ಗುಬ್ಬಿ | ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ.ಪರಮಶಿವಯ್ಯ ಉಪಾಧ್ಯಕ್ಷರಾಗಿ ಟಿ.ಎಸ್.ಕಿರಣ್ ಕುಮಾರ್ ಅವಿರೋಧ ಆಯ್ಕೆ

Date:

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬೊಮ್ಮರಸನಹಳ್ಳಿ ಬಿ.ಕೆ.ಪರಮಶಿವಯ್ಯ ಅಧ್ಯಕ್ಷರಾಗಿ ಹಾಗೂ ತೆವಡೇಹಳ್ಳಿಯ ಟಿ.ಎಸ್. ಕಿರಣ್ ಕುಮಾರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

ಪಿಎಲ್ ಡಿ ಬ್ಯಾಂಕ್ ಆವರಣದಲ್ಲಿ ನಡೆದ ಚುನಾವಣೆಯನ್ನು ಸಹಕಾರಿ ಇಲಾಖೆಯ ಮಾಲತೇಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲದೆ ಏಕೈಕ ನಾಮಪತ್ರ ಸಲ್ಲಿಕೆಯಾದ ಹಿನ್ನಲೆ ಎರಡೂ ಸ್ಥಾನವನ್ನು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಮರು ಆಯ್ಕೆಯಾದ ನೂತನ ಅಧ್ಯಕ್ಷ ಬಿ.ಕೆ.ಪರಮಶಿವಯ್ಯ ಮಾತನಾಡಿ ಅವರು ಸುದ್ದಿಗಾರರ ಜೊತೆ ಮಾತನಾಡಿ ಕೃಷಿಕರ ಪರ ಕೆಲಸ ಮಾಡುವ ಪಿಎಲ್ ಡಿ ಬ್ಯಾಂಕ್ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ನಿರ್ದೇಶಕರ ಜೊತೆ ಶ್ರಮಿಸುತ್ತೇವೆ. ಕಳೆದ 34 ವರ್ಷದಿಂದ ಈ ಬ್ಯಾಂಕ್ ಆಡಳಿತ ಮಂಡಳಿಯಲ್ಲಿದ್ದು ರೈತಪರ ಕೆಲಸ ಮಾಡಿದ್ದೇನೆ. ದುಸ್ಥಿತಿಯ ಕಂಡ ಸಮಯದಲ್ಲಿ ಬ್ಯಾಂಕ್ ಚೇತರಿಸಿ ಈಗ ಉನ್ನತ ಸ್ಥಿತಿಯತ್ತ ಸಾಗಿದೆ. ರಾಜ್ಯ ನಿರ್ದೇಶಕರಾಗಿ ಕೂಡಾ ಕೆಲಸ ಮಾಡುವ ಅವಕಾಶ ಸಿಕ್ಕ ಹಿನ್ನಲೆ ರೈತರ ಕೃಷಿ ಅನುಕೂಲಕ್ಕೆ ಕೆಲಸ ಮಾಡುತ್ತೇವೆ ಎಂದ ಅವರು ರಾಜಕಾರಣಿಗಳ ಸಾಲಮನ್ನಾ ಹೇಳಿಕೆ ಮರುಪಾವತಿಗೆ ಹೊಡೆತ ತಂದಿದೆ. ಈಗ ನಮ್ಮ ಬ್ಯಾಂಕ್ ಶೇಕಡಾ 87 ರಷ್ಟು ಮರುಪಾವತಿ ಮಾಡಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ಎಲ್ಲಾ ಸದಸ್ಯರ ಮಾರ್ಗದರ್ಶನದಲ್ಲಿ ಬ್ಯಾಂಕ್ ಮುನ್ನೆಡೆಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಉಪಾಧ್ಯಕ್ಷ ಟಿ.ಎಸ್.ಕಿರಣ್ ಕುಮಾರ್ ಮಾತನಾಡಿ ಅವಿರೋಧ ಆಯ್ಕೆ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಈ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಬ್ಯಾಂಕ್ ಬೆಳೆಸುವ ಕೆಲಸ ಮಾಡುತ್ತೇವೆ. ಕೃಷಿ ಸಾಲ ನೀಡುತ್ತಾ ಬ್ಯಾಂಕ್ ರೈತರ ಪರ ಕೆಲಸ ಮಾಡಲಿದೆ. ಸಹಕಾರಿ ಕ್ಷೇತ್ರದಲ್ಲಿ ಪಿಎಲ್ ಡಿ ಬ್ಯಾಂಕ್ ಹೆಸರು ಉಳಿಸುವ ಕೆಲಸ ಎಲ್ಲರ ಜೊತೆಗೂಡಿ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾರನಹಳ್ಳಿ ಪ್ರಭಣ್ಣ, ನಾಮ ನಿರ್ದೇಶಿತ ಸದಸ್ಯ ಎಂವಿ.ಶ್ರೀನಿವಾಸಯ್ಯ, ಬ್ಯಾಂಕ್ ನಿರ್ದೇಶಕರಾದ ನಂಜೇಗೌಡ, ಎಸ್.ಎಲ್.ನರಸಿಂಹಯ್ಯ, ಎನ್.ಲಕ್ಷ್ಮೀ, ಬುಕ್ಕಸಾಗರ ಮಹದೇವಯ್ಯ, ಸುಧಾಮಣಿ, ರಾಜಕುಮಾರ್, ಸಂತೋಷ್, ದೇವರಾಜ್, ಸೋಮಶೇಖರ್, ಪ್ರಮೋದ್, ನರಸಿಂಹಯ್ಯ, ಪ್ರಕಾಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...