ಗುಬ್ಬಿ | ಮರಾಠಿಪಾಳ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

Date:

ಅತ್ಯುತ್ತಮ ಹಾಗೂ ಪ್ರಬುದ್ಧ ಆಡಳಿತಗಾರ ಎಂದೆನಿಸಿದ ಮರಾಠ ಸಾಮ್ರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ತಾಲ್ಲೂಕಿನ ಮರಾಠಿಪಾಳ್ಯ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ಗ್ರಾಮದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಮೆರವಣಿಗೆ ನಡೆಸಿ ಊರಿನ ಜನರಿಗೆ ಸಿಹಿ ಹಂಚಿ ನಂತರ ನಾಗಸಂದ್ರ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಬುಕ್, ಪೆನ್ ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು. ಶಿವಾಜಿ ಮಹಾರಾಜರ ಆಡಳಿತ ಹಾಗೂ ಜೀವನ ಚರಿತ್ರೆ ಬಗ್ಗೆ ಪ್ರಮುಖರು ಹಂಚಿಕೊಂಡರು.

ಸ್ಥಳೀಯ ಮುಖಂಡ ಶಾಮರಾವ್ ಕಾಳೆ ಮಾತನಾಡಿ 1630 ರಲ್ಲಿ ಜನಿಸಿದ ಶಿವಾಜಿ ಮಹಾರಾಜರು ಉತ್ತಮ ನಾಯಕತ್ವ ಆಡಳಿತ ತಂತ್ರ ಮೂಲಕ ಮರಾಠ ಸಾಮ್ರಾಜ್ಯ ಸ್ಥಾಪಿಸಿದ್ದರು. ಮರಾಠಿ ಹಾಗೂ ಸಂಸ್ಕೃತ ಭಾಷೆಗೆ ಹೆಚ್ಚು ಮಾನ್ಯತೆ ನೀಡಿ ನಮ್ಮ ಸಾಂಸ್ಕೃತಿಕ ರಾಷ್ಟ್ರೀಯತೆ ಬಗ್ಗೆ ಆದ್ಯತೆ ನೀಡಿದ ಬಗೆ ತಿಳಿಯುತ್ತದೆ. ದಾರ್ಶನಿಕ ಆಡಳಿತ ಶೈಲಿಯಲ್ಲಿ ಬ್ರಿಟಿಷರ ಪ್ರಭಾವದ ನಡುವೆ ಹಿಂದೂ ಪದ್ಧತಿ ರಕ್ಷಣೆ ಮಾಡಿದ್ದರು. ಇವರ ಆದರ್ಶವನ್ನು ಪಾಲಿಸಿ ನಮ್ಮ ಪರಂಪರೆ ಉಳಿಸೋಣ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ರಘು ಕಾಳೆ ಮಾತನಾಡಿ ಕಲಿಕೆಯಿಂದ ಬುದ್ಧಿವಂತಿಕೆ ಬರುತ್ತದೆ ಎಂದು ನಂಬಿದ್ದ ಶಿವಾಜಿ ಅವರು ನಿಜವಾದ ಧೈರ್ಯ ಜ್ಞಾನದಿಂದ ಮಾರ್ಗದರ್ಶನ ಪಡೆಯುತ್ತದೆ. ಮಹಿಳೆಯರಿಗೆ ಎಲ್ಲಾ ಹಕ್ಕುಗಳನ್ನು ನೀಡಿ ಅಂದಿನ ಆಡಳಿತದ ಬಗ್ಗೆ ತಿಳಿಸಿದ್ದರು. ಶತ್ರುಗಳ ವಿರುದ್ಧ ಹೋರಾಟದ ಚತುರತೆ ವಿಶೇಷವಾಗಿತ್ತು. ಸಣ್ಣ ಸೈನ್ಯದಲ್ಲೇ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಶಿವಾಜಿ ಅವರು ಸ್ವಾತಂತ್ರ್ಯ ಹೋರಾಟಗಾರರಿಗೆ ಮುನ್ನುಡಿ ಹಾಡಿದ್ದರು ಎಂದು ತಿಳಿಸಿದರು.

ರಂಜಿತ್ ಕಾಳೆ ಮಾತನಾಡಿ ಶಿವಾಜಿ ಮಹಾರಾಜರ ಜನ್ಮ ದಿನ ಪ್ರತಿ ವರ್ಷ ಫೆಬ್ರವರಿ 19 ರಂದು ಎಲ್ಲೆಡೆ ಆಚರಿಸಲಾಗುತ್ತಿದೆ. ಅವರ ತತ್ವ ಆದರ್ಶ ಅಳವಡಿಸಿಕೊಂಡು ಅವರ ಸ್ಮರಣೆಯಿಂದಲೇ ಧೈರ್ಯ ತುಂಬಿಕೊಳ್ಳುವ ಕೆಚ್ಚು ಬರುತ್ತದೆ. ಹಿಂದೂ ಧರ್ಮದ ಉಳಿಸಲು ಕಟ್ಟುನಿಟ್ಟಿನ ಕ್ರಮ ವಹಿಸಿ ಮಾತೃ ಪ್ರೇಮ, ಮಾತೃ ಭಾಷೆ ಬಗ್ಗೆ ವಿಶೇಷ ಗುಣವನ್ನು ಬೆಳೆಸಿಕೊಳ್ಳಲು ಶಿವಾಜಿ ಅವರೇ ಆದರ್ಶಪ್ರಾಯರು. ಇಂದಿನ ಯುವ ಪೀಳಿಗೆ ಶಿವಾಜಿ ಮಹಾರಾಜರ ಜೀವನ ಚರಿತ್ರೆ ತಿಳಿಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೃಷ್ಣೋಜಿರಾವ್ ಕಾಳೆ, ಹನುಮಂತರಾವ್ ಕಾಳೆ, ನವೀನ್ ಗಾಯಕವಾಡ, ಹನುಮಂತರಾವ್ ಗಾಯಕವಾಡ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...