ಗುಬ್ಬಿ | ಅಮಿತ್ ಶಾ ಪ್ರತಿಕೃತಿ ದಹನ : ಅಂಬೇಡ್ಕರ್ ಬಗ್ಗೆ ಅವಹೇಳನ ಖಂಡಿಸಿದ ಪ್ರಗತಿ ಪರ ಸಂಘಟನೆಗಳು

Date:

ದೇಶದ ಪ್ರಜಾಪ್ರಭುತ್ವಕ್ಕೆ ಅರ್ಥಪೂರ್ಣ ಸಂವಿಧಾನ ರಚಿಸಿದ ಡಾ.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಪ್ರಗತಿ ಪರ ಸಂಘಟನೆಗಳು, ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗಳ ಒಕ್ಕೂಟ ರಾಷ್ಟ್ರಪತಿಗಳಿಗೆ ತಾಲ್ಲೂಕು ಆಡಳಿತ ಮೂಲಕ ಪತ್ರ ಮನವಿ ಮಾಡಿದರು.

ಗುಬ್ಬಿ ಬಸ್ ಸ್ಟ್ಯಾಂಡ್ ಬಳಿ ಜಮಾಯಿಸಿದ ದಲಿತ ಸಂಘರ್ಷ ಸಮಿತಿ ನೇತೃತ್ವದ ಪ್ರಗತಿ ಪರ ಸಂಘಟನೆಗಳ ಒಕ್ಕೂಟ ಸದಸ್ಯರು ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾ ಘೋಷಣೆ ಕೂಗಿ ಅಮಿತ್ ಷಾ ಭಾವಚಿತ್ರ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ನಂತರ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ತಲುಪಿದರು.

1000804583 1

ಪ್ರತಿಭಟನಾ ಸಭೆಯಲ್ಲಿ ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುವ ಬಿಜೆಪಿ ಮುಖಂಡರು ಮೊದಲು ಅಧಿಕಾರಕ್ಕೆ ಬರಲು ಬಳಸಿದ್ದ ಸಂವಿಧಾನ ಚುನಾವಣೆ ಬಗ್ಗೆ ತಿಳಿದುಕೊಳ್ಳಿ. ಅಂಬೇಡ್ಕರ್ ಬರೆದ ನಿಯಮಾನುಸಾರ ಅಧಿಕಾರದಲ್ಲಿರುವ ಅಮಿತ್ ಷಾ ಅವರಿಗೆ ಜಾತೀಯತೆ ಬುದ್ಧಿ ನೆತ್ತಿಗೇರಿದೆ. ದೇವರ ಸ್ಮರಣೆ ಮಾಡಿ ಪುಣ್ಯ ಅವರೇ ಕಟ್ಟುಕೊಳ್ಳಲಿ. ನಮಗೆ ಅಂಬೇಡ್ಕರ್ ಅವರೇ ದೇವರು ಎಂಬುದು ಅರ್ಥ ಮಾಡಿಕೊಳ್ಳಬೇಕು. ದೇಶದ 75 ಭಾಗ ಜನರು ಅವರನ್ನು ಆರಾಧಿಸುತ್ತಾರೆ ಎಂದು ಕಿಡಿಕಾರಿ ಅಮಿತ್ ಷಾ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000804590

ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಮಾತನಾಡಿ ದೇಶಕ್ಕೆ ಸಂವಿಧಾನ ಜಾರಿಯಾದಾಗ ಅಮಿತ್ ಷಾ ಹುಟ್ಟಿರಲಿಲ್ಲ. ಈ ಮನುಷ್ಯ ಪ್ರಭಾವಿ ಅಲ್ಲ. ಅಧಿಕಾರ ವಾಮಮಾರ್ಗದಲ್ಲಿ ಬಂದು ಮುಸ್ಲಿಂ ಕ್ರಿಶ್ಚಿಯನ್ ವಿರೋಧಿಸಿ ಕೇವಲ ಒಂದು ಧರ್ಮಕ್ಕೆ ದೇಶ ಎಂದು ಹೇಳಿ ಕೋಮು ಗಲಭೆಗಳಿಗೆ ಕಾರಣವಾಗಿದ್ದಾರೆ. ದಲಿತರನ್ನು ಶೋಷಿತರನ್ನು ಮತ ಬ್ಯಾಂಕ್ ಮಾಡಿಕೊಳ್ಳಲು ಇಲ್ಲಸಲ್ಲದ ಸರ್ಕಸ್ ಮಾಡುವ ಬಿಜೆಪಿ ಅಸಲಿ ಬಣ್ಣ ಅಮಿತ್ ಷಾ ಹೊರಗಿಟ್ಟಿದ್ದಾರೆ. ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಇಡೀ ಕೇಂದ್ರ ಸರ್ಕಾರವನ್ನು ಅಮಾನ್ಯಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡ ಚೇಳೂರು ಶಿವನಂಜಪ್ಪ ಮಾತನಾಡಿ ದೇಶದ ಸಂವಿಧಾನ ಶಕ್ತಿ ತಿಳಿದಿದ್ದರೆ ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡುತ್ತಿರಲಿಲ್ಲ. ಮನುಸ್ಮೃತಿ ಪಾಲಕರಾದ ಅಮಿತ್ ಷಾ ಸಂವಿಧಾನದಡಿ ಬರದಿದ್ದರೆ ಗೃಹ ಮಂತ್ರಿ ಆಗುತ್ತಿರಲಿಲ್ಲ. ಯಾವುದಾದರೂ ದೇವಾಲಯದಲ್ಲಿ ಪೂಜಾರಿ ಆಗಿರುತ್ತಿದ್ದೆ ಎಂದು ಕಟುವಾಗಿ ಟೀಕಿಸಿ ದೇಶದ ಪ್ರಜಾಪ್ರಭುತ್ವ ಉಳಿಯಬೇಕಾದರೆ ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ಕೆಳಗಿಳಿಸಿ ಎಂದು ಆಗ್ರಹಿಸಿದರು.

1000804583

ದಸಂಸ ತಾಲ್ಲೂಕು ಸಂಚಾಲಕ ಕಡಬ ಶಂಕರ್ ಮಾತನಾಡಿ ಅಮಿತ್ ಷಾ ಮೊದಲು ಸಂವಿಧಾನ ಪೀಠಿಕೆ ಓದಲಿ. ಅಲ್ಲಿನ ಸಾಮಾಜಿಕ ನ್ಯಾಯ ಬದ್ಧತೆ ಬಗ್ಗೆ ತಿಳಿಯಲಿ. ಕೇವಲ ಒಂದು ಧರ್ಮ ಬೆಂಬಲಿಸಿ ಅಧಿಕಾರ ಪಡೆಯಲು ಸಾಧ್ಯವಿಲ್ಲ. ಎಲ್ಲಾ ಜಾತಿಯ ಜನ ಮತ ಹಾಕಿದ್ದಾರೆ. ಇದಕ್ಕೆ ಅಂಬೇಡ್ಕರ್ ಸಂವಿಧಾನದ ಚುನಾವಣಾ ಪದ್ದತಿ ಕಾರಣ. ಯಾವ ದೇವರೂ ನಿಮಗೆ ಮತ ನೀಡಿಲ್ಲ. ಜಾತಿ ಭೂತದ ನಿಮ್ಮ ಕೊಳಕು ಮನಸ್ಸು ಸರಿ ಪಡಿಸಿಕೊಳ್ಳಿ. ಅದಕ್ಕೂ ಮೊದಲು ಅಧಿಕಾರದಿಂದ ಕೆಳಗಿಳಿದು ಅಂಬೇಡ್ಕರ್ ಬಗ್ಗೆ ಮತ್ತಷ್ಟು ಸ್ಟಡಿ ಮಾಡಿ ನಂತರ ಜಾತ್ಯತೀತ ಮನಸ್ಥಿತಿಗೆ ಬನ್ನಿ ಎಂದು ಛೇಡಿಸಿದರು.

ಪ್ರತಿಭಟನಾ ಮೆರವಣಿಗೆ ತಾಲ್ಲೂಕು ಕಚೇರಿ ಬಳಿ ಬಂದಾಗ ಅಮಿತ್ ಷಾ ಪ್ರತಿಕೃತಿ ದಹನ ಮಾಡಿ ಆಕ್ರೋಶದ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಶೋಕತ್ ಆಲಿ, ಮುಖಂಡರಾದ ಗುರುರೇಣುಕಾರಾಧ್ಯ, ಕೊಡಿಯಾಲ ಮಹದೇವು, ಜಿ.ವಿ.ಮಂಜುನಾಥ್, ತಾಪಂ ಮಾಜಿ ಸದಸ್ಯ ಕರೇತಿಮ್ಮಯ್ಯ, ಕುಂದರನಹಳ್ಳಿ ನಟರಾಜ್, ಅದಲಗೆರೆ ಈಶ್ವರಯ್ಯ, ಸಚಿನ್, ಮಧು, ಇಮ್ರಾನ್, ರಿಜ್ವಾನ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...