ಗುಬ್ಬಿ | ಎಸ್ಸಿ ಎಸ್ಟಿ ಸೌಲಭ್ಯ ಬೇರೆಯವರ ಪಾಲಾಗುತ್ತಿರುವ ಬಗ್ಗೆ ಎಚ್ಚರವಹಿಸಿ : ಪಹಣಿ ನೀಡುವ ಮುಗ್ಧ ದಲಿತರಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಕಿವಿ ಮಾತು

Date:

ಸರ್ಕಾರ ದಲಿತರ ಅಭಿವೃದ್ಧಿಗೆ ಹಲವು ಇಲಾಖೆಯ ಮೂಲಕ ಸಬ್ಸಿಡಿ ಹಾಗೂ ಉಚಿತ ಸೌಲಭ್ಯ ಒದಗಿಸುತ್ತದೆ. ಆದರೆ ವಾಸ್ತವದಲ್ಲಿ ಇತರರು ಗ್ರಾಮೀಣ ಮುಗ್ಧ ದಲಿತರ ಪಹಣಿ ಬಳಸಿ ಉಚಿತ ಹಾಗೂ ಸಬ್ಸಿಡಿ ಸೌಲಭ್ಯ ಪಡೆದುಕೊಳ್ಳುವ ಬಗ್ಗೆ ದಲಿತ ಮುಖಂಡರು ನಿಗಾ ವಹಿಸಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಕಿವಿ ಮಾತು ಹೇಳಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ನೀಡುವ ಯೋಜನೆ, ಕಾರ್ಯಕ್ರಮ ಬಗ್ಗೆ ಮಾಹಿತಿ ತಿಳಿಯದ ಗ್ರಾಮೀಣ ದಲಿತರಿಗೆ ಮಾಹಿತಿ ಒದಗಿಸಿ ಅನುಕೂಲ ಮಾಡಿಕೊಡುವ ಕೆಲಸ ಮುಖಂಡರು ಮಾಡಬೇಕು. ಬಡ ದಲಿತರ ಏಳಿಗೆಗೆ ಶ್ರಮಿಸುವ ಕೆಲಸಕ್ಕೆ ಯಾವ ಸಮಯದಲ್ಲಿ ಬಂದರೂ ನಾನು ಸಿದ್ದನಿರುತ್ತೇನೆ ಎಂದು ಕರೆ ನೀಡಿದರು.

ಪೊಲೀಸರು ದಲಿತರ ದೂರು ಬಂದಲ್ಲಿ ತಾರತಮ್ಯ ಮಾಡುತ್ತಾರೆ ಎಂಬ ವಿಚಾರದಿಂದ ಸಭೆ ಆರಂಭವಾಯಿತು. ನಂತರ ಹೋಬಳಿವಾರು ಕೆಲ ಇಲಾಖಾಧಿಕಾರಿಗಳು ಜನರಿಗೆ ಸಿಗುತ್ತಿಲ್ಲ ಎಂಬ ದೂರು ಕೇಳಿಬಂತು. ತಕ್ಷಣ ಶಾಸಕರು ಹೋಬಳಿ ಮಟ್ಟದ ಅಧಿಕಾರಿಗಳು ಆಯಾ ಕಚೇರಿಯಲ್ಲಿ ಬೆಳಿಗ್ಗೆ ಸಮಯದಲ್ಲಿ ನಿಗದಿತವಾಗಿ ಸಾರ್ವಜನಿಕರ ಅಹವಾಲು ನೋಡಬೇಕು ಎಂದು ಸೂಚಿಸಿದರು. ಸರ್ಕಾರದ ದಲಿತ ಪರ ಯೋಜನೆಗಳ ಬಗ್ಗೆ ಸೂಚನಾ ಫಲಕದಲ್ಲಿ ಪ್ರಕಟಿಸಿ ಮಾಧ್ಯಮ ಮೂಲಕ ಜಾಹೀರಾತು ನೀಡಲು ಕೆಲ ಇಲಾಖೆಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಒತ್ತುವರಿ, ಗೋಮಾಳ ಹಕ್ಕುಪತ್ರ, ವಿದ್ಯುತ್ ಟಿಸಿ ಅಳವಡಿಕೆ, ಜಮೀನು ವಿವಾದ ಹೀಗೆ ಹಲವು ವಿಚಾರ ಅರ್ಜೀವಾರು ಚರ್ಚೆ ನಡೆಸಲಾಯಿತು. ಈ ಮಧ್ಯೆ ರಸ್ತೆ ಬದಿ ಉಳುಮೆ ಮಾಡುವವರ ವಿರುದ್ಧ ಕ್ರಮಕ್ಕೆ ಇಂಜಿನಿಯರ್ ಗಳಿಗೆ ತಿಳಿಸಿದರು. ದಲಿತ ಮಕ್ಕಳ ಶಿಕ್ಷಣಕ್ಕೆ ಗ್ರಾಮ ಪಂಚಾಯಿತಿ ಮೂಲಕ ಆರ್ಥಿಕ ನೆರವು ನೀಡಲು ಕೆಲ ಕಾರ್ಯಕ್ರಮ ಹಣ ಬಳಕೆ ಮಾಡಲಾಗುತ್ತಿದೆ. ಶಿಕ್ಷಣಕ್ಕೆ ಮೊದಲ ಆದ್ಯತೆ ಮೇರೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮೀಸಲು ಹಣ ಬಳಕೆ ಮಾಡಲಾಗಿದೆ ಎಂದರು.

ಸರ್ಕಾರದ ಸಾಲ ಸೌಲಭ್ಯ ಒದಗಿಸುವ ಬ್ಯಾಂಕ್ ಅಧಿಕಾರಿಗಳ ನಡವಳಿಕೆ ಬಗ್ಗೆ ಸುಧೀರ್ಘ ಚರ್ಚೆ ನಡೆದು ಎಲ್ಲಾ ದಾಖಲಾತಿ ಪಡೆದು ಕೊನೆಯಲ್ಲಿ ನಿಮ್ಮ ಸಿಬಿಲ್ ಸ್ಕೋರ್ ಬಂದಿಲ್ಲ ಎನ್ನುತ್ತಾರೆ. ಇದು ಖಂಡನೀಯ ಎಂದು ಮುಖಂಡರು ಒಕ್ಕೊರಲಿನ ಖಂಡನೆ ವ್ಯಕ್ತ ಪಡಿಸಿದರು. ನಂತರ ಉತ್ತರಿಸಿದ ಶಾಸಕರು ಈ ಗಂಭೀರ ಸಮಸ್ಯೆ ಜಿಲ್ಲಾ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಶೀಘ್ರದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸುವ ಭರವಸೆ ನೀಡಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಹಣ ಬೇಡಿಕೆ ಬಗ್ಗೆ, ಪಂಚಾಯಿತಿ ಖಾತೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ತಾಲ್ಲೂಕು ಕಚೇರಿ ಮುಂದೆ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒಕ್ಕೊರಲಿನ ಬೇಡಿಕೆ ಘೋಷಣೆ ಮಾಡುವ ಮೂಲಕ ಕೇಳಿದರು. ಸರ್ಕಾರದ ವೆಚ್ಚದಲ್ಲಿ ಈ ಕಾರ್ಯಕ್ರಮ ಮಾಡಲಾಗದು. ಮುಖಂಡರು ಒಗ್ಗೂಡಿ ಪುತ್ಥಳಿ ಸಿದ್ಧಪಡಿಸಿದರೆ ಸೂಕ್ತ ಸ್ಥಳದಲ್ಲಿ ಅನಾವರಣ ಮಾಡುವ ಭರವಸೆ ನೀಡಿದರು. ಹಲವು ಸಮಸ್ಯೆಗೆ ಖುದ್ದು ಭೇಟಿ ನೀಡಿ ಬಗೆಹರಿಸುವ ಭರವಸೆ ಜೊತೆಗೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿಯೇ ಸೂಕ್ತ ಪರಿಹಾರ ಕಂಡುಕೊಳ್ಳಲು ಸೂಚಿಸಿದರು.

WhatsApp Image 2024 08 28 at 6.46.13 PM

ದಲಿತರ ಕುಂದು ಕೊರತೆಗಳ ಸಭೆಗೆ ತಟ್ಟಿದ ಪ್ರತಿಭಟನೆ ಬಿಸಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆಯ ಆರಂಭಕ್ಕೆ ಮುನ್ನ ತಾಲ್ಲೂಕು ಪಂಚಾಯಿತಿ ಸಭಾಂಗಣದ ಮುಂದೆ ಪ್ರತಿಭಟನೆಯನ್ನು ನಡೆಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮುಂದೆ ಇ ಸ್ವತ್ತು ಮಾಡುವ ವಿಚಾರದಲ್ಲಿ ಪಿಡಿಓ ವಿಳಂಬ ಅನುಸರಿಸುತ್ತಿರುವುದು ಹಾಗೂ ಹಕ್ಕುಪತ್ರ ವಿತರಣೆ ಮಾಡುತ್ತಿಲ್ಲ ಎಂಬ ವಿಚಾರ ಕುರಿತು ಮುಖಂಡರು ಧರಣಿ ಕುಳಿತರು. ಕೊಪ್ಪ ಗ್ರಾಮ ಪಂಚಾಯಿತಿ ಪಿಡಿಓ ದಲಿತರ ವಿರೋಧಿ ಎಂದು ದೂರಿದರು. ನಂತರ ಸ್ಥಳಕ್ಕೆ ತಹಶೀಲ್ದಾರ್ ಆರತಿ ಹಾಗೂ ತಾಪಂ ಇಓ ಶಿವಪ್ರಕಾಶ್ ಆಗಮಿಸಿ ಹದಿನೈದು ದಿನದಲ್ಲಿ ಕಾನೂನು ರೀತಿ ಕ್ರಮ ವಹಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ಸಭೆಯಲ್ಲಿ ತಹಶೀಲ್ದಾರ್ ಬಿ.ಆರತಿ, ತಾಪಂ ಇಓ ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕರಾದ ವೀಣಾ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...