ಗುಬ್ಬಿ | ಇಡಗೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿ ಛೇರ್ಮನ್ ರವಿ ಅವಿರೋಧ ಆಯ್ಕೆ

Date:

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.

ವಿಎಸ್ಎಸ್ಎನ್ ಸೊಸೈಟಿ ಆವರಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಇಡಗೂರು ಸಾಲಗಾರ ಕ್ಷೇತ್ರ ಸಾಮಾನ್ಯ ಮೀಸಲಿನಲ್ಲಿ ಜಿ.ಯತೀಶ್ ಅಧ್ಯಕ್ಷರಾಗಿ ಹಾಗೂ ಹಾರನಪಾಳ್ಯ ಸಾಲಗಾರ ಕ್ಷೇತ್ರ ಓಬಿಸಿ (ಬಿ) ಮೀಸಲಿನ ಎಚ್.ಡಿ.ಶ್ರೀನಿವಾಸ್ ಈ ಇಬ್ಬರು ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಯತೀಶ್ ಮಾತನಾಡಿ ರೈತರ ಕೃಷಿ ಅನುಕೂಲಕ್ಕೆ ತಕ್ಕಂತೆ ಸೊಸೈಟಿ ಕೆಲಸ ಮಾಡುತ್ತಿದೆ. ರೈತರ ಅಭಿವೃದ್ಧಿಗೆ ಪೂರಕ ಯೋಜನೆ ಹಾಗೂ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದು ಆರ್ಥಿಕ ವಹಿವಾಟು ಸಹ ನಡೆಸಿದೆ. ಕೃಷಿ ಪರಿಕರ ಖರೀದಿ ಹಾಗೂ ಕೃಷಿ ಸಾಲ ನೀಡುತ್ತಾ ಇಡಗೂರು ಸುತ್ತಲಿನ ರೈತರ ನೆರವಿಗೆ ನಿಂತ ಈ ಸಂಘವನ್ನು ಉತ್ತಮ ಬ್ಯಾಂಕ್ ಆಗಿ ಮೇಲ್ದರ್ಜೆಗೇರಿಸುವ ಆಲೋಚನೆ ಇದೆ. ಎಲ್ಲಾ ಸದಸ್ಯರ ಒಮ್ಮತದಲ್ಲಿ ಸಂಘ ಅಭಿವೃದ್ದಿ ಪಡಿಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಸಂಘದ ಸದಸ್ಯರಾದ ಪ್ರಶಾಂತ್, ನರಸಿಂಹಮೂರ್ತಿ, ಮನೋಹರ್, ಶಿವಕುಮಾರ್, ಉಮಾ, ಅನುಸೂಯ, ದೇವರಾಜ್, ಐ.ಎನ್.ಮನೋಹರ್, ಗಫಾರ್, ರಮೇಶ್ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...