ಗುಬ್ಬಿ |  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ :  ಅಧಿಕಾರಿ ಓಬಳೇಶ್ ಅಮಾನತಿಗೆ ಬಿಜೆಪಿ ಮುಖಂಡರ  ಆಗ್ರಹ

Date:

ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಹಾಲು ಡೈರಿಯ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಿ ತಾಕೀತು ಮಾಡುವ ಹಾಗೂ ಇಲ್ಲಸಲ್ಲದ ನಿಯಮ ತಿಳಿಸುವ ಮೂಲಕ ಆಡಳಿತ ಪಕ್ಷದ ಪರ ಕೆಲಸ ಮಾಡಿದ ಸಹಕಾರ ಇಲಾಖೆಯ ಸಹಾಯಕ ನಿಬಂಧಕ ಓಬಳೇಶ್ ಅಧಿಕಾರ ದುರುಪಯೋಗ ಮಾಡಿಕೊಂಡು ಒಂದು ಪಕ್ಷ ಓರ್ವ ವ್ಯಕ್ತಿಯ ಪರ ಕೆಲಸ ಮಾಡಿದ್ದಾರೆ. ಈ ರೀತಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಈ ಅಧಿಕಾರಿ ಓಬಳೇಶ್ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು, ಹಾಲು ಉತ್ಪಾದಕರ ಸಂಘದ ನೂರಾರು ಸದಸ್ಯರು ಸಭೆಯನ್ನು ಸ್ಥಗಿತಗೊಳಿಸಿದರು.

ಸೋಮವಾರ ಬೆಳಿಗ್ಗೆ ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳ ಸಭೆಯ ಆರಂಭಕ್ಕೆ ಮುನ್ನ ಬಿಜೆಪಿ ಮುಖಂಡರು, ಹಾಲಿನ ಡೈರಿ ಸದಸ್ಯರು ಹಾಜರಾಗಿ ಸಭೆಯ ಉದ್ದೇಶವನ್ನು ಪ್ರಶ್ನಿಸಿದರು. 

ಒಕ್ಕೂಟದ ನಿರ್ದೇಶಕರ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವಾಗ್ಗೆ ಈ ಸಭೆ ದುರುದ್ದೇಶದಿಂದ ಕೂಡಿದೆ. ಸೂಕ್ತ ಕಾರಣ ನೀಡಬೇಕು. 90 ದಿನದ ಹಿಂದೆ ಮಾಡಬೇಕಾದ ನಿಯಮ ಏಕಾಏಕಿ ಅರವತ್ತು ವರ್ಷ ಆಗಿರುವವರ ನಿವೃತ್ತಿ ಮಾಡುವ ಮೂಲಕ ಸಂಘಗಳ ಅಸ್ಥಿರತೆಗೆ ಅಧಿಕಾರಿಗಳು ಮುಂದಾಗಿದ್ದೀರಿ ಎಂದು ಓಬಳೇಶ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮುಖಂಡ ಎಸ್.ಡಿ. ದಿಲೀಪ್ ಕುಮಾರ್ ಮಾತನಾಡಿ ನಾಲ್ಕೈದು ವರ್ಷದ ಹಿಂದೆ ಕಟ್ಟಿದ ಡೈರಿ ಕಟ್ಟಡದ ಲೆಕ್ಕಪತ್ರ ಪರಿಶೀಲನೆ ಹೆಸರಿನಲ್ಲಿ ಹಾಲು ಸಂಘವನ್ನು ಅಸ್ಥಿರಗೊಳಿಸಿ ಅಭ್ಯರ್ಥಿಗಳು ಕಣಕ್ಕೆ ಬಾರದಂತೆ ತಡೆಯಲು ಹುನ್ನಾರ ನಡೆದಿದೆ. ಒಂದು ವರ್ಷದಿಂದ ನಿಬಂಧಕರ ಬಳಿಯೇ ಇದ್ದ ಲೆಕ್ಕಪತ್ರ ಈಗ ಮುನ್ನಲೆಗೆ ಬರಲು ಕಾರಣ ಎಲ್ಲರಿಗೂ ತಿಳಿದಿದೆ. ನೀತಿ ಸಂಹಿತೆ ಇರುವಾಗ್ಗೆ ಸಭೆ ನಡೆಸುವುದು ನಿಯಮ ಉಲ್ಲಂಘನೆಯಾಗಿದೆ. ಕಾರ್ಯದರ್ಶಿಗಳ ಮೇಲೆ ಒತ್ತಡ ಹೇರುವ ಈ ಅಧಿಕಾರಿ ಓಬಳೇಶ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ ಮಾತನಾಡಿ ಚುನಾವಣಾ ಅಕ್ರಮ ನಡೆಸಲು ದುರುದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ನಂದಿನಿ ಭವನ ಕಟ್ಟಡದಲ್ಲಿ ಮಾಡಲು ನೀತಿ ಸಂಹಿತೆ ಅಡ್ಡಿ ಎನ್ನುವ ಅಧಿಕಾರಿ ಓಬಳೇಶ್ ತಾಲ್ಲೂಕು ಪಂಚಾಯಿತಿ ಸಭಾಂಗಣ ಸರ್ಕಾರಿ ಕಟ್ಟಡ ಬಳಸಿಕೊಂಡಿದ್ದು ಯಾಕೆ ಎಂಬುದು ಹೇಳಬೇಕಿದೆ. ಆಡಳಿತಾರೂಢ ಪಕ್ಷದ ಪರ ಕೆಲಸ ಮಾಡಲು ನೀತಿ ಸಂಹಿತೆ ಉಲ್ಲಂಘಿಸಿ ಕಾರ್ಯದರ್ಶಿಗಳ ಮೇಲೆ ಒತ್ತಡ ಪ್ರಯೋಗ ಮಾಡುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ಮಾತನಾಡಿ ಅರವತ್ತು ವರ್ಷ ಮೇಲ್ಪಟ್ಟವರ ನಿವೃತ್ತಿ ಬಗ್ಗೆ ಚುನಾವಣಾ ಸಂದರ್ಭದಲ್ಲಿ ಮುನ್ನಲೆಗೆ ತಂದು ಇಡೀ ಜಿಲ್ಲೆಯಲ್ಲಿ ಇಲ್ಲದ ಈ ನಿಯಮ ಗುಬ್ಬಿ ತಾಲ್ಲೂಕಿಗೆ ಅಳವಡಿಸಿ ಹಾಲಿನ ಡೈರಿ ಹಾಳು ಮಾಡುವ ಹುನ್ನಾರ ನಡೆದಿದೆ. ನ್ಯಾಯಯುತ ಚುನಾವಣೆ ಮಾಡಲಾಗದೆ ವಾಮಮಾರ್ಗ ಅನುಸರಿಸಿ ಸಹಕಾರ ಇಲಾಖೆಯ ಅಧಿಕಾರಿಗಳ ದುರ್ಬಳಕೆ ಮಾಡಲಾಗುತ್ತಿದೆ. ಡೈರಿಯ ಕಾರ್ಯದರ್ಶಿಗಳನ್ನು ಹಿಡಿತಕ್ಕೆ ಪಡೆದು ತಮ್ಮ ಸ್ವಾರ್ಥ ಸಾಧನೆಗಾಗಿ ಅಧಿಕಾರ ಬಳಸಿಕೊಂಡಿರುವುದು ದುರಂತ. ಸಹಾಯಕ ನಿಬಂಧಕರು ನೀತಿ ಸಂಹಿತೆ ಜಾರಿ ನಂತರ ಸಭೆ ನಡೆಸಿರುವುದು ಸರಿಯಲ್ಲ ಎಂದು ಸಭೆಯಲ್ಲಿ ಓಬಳೇಶ್ ಅವರನ್ನು ಘೇರಾವ್ ಮಾಡಿದ ಮುಖಂಡರು, ಡೈರಿ ಸದಸ್ಯರು ಸಭೆ ನಡೆಸದಂತೆ ತಾಕೀತು ಮಾಡಿ ಎಆರ್ ಓಬಳೇಶ್ ಅವರನ್ನು ಚುನಾವಣೆ ಪ್ರಕ್ರಿಯೆಯಲ್ಲಿ ಇರದಂತೆ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನೆರೆದಿದ್ದ ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳು ಮೂಕ ಪ್ರೇಕ್ಷಕರಾಗಿ ಈ ಸಭೆಯ ಔಚಿತ್ಯ ಇರಲಿಲ್ಲ ಎಂದು ಗುಸು ಗುಸು ಚರ್ಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾಗರನಹಳ್ಳಿ ವಿಜಯಕುಮಾರ್, ಯತೀಶ್, ಸಿದ್ದರಾಮಯ್ಯ, ಅಣ್ಣಪ್ಪಸ್ವಾಮಿ, ಶಶಿಕುಮಾರ್, ಲಕ್ಷ್ಮೀರಂಗಯ್ಯ, ಹೊಸಹಳ್ಳಿ ಗಿರೀಶ್, ರೇಣುಕಾ ಪ್ರಸಾದ್, ಚೇತನ್ ನಾಯಕ್, ಪ್ರಮೋದ್, ವಿದ್ಯಾಸಾಗರ, ಗಂಗಬಸಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...