ಗುಬ್ಬಿ | ಕಾಲೇಜು ಹುಡುಗರ ಹೊಡೆದಾಟ : ಪುಂಡಾಟಿಕೆಗೆ ಬೀಳಲಿದೆಯೇ ಬ್ರೇಕ್

Date:

ಕ್ಷುಲ್ಲಕ ಕಾರಣಕ್ಕೆ ಕಾಲೇಜು ಹುಡುಗರ ಎರಡು ಗುಂಪು ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ರಂಗಮಂದಿರ ಹಿಂಭಾಗ ನಡೆದಿದೆ.

ಕಾಲೇಜು ಮುಗಿದ ಬಳಿಕ ಮೈದಾನ ಸೇರಿದ ವಿದ್ಯಾರ್ಥಿಗಳು ಮಾತಿನ ಚಕಮಕಿಗೆ ನಡೆಸಿದ್ದಾರೆ. ನಂತರ ಕೈ ಮಿಲಾಯಿಸಿ ಹೊಡೆದಾಟ ಸಹ ನಡೆಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇತ್ತೀಚಿಗೆ ಮೈದಾನದಲ್ಲಿ ಹುಡುಗರ ಗುಂಪು ಠಿಕಾಣಿ ಹೂಡಿ ಕೆಲ ವಿದ್ಯಾರ್ಥಿಗಳ ಬೆದರಿಸುವ ಘಟನೆ ನಡೆಯುತ್ತವೆ ಎಂದು ಇದೇ ಸಂದರ್ಭದಲ್ಲಿ ಕೆಲ ಹಿರಿಯ ನಾಗರೀಕರು ಅಭಿಪ್ರಾಯ ತಿಳಿಸಿದ್ದಾರೆ.

ಕಾಲೇಜು, ಹೈಸ್ಕೂಲ್ ಹಾಗೂ ಪ್ರಾಥಮಿಕ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಈ ಮೈದಾನದಲ್ಲಿ ಓಡಾಡುತ್ತಾರೆ. ಕಾಲೇಜು ವಿದ್ಯಾರ್ಥಿಗಳ ಗುಂಪುಗಾರಿಕೆ, ಹೊಡೆದಾಟ, ಬೆದರಿಕೆ ಅವಾಜ್ ಗಳು ಇವೆಲ್ಲಾ ನಡವಳಿಕೆಗೆ ಹೈಸ್ಕೂಲ್ ಪ್ರಾಥಮಿಕ ಮಕ್ಕಳನ್ನು ಭಯಭೀತರನ್ನಾಗಿಸಿದೆ. ಶಿಕ್ಷಕರು, ಉಪನ್ಯಾಸಕರ ಭಯ ಇಲ್ಲದ ಪುಂಡರ ಗುಂಪು ಕಡಿವಾಣಕ್ಕೆ ಪೊಲೀಸರ ಕಾರ್ಯಾಚರಣೆ ಅಗತ್ಯವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ಯಾಹ್ನ ವೇಳೆಯಲ್ಲಿ ನಿರ್ಜನ ವಾತಾವರಣ ಇರುವ ಮೈದಾನದಲ್ಲಿ ಅಲ್ಲಲ್ಲೇ ಗುಂಪು ಕಾಣ ಸಿಗುತ್ತವೆ. ಈ ಹುಡುಗರು ಕಾಲೇಜು ಹೊರತಾದ ಚಟುವಟಿಕೆಯಲ್ಲಿ ಕಾಣಸಿಗುತ್ತಾರೆ. ಚಕ್ಕರ್ ಹೊಡೆದು ತಿರುಗುವ ವಿದ್ಯಾರ್ಥಿಗಳ ನಿಯಂತ್ರಣ ಮಾಡುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಪೊಲೀಸ್ ಇಲಾಖೆ. ಶಾಲಾ ಕಾಲೇಜು ಅವರಣದಿಂದ ಹೊರ ನಡೆಯುವ ಘಟನೆಗೆ ಜವಾಬ್ದಾರಿ ತೆಗೆದುಕೊಳ್ಳದ ಅಧ್ಯಾಪಕ ವರ್ಗ ಪೋಷಕರಿಗೆ ಮಾಹಿತಿ ರವಾನಿಸುತ್ತಾರೆ. ಆದರೆ ಗುಂಪುಗಾರಿಕೆ, ಹೊಡೆದಾಟ, ಬಡಿದಾಟ ಕಡಿವಾಣಕ್ಕೆ ಪೊಲೀಸರ ವಾಹನ ನಿತ್ಯ ಬೀಟ್ ಮಾಡುವ ಅಗತ್ಯವಿದೆ. ಕಾಲೇಜು ಆರಂಭ ಹಾಗೂ ಅಂತ್ಯ ಈ ವೇಳೆಯಲ್ಲಿ ಪೊಲೀಸರ ದರ್ಶನ ಮಾತ್ರ ಪುಂಡು ಹುಡುಗರ ಚಟುವಟಿಕೆಗೆ ಬ್ರೇಕ್ ಬೀಳಲಿದೆ.

ಶಾಲಾ ಕಾಲೇಜು ಮುಗಿದ ಬಳಿಕ ಪುಂಡಾಟಿಕೆಯ ವರಸೆ ಬಸ್ ನಿಲ್ದಾಣಕ್ಕೆ ವರ್ಗಾವಣೆ ಆಗಲಿದೆ. ಸರ್ಕಾರಿ ಬಸ್ಸಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳ ಜೊತೆಯಲ್ಲೇ ಪುಂಡು ಪೋಕರಿಗಳ ಹಾವಳಿ ಆರಂಭವಾಗುತ್ತದೆ. ಹೆಣ್ಣು ಮಕ್ಕಳು ಬಸ್ಸಿಗಾಗಿ ಕಾದು ಕುಳಿತ ಸಮಯ ಸಾಕಷ್ಟು ಕಿರಿಕಿರಿಗೆ ಒಳಗಾಗಿದ್ದಾರೆ. ಇಲ್ಲೂ ಗುಂಪುಗಳ ಜಗಳ ಮುಂದುವರೆದು ಪ್ರಯಾಣಿಕರಿಗೆ ಭಯವನ್ನೇ ಹುಟ್ಟಿಸಿದೆ. ಈ ಬಗ್ಗೆ ಸಾರ್ವಜನಿಕರ ಶಾಂತಿ ಸಭೆಯಲ್ಲೂ ಸಾರ್ವಜನಿಕರು ಚರ್ಚೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...