ಗುಬ್ಬಿ | ಬೆಲವತ್ತ ಗ್ರಾಪಂ ಅಧ್ಯಕ್ಷರಾಗಿ ಬಿ.ಜಿ.ಲತಾ ದಯಾನಂದ್, ಉಪಾಧ್ಯಕ್ಷರಾಗಿ ಪಿ.ಎಸ್.ಆನಂದ್ ಕುಮಾರ್ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಬೆಲವತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿ.ಜಿ.ಲತಾ ದಯಾನಂದ್ ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್.ಆನಂದ್ ಕುಮಾರ್ ಅವಿರೋಧ ಆಯ್ಕೆಯಾದರು.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮುತ್ತುರಾಜ್ ನಡೆಸಿಕೊಟ್ಟರು. ಈ ಹಿಂದೆ ಅಧ್ಯಕ್ಷರಾಗಿದ್ದ ಶಿವಗಂಗಮ್ಮ ಹಾಗೂ ಉಪಾಧ್ಯಕ್ಷರಾಗಿದ್ದ ಕೆ.ಟಿ.ಸ್ವಾಮಿ ನೀಡಿದ ರಾಜೀನಾಮೆ ಹಿನ್ನಲೆಯಲ್ಲಿ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.

ಸಾಮಾನ್ಯ ಮಹಿಳೆ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಲತಾ ದಯಾನಂದ್ ಹಾಗೂ ಸಾಮಾನ್ಯ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಆನಂದ್ ಕುಮಾರ್ ನಾಮಪತ್ರ ಸಲ್ಲಿಸಿದರು. ಏಕೈಕ ನಾಮಪತ್ರ ಹಿನ್ನಲೆ ಎರಡೂ ಸ್ಥಾನಗಳ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲತಾ ದಯಾನಂದ್ ಮಾತನಾಡಿ ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವ ಜೊತೆಗೆ ಸರ್ಕಾರದ ಕಾರ್ಯಕ್ರಮವನ್ನು ಜಾರಿ ಮಾಡಿ ಅರ್ಹ ಫಲಾನುಭವಿಗಳಿಗೆ ನೀಡುತ್ತೇವೆ. ಕುಡಿಯುವ ನೀರು, ರಸ್ತೆ, ಬೀದಿ ದೀಪ ಜೊತೆಗೆ ಸಾಮಾಜಿಕ ಬದ್ಧತೆಯಲ್ಲಿ ಅಭಿವೃದ್ದಿ ಕೆಲಸ ಮಾಡುತ್ತೇವೆ. ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಒಗ್ಗೂಡಿ ಶ್ರಮಿಸುವುದಾಗಿ ತಿಳಿಸಿದರು.

ನೂತನ ಉಪಾಧ್ಯಕ್ಷ ಆನಂದ್ ಕುಮಾರ್ ಮಾತನಾಡಿ ರಾಜ್ಯ ಹೆದ್ದಾರಿ ಮೈಸೂರು ರಸ್ತೆಯಲ್ಲಿ ಇರುವ ಬೆಲವತ್ತ ಗ್ರಾಮ ಪಂಚಾಯಿತಿ ಮಾದರಿ ಪಂಚಾಯಿತಿ ಎನಿಸಿಕೊಳ್ಳುವ ರೀತಿ ಕೆಲಸ ಮಾಡುತ್ತೇವೆ. ಅಭಿವೃದ್ದಿ ವಿಚಾರದಲ್ಲಿ ಒಕ್ಕೊರಲಿನ ಅಭಿಪ್ರಾಯ ಹಾಗೂ ಸ್ಥಳೀಯ ಎಲ್ಲಾ ಮುಖಂಡರ ಮಾರ್ಗದರ್ಶನದಲ್ಲಿ ಗ್ರಾಮೀಣ ಅಭಿವೃದ್ಧಿ ಮಾಡುತ್ತೇವೆ. ಸರ್ಕಾರದಿಂದ ಬರುವ ಅನುದಾನವನ್ನು ಸಹ ಎಲ್ಲಾ ವಾರ್ಡ್ ಗಳಿಗೆ ಆಯಾ ಸದಸ್ಯರ ಮೂಲಕ ಅವಶ್ಯ ಕೆಲಸ ಮೊದಲು ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ವಿ ಎಸ್ ಎಸ್ ಎನ್ ಅಧ್ಯಕ್ಷ ವಸಂತ್ ಕುಮಾರ್, ಮಂಡಿ ಬಾಬಣ್ಣ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ, ಜಿಪಂ ಮಾಜಿ ಸದಸ್ಯ ಚಂದ್ರಶೇಖರಬಾಬು, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಜಗದೀಶ್, ಸ್ಥಳೀಯ ಮುಖಂಡರಾದ ಶಿವಕುಮಾರ್, ರಾಮೇಗೌಡ, ಭೀಮೇಶ್, ವಕೀಲ ರಮೇಶ್ ಸೇರಿದಂತೆ ಎಲ್ಲಾ ಗ್ರಾಪಂ ಸದಸ್ಯರು ಹಾಜರಿದ್ದರು.

ವರದಿ – ಎಸ್. ಕೆ. ರಾಘವೇಂದ್ರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...