ಗುಬ್ಬಿ ತಾಲ್ಲೂಕಿನ ಅಗ್ನಿವಂಶ ಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜನೆ ಮಾಡಿರುವ ಶ್ರೀ ಅಗ್ನಿವಂಶ ಕ್ಷತ್ರಿಯ (ತಿಗಳ) ವಿಧ್ಯಾಭಿವೃದ್ಧಿ ಸಂಘ ಸೆ.10 ರೊಳಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಅರ್ಹ ಅಗ್ನಿವಂಶ ಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.
2024-25 ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದಾಗಿದೆ. ಜೊತೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ ಪದವಿ, ಡಿಪ್ಲೊಮೊ ಪದವಿ ಪಡೆದ ವಿದ್ಯಾರ್ಥಿಗಳಿಗೂ ಪುರಸ್ಕಾರ ಮಾಡಲಾಗುವುದು ಎಂದು ಸಂಘ ತಿಳಿಸಿದೆ.
ಸೆಪ್ಟೆಂಬರ್ 28 ರಂದು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ನಡೆಯುವ ಸಂಘದ ಸರ್ವ ಸದಸ್ಯರ ಮಹಾಸಭೆ ಹಿನ್ನಲೆ ನಡೆಯುವ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ತಿಗಳ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿಯೊಂದಿಗೆ ಅಂಕಪಟ್ಟಿ ನಕಲು, ಆಧಾರ್ ಕಾರ್ಡ್, ಜಾತಿ ದೃಢೀಕರಣ ಪತ್ರ ಹಾಗೂ ಪದವಿ ಪ್ರಮಾಣಪತ್ರ ನಕಲು ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9986684623, 9886510301, 7795886941 ಸಂಪರ್ಕಿಸಲು ಕೋರಲಾಗಿದೆ.





