ಗುಬ್ಬಿ | ಕೇಂದ್ರದ ಗೃಹಮಂತ್ರಿ ಅಮಿತ್ ಷಾ ಅವರನ್ನು ಗಡಿಪಾರು ಮಾಡಬೇಕು : ಛಲವಾದಿ ಮಹಾಸಭಾ ಆಗ್ರಹ

Date:

ಇಡೀ ವಿಶ್ವಮಾನ್ಯ ಪಡೆದ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಛಲವಾದಿ ಮಹಾಸಭಾದ ತಾಲ್ಲೂಕು ಘಟಕ ಆಗ್ರಹಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಬಂದ ಛಲವಾದಿ ಮಹಾಸಭಾದ ಸದಸ್ಯರು ಹಾಗೂ ದಲಿತ ಪರ ಸಂಘಟನೆಯ ಮುಖಂಡರು ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಈರಣ್ಣ ಮಾತನಾಡಿ ಅಂಬೇಡ್ಕರ್ ಹೆಸರು ಜಪ ಮಾಡುವ ಬದಲು ದೇವರ ಹೆಸರು ಜಪ ಮಾಡಿ ಅನ್ನುವ ಅಮಿತ್ ಷಾ ಅವರು ಚುನಾವಣಾ ಮೂಲಕ ಆಯ್ಕೆಯಾದ ನಿಮಗೆ ಮತ ನೀಡಿದ್ದು ಅಂಬೇಡ್ಕರ್ ಅನುಯಾಯಿಗಳು. ಯಾವ ದೇವರು ನಿಮಗೆ ಮತ ನೀಡಿಲ್ಲ. ಸಂವಿಧಾನದ ಚೌಕಟ್ಟಿನ ಎಲ್ಲಾ ಜಾತಿ ಧರ್ಮದ ಜನರ ಮತದಿಂದ ಆಯ್ಕೆಯಾಗಿ ಈಗ ಅವರನ್ನು ಹೀಯಾಳಿಸುವ ಪ್ರವೃತ್ತಿ ನಿಮ್ಮ ದುರ್ಬುದ್ಧಿ ತೋರುತ್ತದೆ. ಹೇಳಿಕೆ ನೀಡಿ ಈಗ ಕ್ಷಮೆ ಕೇಳಿದರೂ ನಿಮಗೆ ಶಿಕ್ಷೆ ಆಗುವವರಿವಿಗೂ ಉಗ್ರ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ್ ಭೀಮ್ ಸೇನೆಯ ಸಚಿನ್ ಮಾತನಾಡಿ ಅಂಬೇಡ್ಕರ್ ಹೆಸರು ಅಜರಾಮರ. ಇಡೀ ವಿಶ್ವವೇ ಹೊಗಳುವ ಅವರ ತತ್ವಾದರ್ಶಗಳನ್ನು ಸಹಿಸದ ಈ ಬಿಜೆಪಿ ಮುಖಂಡ ಅಮಿತ್ ತಮ್ಮ ಅಸೂಯೆ ಗುಣ ವ್ಯಕ್ತಪಡಿಸಿದ್ದಾರೆ. ವರ್ಷ ಕಳೆದಂತೆ ಅಂಬೇಡ್ಕರ್ ಅವರ ಅಭಿಮಾನಿಗಳು, ಅನುಯಾಯಿಗಳ ಸಂಖ್ಯೆ ಸಾವಿರಾರು ಜನ ಸಿಡಿದೇಳುತ್ತಾರೆ. ಅಮಿತ್ ಷಾ ಅವರ ಹೇಳಿಕೆಗೆ ಯುವ ಜನಾಂಗವೇ ಆಕ್ರೋಶಭರಿತವಾಗಿದೆ. ಕೂಡಲೇ ಗೃಹ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಎಂದು ಒತ್ತಾಯಿಸಿದರು.

ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ಮನವಿ ಸಲ್ಲಿಸಿ ರಾಷ್ಟ್ರಪತಿಗಳಿಗೆ ಪತ್ರ ರವಾನೆಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾಸಭಾ ಮುಖಂಡರಾದ ಕಿಟ್ಟದಕುಪ್ಪೆ ನಾಗರಾಜ್, ಹರಿವೇಸಂದ್ರ ಕೃಷ್ಣಪ್ಪ, ಮಹಿಳಾ ಘಟಕದ ಗಿರಿಜಮ್ಮ, ಸಾತೇನಹಳ್ಳಿ ರಮೇಶ್, ಗೋಪಾಲ್, ಮಧು, ಮಂಜುನಾಥ್, ಕೊಲ್ಕಾರ್ ರವಿ, ಇಮ್ರಾನ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...