ಗುಬ್ಬಿ | ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷರಾಗಿ ಪಾಪಣ್ಣ ನೇಮಕ : ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಘೋಷಣೆ

Date:

ಸವಿತಾ ಸಮಾಜದ ತಾಲ್ಲೂಕು ಆಡಳಿತ ಮಂಡಳಿ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಡಿ.ವಿ.ಲಕ್ಷ್ಮೀನಾರಾಯಣ್ (ಪಾಪಣ್ಣ) ಹಾಗೂ ತಾಲ್ಲೂಕು ಪ್ರತಿನಿಧಿಯಾಗಿ ಎನ್.ರಮೇಶ್ ಆಯ್ಕೆ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.

ಗುಬ್ಬಿ ಪಟ್ಟಣದ ಸವಿತಾ ಸಮಾಜದ ಕಚೇರಿ ಆವರಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಹೊಸ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಡೆಸಿ ಎಲ್ಲಾ ಹೋಬಳಿ ಘಟಕದ ಅಧ್ಯಕ್ಷರ ಸಮ್ಮುಖದಲ್ಲಿ ಸಮಾಜದ ಆಗುಹೋಗುಗಳ ಬಗ್ಗೆ ಕೂಲಂಕಷ ಚರ್ಚೆ ಮಾಡಲಾಯಿತು.

ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಪಾಪಣ್ಣ ಮಾತನಾಡಿ ಹಿಂದುಳಿದ ವರ್ಗಗಳ ಪೈಕಿ ಅತೀ ಹಿಂದುಳಿದ ನಮ್ಮ ಸಮಾಜದ ಎಲ್ಲಾ ಬಂಧುಗಳು ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಈ ಹಿಂದೆ ನಮ್ಮ ಸಮಾಜದ ಬಂಧುಗಳು ಯಾರಾದರೂ ಮೃತಪಟ್ಟರೆ ಆ ಕುಟುಂಬಕ್ಕೆ ನಾನು ವೈಯಕ್ತಿಕ ರೂ.2500 ನೀಡುವ ಪದ್ಧತಿ ನಡೆಸಿಕೊಂಡು ಬಂದಿದ್ದೆ. ಆದರೆ ಈ ಕೊಡುಗೆಯ ಹೆಸರು ಬೇರೆಯವರು ಪಡೆಯುವ ವಿಚಾರ ಕೇಳಿ ಬೇಸರಗೊಂಡು ಸಹಾಯ ಸ್ಥಗಿತಗೊಳಿಸಿದ್ದೆ. ಈಗ ಅಧ್ಯಕ್ಷನಾಗಿ ಮರು ಗಳಿಗೆಯಲ್ಲೇ ಮೃತ ಕುಟುಂಬಕ್ಕೆ ಧನ ಸಹಾಯ ಪದ್ಧತಿ ನಾನು ಮುಂದುವರೆಸುತ್ತೇನೆ. ಜೊತೆಗೆ ಪ್ರತಿ ಎರಡು ತಿಂಗಳಿಗೊಮ್ಮೆ ಹೋಬಳಿ ಮಟ್ಟದ ಸಭೆ ನಡೆಸಿ ಕುಂದು ಕೊರತೆಗಳ ಆಲಿಸಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000811275

ಸವಿತಾ ಸಮಾಜ ಯುವಪಡೆ ಜಿಲ್ಲಾಧ್ಯಕ್ಷ ಕಟ್ ವೆಲ್ ರಂಗನಾಥ್ ಮಾತನಾಡಿ ತಾಲ್ಲೂಕು ಮಟ್ಟದ ಸಂಘ ನಮ್ಮ ಜನಾಂಗದ ಕಷ್ಟ ಸುಖ ಆಲಿಸುವ ಕೆಲಸ ಮಾಡಬೇಕು. ತ್ಯಾಗರಾಜ ಭವನ, ಸವಿತಾ ಭವನ ಹೀಗೆ ಸಮಾಜದ ಅಭಿವೃದ್ದಿ ಜೊತೆಗೆ ಪ್ರತಿಭಾವಂತ ಮಕ್ಕಳಿಗೆ ಸಹಕಾರ, ಅನಾರೋಗ್ಯ ಪೀಡಿತರಿಗೆ ಸಹಾಯ ಈ ರೀತಿಯ ಸಮಾಜಮುಖಿ ಕೆಲಸಗಳು ಮುಂದೆ ಪಾಪಣ್ಣ ನಡೆಸುತ್ತಾರೆ ಎಂಬ ನಂಬಿಕೆಯಿದೆ ಎಂದರು.

ಸವಿತಾ ಸಮಾಜ ಜಿಲ್ಲಾ ಪ್ರತಿನಿಧಿ ಕೆ.ವಿ.ನಾರಾಯಣ್ ಮಾತನಾಡಿ ಸರ್ಕಾರದಿಂದ ಅಗತ್ಯ ಸಹಾಯ ಪಡೆಯಲು ಒಗ್ಗಟ್ಟಿನ ಅಗತ್ಯವಿದೆ. ಸಮಾಜದಲ್ಲಿ ನಮ್ಮ ಉಳಿವಿಗೆ ಸಂಘಟನೆ ಕೂಡಾ ಮುಖ್ಯವಾಗಿದೆ. ಸಾಮಾಜಿಕವಾಗಿ ಹಿಂದುಳಿದ ನಾವುಗಳು ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಮಾಜ ಕಟ್ಟೋಣ ಎಂದು ಕರೆ ನೀಡಿದರು.

ನೂತನ ತಾಲ್ಲೂಕು ಪ್ರತಿನಿಧಿ ಎನ್.ರಮೇಶ್ ಮಾತನಾಡಿ ಹಿಂದುಳಿದ ನಮ್ಮ ಜನಾಂಗವನ್ನು ಮುಖ್ಯವಾಹಿನಿಗೆ ತರಲು ನಮ್ಮ ಕುಲ ಕಸುಬು ಹೊರತಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಬೇರೆ ರಂಗಗಳಲ್ಲಿ ಬೇರೂರುವ ಕೆಲಸ ಸಂಘಟನೆಯಲ್ಲಿ ಮಾಡಬೇಕಿದೆ. ರಾಜಕೀಯ ಶಕ್ತಿ ಕೂಡ ನಮಗೆ ಅತ್ಯಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ಹೋಬಳಿ ಮಟ್ಟದ ಘಟಕಗಳು ನೇರ ತಾಲ್ಲೂಕು ಅಧ್ಯಕ್ಷರೊಂದಿಗೆ ಸಂಪರ್ಕ ಬೆಳೆಸಿಕೊಳ್ಳಿ ಎಂದರು.

ಇದೇ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ ಸವಿತಾ ಸಮಾಜದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ನೂತನ ಅಧ್ಯಕ್ಷರ ಆಯ್ಕೆಗೆ ಸಮಾಜದ ಬಂಧುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ವೇದಿಕೆಯಲ್ಲಿ ಮಾಜಿ ಅಧ್ಯಕ್ಷರಾದ ಮುಕುಂದರಾಜ್, ನಟರಾಜ್, ಮಾಜಿ ಪ್ರತಿನಿಧಿ ನರಸಿಂಹಮೂರ್ತಿ, ಕಡಬ ಅಧ್ಯಕ್ಷ ಗೋಪಾಲ್, ನಿಟ್ಟೂರು ಅಧ್ಯಕ್ಷ ಕರಿಯಣ್ಣ, ಹಾಗಲವಾಡಿ ಅಧ್ಯಕ್ಷ ಲೋಕೇಶ್, ಚೇಳೂರು ಅಧ್ಯಕ್ಷ ಗಿರೀಶ್ ಹಾಗೂ ಸಿ.ಎಸ್.ಪುರ ಅಧ್ಯಕ್ಷ ವಸಂತಕುಮಾರ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...