ಗುಬ್ಬಿ | ಚಿರತೆ ದಾಳಿಗೆ ಕರು ಬಲಿ : ಆತಂಕದಲ್ಲಿ ಕರೇಗೌಡನ ಪಾಳ್ಯ ಗ್ರಾಮಸ್ಥರು

Date:

ತೋಟದಮನೆಯ ದನದ ಕೊಟ್ಟಿಗೆಗೆ ನುಗ್ಗಿದ ಚಿರತೆ ಎರಡು ವರ್ಷದ ಸೀಮೆ ಕರುವನ್ನು ಬಲಿ ಪಡೆದ ಘಟನೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಕರೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್ ಎಂಬ ರೈತರಿಗೆ ಸಂಬಂಧಿಸಿದ ದನದ ಕೊಟ್ಟಿಗೆಗೆ ನುಗ್ಗಿದ ಚಿರತೆ ಕರುವಿನ ಕುತ್ತಿಗೆ, ಹೊಟ್ಟೆ ಬಗೆದು ಬಲಿ ಪಡೆಯುವ ಜೊತೆಗೆ ರೈತನ ಪಾಲಿಗೆ ನಷ್ಟ ತಂದಿದೆ. ಈಗಾಗಲೇ ಕಡಬ ಹೋಬಳಿ ಗ್ರಾಮಗಳ ಸುತ್ತಮುತ್ತಲೂ ಕಾಣಿಸಿಕೊಳ್ಳುವ ಚಿರತೆಗಳು ಈ ಭಾಗದ ರೈತರಲ್ಲಿ ಆತಂಕ ತಂದಿದೆ.

1001135291

ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿಗಳು ತೋಟದ ಮನೆಯ ಸಮೀಪದಲ್ಲಿ ಚಿರತೆ ಸೆರೆಗೆ ಬೋನು ಅಳವಡಿಸಿದ್ದು ಒಂದೆಡೆಯಾದರೆ ಇಲ್ಲಿರುವ ಚಿರತೆ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಚುರುಕುಗೊಳ್ಳಬೇಕು. ಕಡಬ ಹಾಗೂ ಕಸಬ ಹೋಬಳಿಯಲ್ಲಿ ಚಿರತೆ ಉಪಟಳ ಹೆಚ್ಚಾಗಿದೆ. ಚಿರತೆ ಸೆರೆ ಹಿಡಿದು ಸ್ಥಳೀಯ ಅರಣ್ಯದಲ್ಲಿ ಬಿಡದೆ ದೂರದ ಅರಣ್ಯ ಪ್ರದೇಶಕ್ಕೆ ಸಾಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...