ಗುಬ್ಬಿ | ಬಿಕ್ಕೇಗುಡ್ಡ ಯೋಜನೆಯೂ ಶೀಘ್ರದಲ್ಲಿ ಪೂರ್ಣ: ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ

Date:

ಬಿಕ್ಕೇಗುಡ್ಡ ಕುಡಿಯುವ ನೀರಿನ ಯೋಜನೆ ಶೇಕಡಾ 80 ರಷ್ಟು ಕೆಲಸ ನಡೆದಿದ್ದು ಭೂಮಿ ವಶಕ್ಕೆ ಹಾಗೂ ಪರಿಹಾರ ಒದಗಿಸುವಲ್ಲಿ ಕೆಲ ಸಮಸ್ಯೆ ಕಂಡು ಎಲ್ಲವೂ ಬಗೆಹರಿದಿದೆ. ಗುತ್ತಿಗೆದಾರರಿಗೆ ಹೆಚ್ಚುವರಿ ಎರಡು ಕೋಟಿ ಬಿಡುಗಡೆ ಮಾಡಿ ಕೆಲಸ ನಡೆದಿದೆ. ವಿಶೇಷ ಪೈಪ್ ಗಳು ಹೈದರಾಬಾದ್ ನಿಂದ ತಂದು ಕೆಲಸ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ ನೀಡಿದರು.

ತಾಲ್ಲೂಕಿನ ಎಂ.ಎಚ್.ಪಟ್ಟಣ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 7 ಕೋಟಿ ಅನುದಾನದ ಮಣ್ಣಮ್ಮದೇವಿ ದೇವಸ್ಥಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಹಾಗಲವಾಡಿ ಕೆರೆಗೆ ನೀರು ಹರಿಸುವ ಕಾಮಗಾರಿ ಸಹ ಅಂತಿಮ ಸ್ವರೂಪದಲ್ಲಿದೆ. ಇಬ್ಬರು ರೈತರ ಸಮಸ್ಯೆಯನ್ನು ಸ್ಥಳಕ್ಕೆ ತೆರಳಿ ಬಗೆಹರಿಸಿ ಈ ವರ್ಷದಲ್ಲಿ ಹಾಗಲವಾಡಿ ಕೆರೆಗೆ ನೀರು ಹರಿಸಲಾಗುವುದು. ಒಟ್ಟಾರೆ ಪ್ರಮುಖ ಮೂರು ನೀರಾವರಿ ಯೋಜನೆ ಈ ವರ್ಷದಲ್ಲಿ ಪೂರ್ಣಗೊಂಡು ನೀರು ಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೇಮಾವತಿ ಲಿಂಕ್ ಕೆನಾಲ್ ವಿರೋಧದ ಹೋರಾಟಕ್ಕೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ತಾರ್ಕಿಕ ಅಂತ್ಯ ಕಾಣಿಸಲಿದ್ದಾರೆ. ನಾನು ಸಹ ಇಬ್ಬರ ಬಳಿ ಚರ್ಚೆ ನಡೆಸಿ ಮುಖ್ಯ ನಾಲೆ ಅಗಲೀಕರಣ ಮಾಡಿ ಕುಣಿಗಲ್ ಕೆರೆಗೆ ನೀರು ಹರಿಸಿಕೊಳ್ಳಲು ಪ್ರಸ್ತಾಪ ಮಾಡಿದ್ದೇನೆ ಎಂದ ಅವರು ಸಂಸದರು ನನ್ನ ಜೊತೆ ಎರಡು ಬಾರಿ ಮಾತನಾಡಿದ್ದಾರೆ. ಇದೇ ತಿಂಗಳ 30 ರ ಸಭೆ ಮುಂದೂಡಲು ತಿಳಿಸಿದ್ದರು. ಜುಲೈ 4 ರಂದು ಸಭೆ ಆಯೋಜನೆಗೆ ಹೇಳಿದ್ದರು. ಆದರೆ ನಾನು ಸಹ ಪ್ರವಾಸ ತೆರಳುವ ಕಾರ್ಯಕ್ರಮ ಇದೆ. ಒಟ್ಟಾರೆ ಸಭೆ ನಡೆಸಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಐದು ದಿನದ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೇಮಾವತಿ ಹೋರಾಟ ವಿಚಾರ ಪ್ರಸ್ತಾಪಿಸಿದ್ದೇನೆ. ಉಪ ಮುಖ್ಯಮಂತ್ರಿಗಳಿಗೆ ಇಲ್ಲಿನ ವಾಸ್ತವ ಚಿತ್ರಣ ತಾಲ್ಲೂಕಿಗೆ ಬಂದಾಗ ವಿವರಿಸಿದ್ದೇನೆ. ಒಮ್ಮತದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದ ಅವರು ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ. ನಾನು ಪಕ್ಷದ ಚೌಕಟ್ಟಿನಲ್ಲಿ ಅಷ್ಟೇ ಮಾತನಾಡುತ್ತೇನೆ. ಮಾಧ್ಯಮ ಜೊತೆ ಚರ್ಚಿಸುವ ಅಗತ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡುವ ಮಟ್ಟಕ್ಕೆ ನಾನಿಲ್ಲ. ಪಕ್ಷ ಹೇಳಿದಷ್ಟೇ ಕೆಲಸ ಮಾಡುತ್ತೇನೆ ಅಷ್ಟೇ ಎಂದ ಅವರು ತಾಲ್ಲೂಕಿನಲ್ಲಿ ಅಭಿವೃದ್ದಿ ಕೆಲಸ ಈಗಾಗಲೇ 200 ಕೋಟಿ ಚಾಲನೆಯಲ್ಲಿದೆ. ಇನ್ನೂ ಅನೇಕ ಕೆಲಸಗಳ ಪೂಜೆ ಕಾರ್ಯ ನಿರಂತರ ನಡೆಯಲಿದೆ. ಕೆಲಸ ಮಾಡಿಲ್ಲ ಎನ್ನುವವರು ಇವೆಲ್ಲವನ್ನೂ ನೋಡಬೇಕು ಎಂದರು.

ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಯ್ಯ, ಗ್ರಾಪಂ ಅಧ್ಯಕ್ಷ ಯೋಗೀಶ್, ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ನಾಗೇಶ್, ರಾಮಕ್ಕ, ಬೋರಯ್ಯ, ಹನುಮಕ್ಕ, ಅನಿತಾ, ಗೌಡಣ್ಣ, ನೇಮರಾಜ್, ಲೋಕೋಪಯೋಗಿ ಇಲಾಖೆ ಎಇಇ ಯೋಗೀಶ್, ಗುತ್ತಿಗೆದಾರ ಅಶೋಕ್, ಪಿಡಿಓ ಶೇಖರ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...