ಗುಬ್ಬಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನಲೆ 90 ಕಿಮೀ ಬೃಹತ್ ಮಾನವ ಸರಪಳಿಗೆ ಸಾರ್ವಜನಿಕರ ಸಹಕಾರ ಅಗತ್ಯ: ತಹಶೀಲ್ದಾರ್ ಬಿ.ಆರತಿ

Date:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆ.15 ರಂದು ಬೃಹತ್ ಮಾನವ ಸರಪಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಕರೆ ನೀಡಿರುವ ಹಿನ್ನಲೆ ತಾಲ್ಲೂಕಿನ ಸಾರ್ವಜನಿಕರ ಸಂಪೂರ್ಣ ಸಹಕಾರ ಅಗತ್ಯವಿದೆ ಎಂದು ತಹಶೀಲ್ದಾರ್ ಬಿ.ಆರತಿ ಮನವಿ ಮಾಡಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಶಿರಾ ತಾಲ್ಲೂಕು ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲ್ಲೂಕು ನಂದಿಹಳ್ಳಿ ಗ್ರಾಮದವರೆಗೆ 90 ಕಿಮೀ ದೂರ ಮಾನವ ಸರಪಳಿ ನಿರ್ಮಿಸಿ ಪ್ರಜಾ ಪ್ರಭುತ್ವ ಬಗ್ಗೆ ಜಾಗೃತಿ, ಎಲ್ಲರಿಗೂ ಪರಿಚಯ ಮಾಡುವ ನಿಟ್ಟಿನಲ್ಲಿ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಒಟ್ಟು 90 ಕಿಮೀ ಮಾನವ ಸರಪಳಿಗೆ ಒಂದು ಕಿಮೀಗೆ ಒಂದು ಸಾವಿರ ಮಂದಿ ಲೆಕ್ಕದಲ್ಲಿ ಒಟ್ಟು 90 ಸಾವಿರ ಮಂದಿ ಸೇರಿಸುವ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿಗೆ ನೀಡಿರುವ ಸೂಚನೆಯಂತೆ ಗುಬ್ಬಿ ತಾಲ್ಲೂಕು ಮೂಲಕ ನಿರೀಕ್ಷೆಗಿಂತ ಹೆಚ್ಚು ಜನರನ್ನು ಕರೆದೊಯ್ಯಲು ನಿರ್ಧರಿಸಲಾಗಿದೆ. ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳನ್ನು ಸಭೆಗೆ ಆಹ್ವಾನಿಸಿ ಸಾರ್ವಜನಿಕ ಕಾರ್ಯಕ್ರಮ ಯಶಸ್ವಿಗೆ ಮನವಿ ಮಾಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಪಂ ಇಓ ಶಿವಪ್ರಕಾಶ್ ಮಾತನಾಡಿ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರು ಮಂದಿಯಂತೆ ಸಾರ್ವಜನಿಕರನ್ನು ಆಯಾ ಪಂಚಾಯಿತಿಯಿಂದ ನೇರ ನಿಗದಿತ ಸ್ಥಳಕ್ಕೆ ಕರೆದೊಯ್ಯುವುದು. ಕಾರ್ಯಕ್ರಮ ಮುಗಿದ ಬಳಿಕ ಮರಳಿ ಆಯಾ ಪಂಚಾಯಿತಿಗೆ ಕರೆತರುವ ಜವಾಬ್ದಾರಿಯನ್ನು ಸಮಿತಿ ನಿರ್ವಹಿಸಲಿದೆ ಎಂದ ಅವರು ಪಟ್ಟಣದಲ್ಲಿ ಸಹ ಎರಡು ಬಸ್ಸು ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ವೀಣಾ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದುಮಾಧವ, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಇಂದ್ರೇಶ್ ಸೇರಿದಂತೆ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...