ಗುಬ್ಬಿ | ಸರ್ಕಾರಿ ಶಾಲೆಗಳನ್ನು ಬೆಳೆಸಲು ಸಮುದಾಯದ ಸಹಕಾರ ಅತ್ಯಗತ್ಯ : ಬಿಇಓ ನಟರಾಜ್

Date:

ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಗ್ರಾಮೀಣ ಭಾಗದಲ್ಲಿ ಪೋಷಕರು ಹಾಗೂ ಜನಪ್ರತಿನಿಧಿಗಳು ಒಕ್ಕೊರಲಿನ ಅಭಿಪ್ರಾಯದಲ್ಲಿ ಮಾಡಬೇಕು. ಸಮುದಾಯವೇ ಶಾಲೆಗಳನ್ನು ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಕರೆ ನೀಡಿದರು.

ಗುಬ್ಬಿ ತಾಲ್ಲೂಕಿನ ಎಂ.ಎನ್.ಕೋಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ಸೃಷ್ಟಿ ಮಾಡುವ ಕೆಲಸ ಇಲಾಖೆ ಮಾಡುತ್ತಿದೆ. ಅದರ ಸದ್ವಿನಿಯೋಗ ಮಕ್ಕಳು ಪಡೆಯಬೇಕು ಎಂದರು.

ಖಾಸಗಿ ಶಾಲೆಯ ವ್ಯಾಮೋಹ ಈಗ ಗ್ರಾಮೀಣ ಭಾಗದಲ್ಲಿ ಹರಡಿದಂತೆ ಸರ್ಕಾರಿ ಶಾಲೆಗಳು ಮಂಕಾಗಿವೆ. ಬಿಸಿಯೂಟ, ಹಾಲು, ರಾಗಿ ಅಂಬಲಿ, ಮೊಟ್ಟೆ, ಬಾಳೆಹಣ್ಣು ಹೀಗೆ ಅನೇಕ ಪೌಷ್ಟಿಕ ಆಹಾರ ನೀಡುವ ಜೊತೆಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ನೀಡುತ್ತಿರುವುದು ಉತ್ತಮ ಶಿಕ್ಷಣ ಪಡೆಯುವ ಮಕ್ಕಳಿಗೆ ಏಕಾಗ್ರತೆ ಸಾಧಿಸಲು ಅನುವು ಮಾಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಶಿಕ್ಷಕ ರಾಮಚಂದ್ರಪ್ಪ ಮಾತನಾಡಿ ಗ್ರಾಮೀಣ ಮಕ್ಕಳಿಗೆ ಸೂಕ್ತ ಶಿಕ್ಷಣ ಸಿಕ್ಕಲ್ಲಿ ದೇಶಕ್ಕೆ ಆಸ್ತಿ ಆಗುವ ಮಾನವ ಸಂಪನ್ಮೂಲ ಉತ್ಪತ್ತಿಯಾಗುತ್ತದೆ. ಸರ್ಕಾರ ಕೂಡ ದೇಶದ ಅಭಿವೃದ್ಧಿಗೆ ಶಿಕ್ಷಣ ಕ್ಷೇತ್ರದ ಪ್ರಗತಿಯಿಂದ ಸಾಧ್ಯವಿದೆ ಎಂಬ ಅಂಶ ಮನಗಂಡು ಪ್ರತಿ ಬಜೆಟ್ ನಲ್ಲಿ ಕೋಟ್ಯಾಂತರ ರೂಪಾಯಿ ಮೀಸಲು ಅನುದಾನ ತೆಗೆದು ಇಡುತ್ತಿದೆ. ಈ ನಿಟ್ಟಿನಲ್ಲಿ ಪೋಷಕರು ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಕರೆ ತರುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಗ್ರಾಪಂ ಪಿಡಿಓ ಕೃಷ್ಣಮೂರ್ತಿ ಮಾತನಾಡಿ ಪಂಚಾಯಿತಿಯಿಂದ ಬರುವ ಅನುದಾನದಲ್ಲಿ ವಿಶೇಷವಾಗಿ ಶಾಲೆಗಳ ಅಭಿವೃದ್ಧಿಗೆ ಮೀಸಲಿಟ್ಟು ಶಿಕ್ಷಣ ಕ್ಷೇತ್ರ ಬೆಳೆಸುವ ಕಾರ್ಯ ಮಾಡುತ್ತೇವೆ. ನರೇಗಾ ಯೋಜನೆ ಬಳಸಿ ಶಾಲೆಗೆ ಅವಶ್ಯ ಮೂಲಭೂತ ಸೌಕರ್ಯ ಒದಗಿಸಲು ಆಡಳಿತ ಮಂಡಳಿ ಅಧ್ಯಕ್ಷರಾದಿ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಶಾಲೆಗಳ ಉನ್ನತೀಕರಣ ಗೊಳಿಸುವ ಕೆಲಸ ಒಟ್ಟಾಗಿ ನಡೆಸೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವೇದಿಕೆಯಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಶಶಿಕಲಾ ಯೋಗೀಶ್, ಸದಸ್ಯರಾದ ದಿಲೀಪ್ ಕುಮಾರ್, ಸಿದ್ದಗಂಗಮ್ಮ ಕಲ್ಲೇಶ್, ಶೈಲಜಾ ಗಂಗಾಧರಸ್ವಾಮಿ, ಉಮಾ ತೇಜಣ್ಣ, ಮೋಹನ್ ಕುಮಾರ್, ಮುಖಂಡರಾದ ಮಾರುತಿಕುಮಾರ್, ಸುರೇಶ್ ಬಾಬು, ಸದಾಶಿವಯ್ಯ, ಸುಧಾಕರ್, ವಸಂತ್ ಕುಮಾರ್, ಕಿರಣ್ ಕುಮಾರ್, ಶಿಕ್ಷಕರಾದ ಶಾಂತಕುಮಾರ್, ಮಮ್ತಾಜ್, ಗಾಯತ್ರಿದೇವಿ, ಮುಬಿನ್ ತಾಜ್ ಹಾಗೂ ಎಸ್ ಡಿಎಂಸಿ ಸದಸ್ಯರು ಸೇರಿದಂತೆ ಶಾಲಾ ಪೋಷಕರು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...