ಗುಬ್ಬಿ | ಪೌರ ಕಾರ್ಮಿಕರಿಗೆ ಶೀಘ್ರದಲ್ಲಿ ನಿವೇಶನ ಹಂಚಿಕೆ : ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ

Date:

ಪ್ರತಿನಿತ್ಯ ಗುಬ್ಬಿ ಪಟ್ಟಣದ ಸ್ವಚ್ಚತಾ ಕಾಯಕ ನಡೆಸಿ ರಜೆ ಇಲ್ಲದೆ ದುಡಿಯುವ ಪೌರ ಕಾರ್ಮಿಕರ ಸೇವೆ ಗುರುತಿಸಿ ನಿವೇಶನ ಹಂಚಿಕೆ ಮಾಡಲು ಈಗಾಗಲೇ ಒಂದು ಎಕರೆ ಜಮೀನಿನಲ್ಲಿ 30 ನಿವೇಶನ ಸಿದ್ಧವಿದೆ. ಮುಂದಿನ ಸದಸ್ಯರ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿ ಶೀಘ್ರ ನಿವೇಶನ ಹಂಚಿಕೆ ಮಾಡುವುದಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ ನೀಡಿದರು.

ಗುಬ್ಬಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸನ್ಮಾನಿಸಿ ಮಾತನಾಡಿದ ಅವರು 45 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸದ್ಯದಲ್ಲೇ 20 ಮಂದಿ ಹೊರ ಗುತ್ತಿಗೆ ಆಧಾರದ ಕಾರ್ಮಿಕರ ನೇಮಕ ಆಗಲಿದೆ. ಈ ಹಿನ್ನಲೆ ಹೊರ ಗುತ್ತಿಗೆ ಕಾರ್ಮಿಕರಿಗೂ ಸೇರಿದಂತೆ ಎಲ್ಲರಿಗೂ ನಿವೇಶನ ನೀಡಲು ಇನ್ನೂ ಎರಡು ಎಕರೆ ಜಮೀನು ಕಂದಾಯ ಇಲಾಖೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು.

ಎಸ್ಸಿ ಎಸ್ಟಿ ಮೀಸಲು ಹಣವನ್ನು ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ದಲಿತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅನುವು ಮಾಡಲಾಗಿದೆ. ಇದೇ ಮಾದರಿಯಲ್ಲಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರ ಮಕ್ಕಳಿಗೂ ಉತ್ತಮ ಶಿಕ್ಷಣ ಒದಗಿಸಲು ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮ ರಚಿಸಲಾಗುವುದು ಎಂದ ಅವರು ಯುಜಿಡಿ ಕಾಮಗಾರಿ ಪೂರ್ಣಗೊಳಿಸಲು ಒಂದು ಕೋಟಿ ರೂ ಬಳಕೆ ಮಾಡಲಾಗುತ್ತಿದೆ. ಈ ಕೆಲಸ ಮುಗಿದ ತಕ್ಷಣ ಕಾರ್ಮಿಕರ ಮೇಲಿನ ಒತ್ತಡ ಕಡಿಮೆ ಆಗಲಿದೆ. ಅಗತ್ಯ ಸಲಕರಣೆ, ಸಮವಸ್ತ್ರ ವ್ಯವಸ್ಥೆ ಮಾಡಿಸಿ ನಿತ್ಯ ಶ್ರಮ ಜೀವಿಗಳಾದ ಪೌರ ಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಸವಲತ್ತು ತರುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಸದಸ್ಯ ಮಹಮದ್ ಸಾದಿಕ್ ಮಾತನಾಡಿ ವರ್ಷವಿಡೀ ದುಡಿಯುವ ಪೌರ ಕಾರ್ಮಿಕರ ಸೇವೆ ಗುರುತರ ಕೆಲಸವಾಗಿದೆ. ಚುನಾಯಿತ ಪ್ರತಿನಿಧಿಗಳು ಮತ್ತೊಂದು ಮುಖವಾಗಿ ಕೆಲಸ ಮಾಡುತ್ತಾ ತಮ್ಮ ಸೇವೆಯನ್ನು ಗೌರವಧನ ಪಡೆದು ಮಾಡುತ್ತಿದ್ದಾರೆ. ಪಟ್ಟಣ ಬೆಳೆದಂತೆ ಕಾರ್ಮಿಕರ ಸಂಖ್ಯೆ ಹೆಚ್ಚಳ ಆಗಬೇಕಿದೆ ಎಂದ ಅವರು ರಸ್ತೆ ವಿಭಜಕ ವಿಸ್ತರಣೆ ಮಾಡುವ ಜತೆ ಪಟ್ಟಣ ಬೆಳೆದಂತೆ ಕಾರ್ಮಿಕರ ಕೊರತೆ ಕಾಣುತ್ತಿದೆ. ಕೂಡಲೇ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಮುಖ್ಯಾಧಿಕಾರಿಗಳು ಮುಂದಾಗಬೇಕು. ಈಗಿರುವ ಸಿಬ್ಬಂದಿಗಳಿಗೆ ಇರುವ ಒತ್ತಡ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ಪಟ್ಟಣದ ನಿವಾಸಿಗಳು ಬೆಳಿಗ್ಗೆ ರಸ್ತೆಗೆ ಬರುವ ಮುನ್ನವೇ ಸ್ವಚ್ಚತೆ ಮಾಡಿ ಆರೋಗ್ಯ ಕಾಪಾಡುವ ಕಾರ್ಮಿಕರ ಸೇವೆ ಅನನ್ಯವಾದದ್ದು. ವಾರ್ಡ್ ಸದಸ್ಯರಿಗೆ ಹೆಸರು ಗೌರವ ಸಿಗುವುದು ಸಹ ಕಾರ್ಮಿಕರ ಸೇವೆಯಿಂದ ಎಂಬುದು ಮರೆಯುವಂತಿಲ್ಲ. ಈ ನಿಟ್ಟಿನಲ್ಲಿ ಅವರದ್ದೇ ದಿನವಾದ ಪೌರ ಕಾರ್ಮಿಕರ ದಿನಾಚರಣೆ ಪ್ರತಿ ವರ್ಷ ಅರ್ಥಪೂರ್ಣವಾಗಿ ನಡೆಸಿದ್ದೇವೆ. ಉತ್ತಮ ಸೇವೆ ಗುರುತಿಸಿ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದ ಅವರು ಗುಬ್ಬಿ ಹೆದ್ದಾರಿಯ ವಿಭಜಕವನ್ನು ವಿಸ್ತರಿಸಿ ಎರಡು ರಸ್ತೆ ನಿರ್ಮಾಣಕ್ಕೆ ಶಾಸಕರು ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಲ್ಲಾ ಕಾರ್ಮಿಕರಿಗೂ ಸನ್ಮಾನಿಸಿ ಗೌರವಿಸಲಾಯಿತು. ವಿಶೇಷ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯದಿಂದ ಪೌರ ಕಾರ್ಮಿಕರು ಮೆರವಣಿಗೆ ನಡೆಸಿದರು. ಮುಖ್ಯಾಧಿಕಾರಿಗಳ ಸಹಿತ ಎಲ್ಲಾ ಸಿಬ್ಬಂದಿಗಳು, ಪಪಂ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಕುಣಿದು ಕಾರ್ಮಿಕರ ಜತೆ ಹೆಜ್ಜೆ ಹಾಕಿ ಸಂತಸ ಹಂಚಿಕೊಂಡರು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಜಿ.ಸಿ.ಕೃಷ್ಣಮೂರ್ತಿ, ರೇಣುಕಾಪ್ರಸಾದ್, ಕುಮಾರ್, ಜಿ.ಸಿ.ಕೃಷ್ಣಮೂರ್ತಿ, ಶೌಕತ್ ಆಲಿ, ಮಹಾಲಕ್ಷ್ಮೀ, ಶ್ವೇತಾ, ನಾಮಿನಿ ಸದಸ್ಯರಾದ ಸುಮಾ, ಆನಂದ್, ಮುಖ್ಯಾಧಿಕಾರಿ ಮಂಜುಳಾದೇವಿ, ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...