ಗುಬ್ಬಿ | ನಿಟ್ಟೂರು ಹೋಬಳಿ ರೈತರಿಂದ ಬೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ : ಕಚೇರಿಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ

Date:

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೇವಲ ಒಂದು ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಅಧಿಕಾರಿಗಳು ರೈತರಿಗೆ ಉಡಾಫೆ ಉತ್ತರ ನೀಡುತ್ತಾರೆ. ಕೇಳಿದರೆ ನಿಮ್ಮ ಹಣೆ ಬರಹ ಎನ್ನುವ ಎಕ್ಸಿಕ್ಯೂಟಿವ್ ಇಂಜಿನಿಯರ್ ಸೇರಿದಂತೆ ಎಲ್ಲಾ ಅಧಿಕಾರಿಗಳನ್ನು ಸೋಮವಾರ ನಿಟ್ಟೂರು ಕಚೇರಿ ಸ್ಥಳದಲ್ಲೇ ದಿಗ್ಬಂಧನ ಹಾಕಿದ ನಿಟ್ಟೂರು ಹೋಬಳಿ ರೈತರು ಬೆಸ್ಕಾಂ ಕಚೇರಿ ಬಾಗಿಲು ಹಾಕಿ ದಿಢೀರ್ ಪ್ರತಿಭಟನೆ ನಡೆಸಿದರು.

ನಿರಂತರವಾಗಿ ವಿದ್ಯುತ್ ಕಣ್ಣಾ ಮುಚ್ಚಾಲೆ ಆಡುತ್ತಿದೆ ಎಂದು ಬೆಳಗ್ಗೆ ಕಚೇರಿ ಮುಂದೆ ಜಮಾಯಿಸಿದ ನೂರಾರು ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಎಇಇ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸ್ಥಳದಲ್ಲೇ ಪರಿಹಾರ ನೀಡದೇ ತೆರಳುವಂತಿಲ್ಲ ಎಂದು ಸುಮಾರು ಮೂರು ಗಂಟೆಗಳ ಕಾಲ ಸುಧೀರ್ಘ ಪ್ರತಿಭಟನೆ ನಡೆಸಿದರು.

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಸರ್ಕಾರವೇ ಏಳು ಗಂಟೆಗಳ ಕಾಲ ವಿದ್ಯುತ್ ನೀಡುವುದಾಗಿ ಬೊಗಳೆ ಬಿಡುತ್ತಲೇ ಇದೆ. ಆದರೆ ವಾಸ್ತವದಲ್ಲಿ ಒಂದು ತಾಸು ತ್ರೀ ಫೇಸ್ ಕರೆಂಟ್ ಬರುತ್ತಿಲ್ಲ. ಬೇಸಿಗೆ ಆರಂಭದಲ್ಲೇ ಈ ರೀತಿ ಕಳ್ಳಾಟ ಆಡುತ್ತಿರುವ ಬೆಸ್ಕಾಂ ಇಲ್ಲಿಯವರೆಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಅದಕ್ಕೆ ಪೂರಕವಾಗಿ ಅಧಿಕಾರಿಗಳು ಕೂಡ ಮನಸೋ ಇಚ್ಛೆ ಕರೆಂಟ್ ನೀಡುತ್ತಿದ್ದು ಅಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಈ ಕೂಡಲೇ ರೈತರಿಗೆ ಕರೆಂಟ್ ನೀಡದಿದ್ದರೆ ಹೆದ್ದಾರಿಗೆ ಇಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿ ರೈತರನ್ನು ಕೆಣಕಿದರೆ ಮುಂದಿನ ಅನಾಹುತಕ್ಕೆ ಬೆಸ್ಕಾಂ ಇಲಾಖೆಯೇ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಳು ಗಂಟೆ ತ್ರೀ ಫೇಸ್ ಕರೆಂಟ್ ಎನ್ನುವ ಅಧಿಕಾರಿಗಳು ಅದರಲ್ಲೇ ಹಳ್ಳಿಗಳಿಗೆ ಮೂರು ನಾಲ್ಕು ಗಂಟೆ ಹಂಚಿ ನಮ್ಮಲ್ಲೇ ಸಂಘರ್ಷ ಹುಟ್ಟು ಹಾಕಿದ್ದಾರೆ. ಬೇಸಿಗೆಯ ಸಮಸ್ಯೆ ಮೊದಲೇ ತಿಳಿದ ಅಧಿಕಾರಿಗಳು ಯಾವುದೇ ಕ್ರಮ ವಹಿಸದೆ ಈಗ ಹೆಂಡತಿಯನ್ನು ಕೆಡವಿ ದಡಿ ಹುಡ್ಕಿದಂತೆ ಎಂಬ ಗಾದೆಯನ್ನು ರುಜುವಾತು ಮಾಡಿದ್ದಾರೆ. ನಮಗೆ ಯಾವುದೇ ಪುಕ್ಕಟೆ ಕರೆಂಟ್ ಬೇಕಿಲ್ಲ. ನಮ್ಮ ಹಕ್ಕಿನ ಕೃಷಿ ನೀರಿಗಾಗಿ ತ್ರೀ ಫೇಸ್ ಕರೆಂಟ್ ನೀವೇ ಹೇಳಿದಂತೆ ಏಳು ಗಂಟೆ ಕ್ರಮ ಬದ್ಧವಾಗಿ ನೀಡಿ ಎಂದು ಒತ್ತಾಯಿಸಿದರು.

1001064940

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ಮಾತನಾಡಿ ಕಳೆದ ಹದಿನೈದು ದಿನಗಳಿಂದ ಬೆಸ್ಕಾಂ ತಾಲ್ಲೂಕಿನ ರೈತರ ಜೀವನ ಜೊತೆ ಚೆಲ್ಲಾಟ ಆಡುತ್ತಿದೆ. ಸಾರ್ವಜನಿಕ ಸೇವೆ ಮಾಡುವಲ್ಲಿ ಅನರ್ಹ ಎನಿಸಿಕೊಂಡ ಈ ಇಲಾಖೆ ರೈತರ ಮೇಲೆ ಆರೋಪ ಮಾಡಿ ಕರೆಂಟ್ ಕದಿಯುತ್ತಾರೆ ಎನ್ನುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಗ್ರಾಮೀಣ ಭಾಗದ ರೈತರ ಕರೆಂಟ್ ಬೇರೆಡೆಗೆ ತೆಗೆದುಕೊಂಡು ಹೋಗುವ ಅಧಿಕಾರಿಗಳು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಆದೇಶ ಪಾಲಿಸುತ್ತಿದ್ದಾರೆ. ಡಿಕೆಶಿ ಅವರು ಜಿಲ್ಲೆಯ ರೈತರ ಜೊತೆ ನೀರು ಮತ್ತು ಕರೆಂಟ್ ಎರಡರಲ್ಲೂ ಆಟವಾಡುತ್ತಿದ್ದಾರೆ. ಸೋಲಾರ್ ಕಂಪೆನಿ ಜೊತೆ ಡೀಲ್ ಮಾಡಿಕೊಂಡು ಈ ರೀತಿ ಸಿಂಗಲ್ ಫೇಸ್ ಕರೆಂಟ್ ಸಹ ನೀಡೋದಿಲ್ಲ ಎಂಬ ಆದೇಶ ಸಹ ಹೊರಡಿಸಿದ್ದಾರೆ ಎಂದು ಆರೋಪಿಸಿದರು.

ಈ ಭಾಗದಲ್ಲಿ 52 ಫೀಡರ್ ಗೆ ಕೇವಲ 9 ಮಂದಿ ಲೈನ್ ಮ್ಯಾನ್ ಇದ್ದಾರೆ. ಲೈನ್ ಕಟ್ಟಾದರೆ ಎರಡು ದಿನ ಬೇಕು ಸರಿಪಡಿಸಲು ಎಂಬುದು ತಿಳಿದ ಸತ್ಯ. ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಎರಡೂ ಒಗ್ಗೂಡಿ ಕೆಲಸ ಮಾಡಬೇಕು. ಆದರೆ ಇಲ್ಲಿ ಬಾಂಧವ್ಯ ಇಲ್ಲವೆಇಲ್ಲ ಎಂದ ಅವರು ಐದು ಬಾರಿ ಗೆದ್ದ ಗುಬ್ಬಿ ಶಾಸಕರು ರೈತರ ಕಷ್ಟ ಆಲಿಸಬೇಕು. ನಿಮ್ಮಲ್ಲಿ ಸ್ವಾಭಿಮಾನ ಇದ್ದರೆ, ಜನರ ಋಣ ನಿಮ್ಮ ಮೇಲಿದ್ದರೆ ಕೂಡಲೇ ಸರ್ಕಾರ ಜೊತೆ ಚರ್ಚಿಸಿ ಕರೆಂಟ್ ವ್ಯವಸ್ಥೆ ಮಾಡಿ. ಬೆಸ್ಕಾಂ ಅಧಿಕಾರಿಗಳನ್ನು ಸಿಂಗಲ್ ಫೇಸ್ ಕೊಡದಿರಲು ಕಾರಣ ಕೇಳಿ ಎಂದು ಸವಾಲೆಸೆದರು.

ನಂತರ ಸ್ಥಳಕ್ಕೆ ಆಗಮಿಸಿದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಶಾಂತ್ ಕೂಡ್ಲಗಿ ಅವರನ್ನು ಸುತ್ತುವರಿದ ರೈತರು ಒಂದು ತಾಸು ಬಿಸಿಲಿನಲ್ಲಿ ಕರೆಂಟ್ ಬಗ್ಗೆ ನಾನಾ ಪ್ರಶ್ನೆ ಕೇಳಿದರು. ಉತ್ತರ ನೀಡಲಾಗದೆ ಕಾಲ್ಕಿತ್ತಿದ್ದ ವೇಳೆ ರೈತರು ದಿಗ್ಬಂಧನ ಹಾಕಿ ಸೂಕ್ತ ಪರಿಹಾರಕ್ಕೆ ಆಗ್ರಹ ಮಾಡಿದರು. ನಂತರ ಸ್ಥಳದಲ್ಲೇ ಸಿಬ್ಬಂದಿ ಜೊತೆ ಚರ್ಚಿಸಿ ಸಿಂಗಲ್ ಫೇಸ್ ಬೆಳಿಗ್ಗೆಯಿಂದ ಸಂಜೆ ಹಾಗೂ ತ್ರೀ ಫೇಸ್ ಕರೆಂಟ್ ಏಳು ಗಂಟೆ ಹರಿಸುವ ಭರವಸೆ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ಸ್ಥಳದಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಎಚ್.ಟಿ.ಭೈರಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಗಿರೀಶ್, ಬಿಜೆಪಿ ಮುಖಂಡ ಶಿವಶಂಕರ್ ಬಾಬು, ಕೆಪಿಸಿಸಿ ಮಾಜಿ ಸದಸ್ಯ ಕೆ.ಆರ್.ತಾತಯ್ಯ, ರಮೇಶ್ ಬೊಮ್ಮರಸನಹಳ್ಳಿ, ಶಿವಕುಮಾರ ಸ್ವಾಮಿ, ಸಿದ್ದರಾಮಣ್ಣ, ದಯಾನಂದ್, ಶಿವಮೂರ್ತಿ, ನಿತ್ಯಾನಂದ ಮೂರ್ತಿ, ಸುಗ್ಗಿ ಮೋಟಾರ್ಸ್ ಸಿದ್ದರಾಮಣ್ಣ ಹಾಗೂ ನಿಟ್ಟೂರು ಹೋಬಳಿಯ ನೂರಾರು ಮಂದಿ ರೈತರು ಭಾಗವಹಿಸಿದ್ದರು.

ವರದಿ – ಎಸ್. ಕೆ. ರಾಘವೇಂದ್ರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...