ಗುಬ್ಬಿ | ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಜಾಗೃತಿವಹಿಸಬೇಕು : ಚೇಳೂರು ಪಿಎಸ್ ಐ ನಾಗರಾಜು

Date:

ಆಧುನಿಕತೆ ಬೆಳೆದಂತೆ ಅಪರಾಧ ಕೃತ್ಯ ಹಾಗೂ ಅನೈತಿಕ ಚಟುವಟಿಕೆ ಹೆಚ್ಚಾಗತೊಡಗಿದೆ. ವಿಶ್ವಮಟ್ಟದ ಪಿಡುಗು ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಗ್ರಾಮೀಣ ಭಾಗದಲ್ಲಿ ಎಚ್ಚರವಹಿಸಬೇಕು ಎಂದು ಚೇಳೂರು ಪಿಎಸ್ನಾ ಐಗರಾಜು ಕರೆ ನೀಡಿದರು.

ತಾಲ್ಲೂಕಿನ ಚೇಳೂರು ಗ್ರಾಮದ ಕಾಳಿದಾಸ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಸಿದ್ದಗಂಗಾ ರೋಟರಿ ಅಭಿವೃದ್ದಿ ಸಂಸ್ಥೆ, ಹೈದರಬಾದ್ ವೈ ಚಾಯ್ಸ್ ಫೌಂಡೇಶನ್, ತುಮಕೂರು ಒನ್ ಸ್ಟಾಪ್ ಸೆಂಟರ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಡೆದ ಸುರಕ್ಷಿತಾ ಗ್ರಾಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಮಕ್ಕಳು ಹಾಗೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಆಸೆ ಆಮಿಷಯೊಡ್ಡಿ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಊರಿನ ಪ್ರಜ್ಞಾವಂತ ಜನರು ಈ ಬಗ್ಗೆ ನಿಗಾವಹಿಸಿ ಹೊಸಬರ ಪರಿಚಯ ಅವರ ನಡೆನುಡಿ ಗಮನಿಸಿ ಅನುಮಾನ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕು ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ಜಯಣ್ಣ ಮಾತನಾಡಿ ಮಕ್ಕಳಲ್ಲಿ ಈ ಬಗ್ಗೆ ಎಚ್ಚರಿಕೆ ಅಗತ್ಯವಿದೆ. ಹಳ್ಳಿಯಿಂದ ಶಾಲೆಗೆ ಬಂದು ಮರಳಿ ಹೋಗುವಾಗ ರಸ್ತೆಯಲ್ಲಿ ಅಪರಿಚಿತರ ಸಂಪರ್ಕ ಮಾಡದಂತೆ ಜಾಗೃತಿ ಮೂಡಿಸಬೇಕಿದೆ. ಮಕ್ಕಳ ಮಾರಾಟ ದಂಧೆ ಈಗಾಗಲೇ ಸಾಕಷ್ಟು ಕಡೆ ನಡೆದಿದೆ. ಈ ನಿಟ್ಟಿನಲ್ಲಿ ಮಾನವ ಸಾಗಾಣಿಕೆ ಬಗ್ಗೆ ಪೊಲೀಸ್ ಇಲಾಖೆ ಜೊತೆ ಸಾರ್ವಜನಿಕರು ಕೈ ಜೋಡಿಸಿ ಈ ಕ್ರೈಮ್ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿವೃದ್ದಿ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿದ್ಧಗಂಗಾ ರೋಟರಿ ಸಂಸ್ಥೆ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ಮಾನವ ಕಳ್ಳ ಸಾಗಾಣಿಕೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಕೂಡ ಒಂದಾಗಿದೆ. ಮಕ್ಕಳ ಹಕ್ಕು ಕಸಿದು ದುಡಿಮೆ ಮಾಡಿಸಲು ಊರಿಂದ ಊರಿಗೆ ಕರೆ ತರುವ ಸಾಗಾಣಿಕೆ ನಡೆಯುತ್ತಿದೆ. ಮಾನವ ಕಳ್ಳ ಸಾಗಾಣಿಕೆ ದಂಧೆಯ ಒಂದು ಭಾಗವಾದ ಬಾಲ ಕಾರ್ಮಿಕರ ಬಗ್ಗೆ ಸಹ ನಾವು ಸೂಕ್ಷ್ಮವಾಗಿ ಅಧ್ಯಯನ ನಡೆಸಿ ದಂಧೆಗೆ ಕಡಿವಾಣ ಹಾಕಲು ಪ್ರಯತ್ನ ನಡೆಸಿದ್ದೇವೆ ಎಂದು ತಿಳಿಸಿದರು.

ಸಿದ್ದಗಂಗಾ ರೋಟರಿ ಸಂಸ್ಥೆ ಸದಸ್ಯ ಶಿವರಾಜ್ ಮಾತನಾಡಿ ಚಿನ್ನಾಭರಣ, ಹಣ ಸೇರಿದಂತೆ ಇನ್ನಿತರ ವಸ್ತುಗಳ ಕಳ್ಳತನ ನಡೆದ ಈ ಸಮಾಜದಲ್ಲಿ ಮಾನವ ಕಳ್ಳ ಸಾಗಾಣಿಕೆ ಈಗ ದೊಡ್ಡ ಮಾರಕವಾಗಿದೆ. ಮಾನವ ಹಕ್ಕು ಉಲ್ಲಂಘನೆ ಜೊತೆಗೆ ಅಕ್ರಮ ದಂಧೆಗೆ ಮೂಲವಾದ ಈ ಸಾಗಾಣಿಕೆ ನಿಲ್ಲಿಸಲು ಎಲ್ಲರೂ ಪಣ ತೊಡಬೇಕು ಎಂದರು.

ಈ ಸಂದರ್ಭದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಶ್ವೇತಾ, ಅಭಿವೃದ್ದಿ ಸಂಸ್ಥೆಯ ಹೈದರ್ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...