ಗುಬ್ಬಿ | ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು : ಪಪಂ ಅಧ್ಯಕ್ಷೆ ಮಂಗಳಮ್ಮ

Date:

ಶಿಕ್ಷಣ ಪ್ರಸ್ತುತ ಸಮಾಜದಲ್ಲಿ ದೊಡ್ಡ ಆಸ್ತಿ. ಈ ಹಿನ್ನಲೆ ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳನ್ನೇ ಉತ್ತಮ ಶಿಕ್ಷಣ ಮೂಲಕ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ಪಪಂ ಅಧ್ಯಕ್ಷೆ ಮಂಗಳಮ್ಮ ಪೋಷಕರಿಗೆ ಕರೆ ನೀಡಿದರು.

ಗುಬ್ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಆಧುನಿಕ ಕಾಲದಲ್ಲಿ ಪ್ರಪಂಚದ ವೇಗಕ್ಕೆ ತಕ್ಕನಾಗಿ ನಡೆಯಲು ಶಿಕ್ಷಣ ಅತ್ಯವಶ್ಯವಾಗಿದೆ. ಮುಖ್ಯವಾಹಿನಿಗೆ ಬರಲು ಶೈಕ್ಷಣಿಕ ಪ್ರಗತಿ ಆಗಬೇಕಿದೆ. ಈ ಹಿನ್ನಲೆ ಪೋಷಕರು ಹಾಗೂ ಶಿಕ್ಷಕ ವರ್ಗ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿ ಉತ್ತಮ ಸಮಾಜ ಕಟ್ಟಬೇಕು ಎಂದರು.

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ಗ್ರಾಮೀಣ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣ ಮಾಡಲು ಸೂಕ್ತ ವೇದಿಕೆ ನಿರ್ಮಾಣ ಮಾಡುವ ಶಿಕ್ಷಣ ಇಲಾಖೆ ಕ್ಲಸ್ಟರ್, ಹೋಬಳಿ ಮಟ್ಟದಲ್ಲಿ ಪ್ರತಿಭೆಗಳನ್ನು ಗುರುತಿಸಿ ತಾಲ್ಲೂಕು ಮಟ್ಟದಲ್ಲಿ ಗೆದ್ದ ಮಕ್ಕಳಿಗೆ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಅವಕಾಶ ನೀಡುವುದು ಚಿಗುರುವ ಪ್ರತಿಭೆಗೆ ನೀರೆರೆದಂತೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000637981

ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಮಾತನಾಡಿ ಪ್ರತಿ ವರ್ಷ ನಡೆಯುವ ಪ್ರತಿಭಾ ಕಾರಂಜಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ತರಲು ಸೂಕ್ತ ವೇದಿಕೆ ಎನಿಸಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪಾಲ್ಗೊಳ್ಳುವ ಮಕ್ಕಳು ಸಂಕುಚಿತ ಮನೋಭಾವ ತೊಡೆದು ವಿಶಾಲ ಮನಸ್ಥಿತಿಗೆ ತಲುಪುತ್ತಾರೆ. ಈ ಹಿನ್ನಲೆ ಮಕ್ಕಳ ಪ್ರತಿಭೆಯನ್ನು ಪ್ರಾಮಾಣಿಕವಾಗಿ ಗುರುತಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ಶಿಕ್ಷಣ ಇಲಾಖೆಯ ಬೀರೇಂದ್ರ, ರವೀಶ್, ಚನ್ನಬಸವಯ್ಯ, ರಾಮಚಂದ್ರ, ಚನ್ನಬಸವಾರಾಧ್ಯ, ಪದ್ಮಾವತಿ, ಲಕ್ಷ್ಮೀಕಾಂತ್ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ನೂರಾರು ಶಾಲಾ ಮಕ್ಕಳು ತಮ್ಮ ಕಲಾ ಕೌಶಲ್ಯ ಪ್ರದರ್ಶಿಸಿದರು.

ವೇದಿಕೆಯಲ್ಲಿ ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಉಮೇಶ್, ತಾಲ್ಲೂಕು ಅಧ್ಯಕ್ಷ ಬಿ.ಸಿ.ಶಿವಣ್ಣ, ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಟಿ.ಪ್ರಕಾಶ್, ಕಸಾಪ ಅಧ್ಯಕ್ಷ ಯತೀಶ್, ಬಿಆರ್ ಸಿ ಮಧುಸೂದನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್, ಶಿಕ್ಷಣ ಸಂಯೋಜಕ ದೀಪಕ್ ಕುಮಾರ್ ಶೆಟ್ಟಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ್, ಉಪ ಪ್ರಾಂಶುಪಾಲರಾದ ಭವ್ಯ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...