ಗುಬ್ಬಿ | ನಿರ್ಭೀತಿಯಿಂದ ಒತ್ತುವರಿ ತೆರವು ಮಾಡಿ : ಅಧಿಕಾರಿಗಳಿಗೆ ಧೈರ್ಯ ತುಂಬಿದ ಪಪಂ ಸದಸ್ಯರು

Date:

ಗುಬ್ಬಿ ಪಟ್ಟಣದ ಎಲ್ಲಾ ಬಡಾವಣೆಯಲ್ಲಿ ರಸ್ತೆ ಬದಿ ಒತ್ತುವರಿ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಸ್ಥಳದಲ್ಲಿ ಯಾವುದೇ ಶಿಫಾರಸ್ಸಿಗೆ ತಲೆ ಕೆಡಿಸಿಕೊಳ್ಳದೆ ಅಧಿಕಾರಿಗಳು ಒತ್ತುವರಿ ತೆರವು ಮಾಡಿ ಎಂದು ಪಪಂ ಸದಸ್ಯರು ಅಧಿಕಾರಿಗಳಿಗೆ ಧೈರ್ಯ ತುಂಬಿದ ಘಟನೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ನೇತೃತ್ವದ ಸಭೆಯ ಅಧ್ಯಕ್ಷತೆಯನ್ನು ಪಪಂ ಅಧ್ಯಕ್ಷೆ ಆಯಿಷಾ ತಾಸೀನ್ ವಹಿಸಿದ್ದರು. ಕಳೆದ ಬಾರಿ ಒತ್ತುವರಿ ತೆರವು ವಿಚಾರ ಕೈಗೆತ್ತಿಕೊಂಡು ಅರ್ಧಕ್ಕೆ ಕೆಲಸ ಕೈಬಿಟ್ಟ ಬಗ್ಗೆ ಪ್ರಸ್ತಾಪ ಮಾಡಿದ ಸದಸ್ಯರು ಯಾರೇ ಒತ್ತುವರಿ ಮಾಡಿದ್ದರೂ ನಿರ್ಭೀತಿಯಿಂದ ಕೆಲಸ ಮಾಡುವಂತೆ ಸಲಹೆ ನೀಡಿದರು.

ಸಭೆಯ ಆರಂಭದಲ್ಲಿ ಪಟ್ಟಣ ಪಂಚಾಯಿತಿ ಅಂಗಡಿ ಮಳಿಗೆಗಳ ಬಾಡಿಗೆ ಬಾಕಿ ವಸೂಲಿ ವಿಚಾರ ಪ್ರಸ್ತಾಪ ಮಾಡಲಾಯಿತು. ಒಂದು ಲಕ್ಷದೊಳಗೆ ಬಾಕಿ ಇದ್ದಾಗಲೇ ವಸೂಲಿ ಮಾಡಬೇಕು. 2026 ಕ್ಕೆ ಕರಾರು ಮುಗಿಯುವ ಕಾರಣ ಬಾಕಿ ವಸೂಲಿ ತುರ್ತು ಮಾಡಬೇಕು. ಹತ್ತು ಲಕ್ಷ ಹಣ ಬಾಡಿಗೆ ಬಾಕಿ ಇರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ ಮಾತನಾಡಿ ಕಳೆದ ಸಭೆಯಲ್ಲಿ ನಾವು ಚರ್ಚೆ ಮಾಡಿದ ವಿಚಾರ ಈ ಸಭೆಯ ನಡಾವಳಿಯಲ್ಲಿ ಮುದ್ರಣವೇ ಮಾಡಿಲ್ಲ. 4 ನೇ ವಾರ್ಡ್ ನಲ್ಲಿ ನಡೆದ ಪೈಪ್ ಲೈನ್ ಬಿಲ್ ಪಾವತಿ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಆದರೆ ನಡಾವಳಿಯಲ್ಲಿ ಕೈ ಬಿಡಲಾಗಿದೆ ಎಂದು ಕಿಡಿಕಾರಿದ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಕಾಂಪೌಂಡ್ ಬಿದ್ದು ಬಹಳ ವರ್ಷವಾಗಿದೆ. ಬಾಕಿ ಇರುವ ಹಳೇಯ ತಡೆ ಗೋಡೆ ತೆರವು ಮಾಡಬೇಕು. ಇಲ್ಲವಾದಲ್ಲಿ ಜೀವಹಾನಿ ಆಗುವ ಸಂಭವ ಇದೆ. ಈ ಹಿನ್ನಲೆ ಅನುದಾನ ಬಿಡುಗಡೆ ಮಾಡಿ ಹೊಸದಾಗಿ ಕಾಂಪೌಂಡ್ ನಿರ್ಮಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು. ಕೂಡಲೇ ಸ್ಪಂದಿಸಿದ ಶಾಸಕರು ಎಚ್ ಎಎಲ್ ಘಟಕದ ಸಿಎಸ್ಆರ್ ಫಂಡ್ ಮೂಲಕ ಕಾಂಪೌಂಡ್ ನಿರ್ಮಿಸುವ ಭರವಸೆ ನೀಡಿದರು.

ಬಡಾವಣೆಯ ರಸ್ತೆಗಳಿಗೆ ಶೀಟ್ ಹಾಕಿಕೊಂಡು ಕಾರುಗಳನ್ನು ನಿಲ್ಲಿಸುವುದು, ಹೂವಿನಗಿಡ ಬೆಳೆದು ಬೇಲಿ ಹಾಕಿರುವುದು ತೆರವು ಮಾಡಲು ಸ್ಥಳೀಯ ಸದಸ್ಯರನ್ನು ಮುಂದಿಟ್ಟುಕೊಂಡು ಕೆಲಸ ಮಾಡಿ ಎಂದು ಸದಸ್ಯ ಸಿ.ಮೋಹನ್ ಆಗ್ರಹಿಸಿದರು. ತೆರವು ಕಾರ್ಯಾಚರಣೆಗೆ ಯಾರೂ ಅಡ್ಡಿಪಡಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ ಶಾಸಕರು ವ್ಯವಸ್ಥೆ ಹದಗೆಟ್ಟಿದೆ. ಅಧಿಕಾರಿಗಳು ಕೆಲಸ ಮಾಡುವಾಗ ಸದಸ್ಯರೇ ಅಡ್ಡಿ ಮಾಡುವ ಬಗ್ಗೆ ಕೇಳಿದ್ದೇನೆ. ಈ ವಿಚಾರದಲ್ಲಿ ಒಗ್ಗಟ್ಟಿನಿಂದ ಒತ್ತುವರಿ ತೆರವು ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಹೇರೂರು ಕೆರೆಗೆ ತೆರಳುವ ಮಾರ್ಗದಲ್ಲಿ ಕೋಳಿ ಮತ್ತು ಮೀನಿನ ತ್ಯಾಜ್ಯ ಎಸೆಯುತ್ತಿರುವುದು ಸರಿಯಲ್ಲ. ಈ ಬಗ್ಗೆ ಹಲವು ಬಾರಿ ಕೇಳಿದರೂ ಅಧಿಕಾರಿಗಳು ಕೆಲಸ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸದಸ್ಯ ಜಿ.ಸಿ.ಕೃಷ್ಣಮೂರ್ತಿ ಲೈಬ್ರರಿ ಪಕ್ಕದ ರಸ್ತೆ ಡಾಂಬರ್ ಕಂಡಿಲ್ಲ. ವಾಹನ ಸಂಚಾರ ಅತಿಯಾದ ಈ ರಸ್ತೆಗೆ ಡಾಂಬರು ಹಾಕಲು ಆಗ್ರಹಿಸಿದರು. ಈ ವಿಚಾರಕ್ಕೆ ಸಾಥ್ ನೀಡಿದ ಸದಸ್ಯ ಸಿ.ಮೋಹನ್ ಒಂದು ಬದಿ ಚರಂಡಿ ಇದ್ದು ಮತ್ತೊಂದು ಬದಿಗೆ ಚರಂಡಿ ಕಟ್ಟಿ ಸಿಸಿ ರಸ್ತೆ ನಿರ್ಮಾಣ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಪಾರ್ಕ್ ನಿರ್ವಹಣೆ ಮಾಡಲು ಬರುವ ಯಾರೇ ಆಗಿರಲಿ ಪಟ್ಟಣ ಪಂಚಾಯಿತಿಗೆ ಕಟ್ಟ ಬೇಕಾದ ಬಾಕಿ ತೆರಿಗೆ ಅಥವಾ ಬಾಡಿಗೆ ಕಟ್ಟಿ ಮುಂದುವರೆಯಲು ಸದಸ್ಯ ಶಶಿಕುಮಾರ್ ಚರ್ಚಿಸಿದರು.

ಮಳೆ ಬಂದಾಗ ಎಪಿಎಂಸಿ ಮುಂಭಾಗ ಚರಂಡಿ ನೀರು ರಸ್ತೆಗೆ ಹಾಗೂ ಪಪಂ ಅಂಗಡಿ ಮಳಿಗೆಗಳಿಗೆ ನುಗ್ಗುತ್ತಿದೆ. ದೊಡ್ಡ ಚರಂಡಿ ಹಾಗೂ ಸೇತುವೆ ಮರು ನಿರ್ಮಾಣ ಮಾಡಬೇಕಿದೆ. ಹಾಗೂ ಬಸ್ ನಿಲ್ದಾಣದಲ್ಲಿ ಸಹ ನೀರು ನಿಲ್ಲುತ್ತಿದೆ. ಈ ಜಾಗವನ್ನು ಅಚ್ಚಕಟ್ಟು ಮಾಡಿ ಪಾರ್ಕಿಂಗ್ ವ್ಯವಸ್ಥೆಗೆ ಅನುವು ಮಾಡಲು ಸದಸ್ಯ ಜಿ.ಆರ್.ಶಿವಕುಮಾರ್ ಮನವಿ ಮಾಡಿದರು. ಅಧ್ಯಯನ ಪ್ರವಾಸ ಕೈಗೊಂಡ ಪಟ್ಟಣ ಪಂಚಾಯಿತಿ ಸದಸ್ಯರ ಜೊತೆ ಬೇರೆಯವರ ಪ್ರವಾಸ ಅಗತ್ಯವಿಲ್ಲ ಎಂದು ಸದಸ್ಯೆ ಸವಿತಾ ಎಸ್.ಗೌಡ ಆಕ್ಷೇಪ ವ್ಯಕ್ತಪಡಿಸಿದರು. ಮಹಿಳಾ ಸದಸ್ಯರ ಜೊತೆ ಅವರ ಗಂಡಂದಿರ ಪ್ರವಾಸ ಮಾಡಿದ್ದಲ್ಲಿ ಪ್ರತ್ಯೇಕ ಹಣ ನೀಡಬೇಕಿದೆ ಎಂದು ಹಿರಿಯ ಸದಸ್ಯ ಮಹಮದ್ ಸಾದಿಕ್ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾದ ಯುಜಿಡಿ ಒಳಚರಂಡಿ ಕೊಳವೆ ಮಾರ್ಗದ ಒಟ್ಟು 1600 ಚೆಂಬರ್ ಹಾಗೂ ಮ್ಯಾನ್ ಹೋಲ್ ಪರಿಶೀಲನೆ ಹಾಗೂ ಸ್ವಚ್ಛತೆಗೆ ಹಣ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಲಾಯಿತು.

ಹೀಗೆ ಹತ್ತು ಹಲವು ಸಮಸ್ಯೆ ಆಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಸದಸ್ಯರು ಒಗ್ಗೂಡಿ ಕೆಲಸ ಮಾಡಬೇಕಿದೆ. ಅವಧಿಯ ಅಂತ್ಯದ ವೇಳೆ ಯಾವುದೇ ಗೊಂದಲ ಮಾಡಿಕೊಳ್ಳದೆ ಅಧ್ಯಯನ ಪ್ರವಾಸ ಮುಗಿಸಿ ಬಂದು ಪಟ್ಟಣದ ಅಭಿವೃದ್ಧಿಗೆ ಎಲ್ಲರೂ ಒಮ್ಮತದ ಸಹಕಾರ ನೀಡುವಂತೆ ಸೂಚಿಸಿದರು. ನಂತರ ಮತ್ತಷ್ಟು ಅಭಿವೃದ್ದಿ ವಿಚಾರ ಹಾಗೂ ರಸ್ತೆ ಅಭಿವೃದ್ಧಿ ಪಟ್ಟಿ ಮಾಡಲಾಯಿತು.

ಸಭೆಯಲ್ಲಿ ಪಪಂ ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಮುಖ್ಯಾಧಿಕಾರಿ ಮಂಜುಳಾದೇವಿ, ಇಂಜಿನಿಯರ್ ಬಿಂದುಸಾರ ಸೇರಿದಂತೆ ಎಲ್ಲಾ ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...