗದ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿ ಗೌರವ ಇಲ್ಲ ಎಂಬುದು ಈಗ ಸಾಬೀತಾಗಿದೆ. ಸಹಕಾರ ಕ್ಷೇತ್ರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದ ರಾಜಣ್ಣ ವಿರುದ್ಧ ಎಲ್ಲರೂ ಮುಗಿಬಿದ್ದಿದ್ದಾರೆ. ನಾಲ್ಕು ದಶಕದ ಅನುಭವದ ರಾಜಣ್ಣ ಅವರು ಸಹಕಾರ ಚುನಾವಣೆ ಅಚ್ಚುಕಟ್ಟಾಗಿ ನಡೆಸಲಿದ್ದಾರೆ. ಆದರೆ ನಮ್ಮಲ್ಲಿ ಹಾಲು ಸಹಕಾರ ಕ್ಷೇತ್ರದ ಚುನಾವಣೆ ವಾಮಮಾರ್ಗದಲ್ಲಿ ನಡೆಸಲಾಗಿದೆ. ಈ ಬಗ್ಗೆ ಪ್ರಶ್ನಿಸಿ ಎಂ.ಎಚ್.ಪಟ್ಟಣ ಡೈರಿ ಕೋರ್ಟ್ ಮೆಟ್ಟಿಲೇರಿದೆ. ಕಾನೂನು ಗಾಳಿಗೆ ತೂರಿದ ನಿರ್ದೇಶಕರ ಆಯ್ಕೆ ನಡೆದಿದೆ ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ ಎಂದ ಅವರು ಬಿಜೆಪಿಗೆ ರಾಜಣ್ಣ ಅವರು ಬರುವುದಾದರೆ ಸ್ವಾಗತ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರ ಕ್ಷೇತ್ರದಲ್ಲಿ ವಾಮಮಾರ್ಗಕ್ಕೆ ಅವಕಾಶ ನೀಡಬಾರದು ಎಂದು ರಾಜಣ್ಣ ಅವರ ನಿಲುವು ಇದ್ದ ಕಾರಣ ಅವರನ್ನು ಕುತಂತ್ರಕ್ಕೆ ಸಿಲುಕಿಸಿದ್ದಾರೆ ಎಂದ ಅವರು ಎಂ.ಎಚ್.ಪಟ್ಟಣ ಹಾಲು ಸೊಸೈಟಿಯಲ್ಲಿ ಜನರಲ್ ಬಾಡಿ ಸದಸ್ಯರಾಗದೆ ಚುನಾವಣೆಗೆ ಸ್ಪರ್ಧಿಸಿದ್ದ ಬಗ್ಗೆ ಈಗ ನ್ಯಾಯಾಲಯದಲ್ಲಿ ಪ್ರಶ್ನೆಯಾಗಿದೆ. ಸರ್ಕಾರದ ಪ್ರೋತ್ಸಾಹ ಧನ ನೀಡಲು ಫ್ರೂಟ್ ಐಡಿ ಅಗತ್ಯವಿದೆ. ನೇರ ಖಾತೆಗೆ ಬರುವ ಬದಲು ಕೈ ಬರಹ ಮೂಲಕ ಹಣ ನೀಡಿರುವುದು ಕಾನೂನು ಗಾಳಿಗೆ ತೂರಿದಂತೆ ಎಂಬುದು ಜನರಲ್ಲಿ ಚರ್ಚೆ ನಡೆದಿದೆ. ಕೋರ್ಟ್ ಮೂಲಕ ನ್ಯಾಯ ಸಿಗಲಿದೆ. ನಿರ್ದೇಶಕ ಸ್ಥಾನ ಆಯ್ಕೆಯನ್ನು ರದ್ದು ಮಾಡುವ ಆದೇಶ ಬರಲಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...