ಗುಬ್ಬಿ | ಅನುಭವ ಮಂಟಪದ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಬಿ.ಕೋಡಿಹಳ್ಳಿ ಈ.ಕೃಷ್ಣಪ್ಪ

Date:

ಗುಬ್ಬಿ ತಾಲ್ಲೂಕಿನ ಬಡ ಕುಟುಂಬದ ರೈತನ ಮಗನಾಗಿ ಬಸವ ಟಿವಿ ದೃಶ್ಯ ಮಾದ್ಯಮದ ಮೂಲಕ ಸಾಧನೆಗೈದು ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿ ಮೇಘಾಲಯದ ರಾಜ್ಯಪಾಲರಿಂದ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಧಕರು ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಬಿ.ಕೋಡಿಹಳ್ಳಿಯ ಈ.ಕೃಷ್ಣಪ್ಪ ಎಂಬುದು ಹೆಮ್ಮೆಯ ವಿಷಯವಾಗಿದೆ.

ತಾಲ್ಲೂಕಿನ ಕಡಬ ಹೋಬಳಿಯ ಬಿ.ಕೋಡಿಹಳ್ಳಿಯ ಈರಯ್ಯ ಮತ್ತು ಗಂಗಮ್ಮ ಎಂಬ ದಂಪತಿಯ ಪುತ್ರನಾಗಿ ಜನಿಸಿ ನಾಡು ನುಡಿ ಭಾಷೆ ಇನ್ನಿತರ ವಿಷಯಗಳಲ್ಲಿ ಆಸಕ್ತಿ ಹೊಂದಿದ ಇವರು ಅರ್ಥಪೂರ್ಣ ಬದುಕಿನ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸ್ವಂತ ಆಸ್ತಿಯನ್ನೇ ಮಾರಿಕೊಂಡು ಸಮಾಜದ ದ್ಯೆಯೋದ್ದೇಶಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಬಸವ ಟಿವಿ ಎಂಬ ದೃಶ್ಯ ಮಾದ್ಯಮದ ಸಂಸ್ಥಾಪಕರಾಗಿ ಹಗಲಿರುಳು ಸಮಾಜಕ್ಕೆ ದುಡಿದ ಇವರನ್ನು ಮತ್ತು ಇವರ ಸಾಧನೆಯನ್ನು ಗುರುತಿಸಿ ಘನವೆತ್ತ ರಾಜ್ಯಪಾಲರಿಂದ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ 45 ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದಲ್ಲಿ ನಾಲ್ವರು ಗಣ್ಯರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು ಬೆಂಗಳೂರಿನ ಡಾ.ಕೆ.ಎಸ್ ರಾಜಣ್ಣ ನವರಿಗೆ ಅನುಭವ ಮಂಟಪದ ರಾಷ್ಟ್ರೀಯ ಪ್ರಶಸ್ತಿ, ಬೆಂಗಳೂರು ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರಿಗೆ ಡಾ.ಎಂ.ಎಂ ಕಲಬುರ್ಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿ, ಮಹಾರಾಷ್ಟ್ರ ಬಸವ ಪರಿಷತ್ ನ ರಾಜ್ಯಾಧ್ಯಕ್ಷರಾದ ಬಿ.ಎಂ ಪಾಟೀಲ್ ಗೆ ಬಸವ ಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿ, ಹಾಗೂ ಗುಬ್ಬಿ ತಾಲ್ಲೂಕಿನ ಬಸವ ಟಿವಿ ಸಂಸ್ಥಾಪಕರಾದ ಈ.ಕೃಷ್ಣಪ್ಪ ಅವರಿಗೆ ಅನುಭವ ಮಂಟಪದ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಸ್ತಿ ಪಡೆದ ಈ.ಕೃಷ್ಣಪ್ಪ ಸುದ್ದಿಗಾರರ ಜತೆ ಮಾತನಾಡಿ ಸಮಾಜ ಸೇವಾಕಾರ್ಯವನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ನಡೆಸಿಕೊಂಡು ಬಂದಿದ್ದೇವೆ. ಮಾಧ್ಯಮ ಮೂಲಕ ವಿನೂತನ ಸಮಾಜ ಕೆಲಸ ಮಾಡುವ ನಿಟ್ಟಿನಲ್ಲಿ ಬಸವ ಟಿವಿ ಸಂಸ್ಥಾಪಕರಾಗಿ ಸೇವೆ ಮಾಡಿದ್ದೇವೆ. ಬಡ ಮಧ್ಯಮ ವರ್ಗದ ಪರ ನಿಂತು ಜಾತ್ಯತೀತ ಕೆಲಸ ಮಾಡಿದ್ದರ ಫಲ ಅನುಭವ ಮಂಟಪ ಗುರುತಿಸಿ ಪ್ರಶಸ್ತಿ ನೀಡಿ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...