ಗುಬ್ಬಿ | ನಿಖಿಲ್ ಕುಮಾರಸ್ವಾಮಿ ಪಟ್ಟಾಭಿಷೇಕ ಒಪ್ಪಿಕೊಂಡ ಕಾಂಗ್ರೆಸ್ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ

Date:

ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ. ನಿಖಿಲ್ ಗೆಲುವು ಖಚಿತ ಎಂದು ತುರುವೇಕೆರೆ ಶಾಸಕ ಎಂ..ಟಿ.ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ, ಮಾವಿನಹಳ್ಳಿ ಹಾಗೂ ಚಂಗಾವಿ ಕೆರೆಗಳು ತುಂಬಿ ಹರಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಣೆ ಮಾಡಿದ ನಂತರ ಮಾತನಾಡಿ ಮಾಜಿ ಸಂಸದ ಸುರೇಶ್ ಅವರು ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ. ಮಾಜಿ ಪ್ರಧಾನಿ ಅವರ ವರ್ಚಸ್ಸು ಎಲ್ಲರಿಗೂ ತಿಳಿದಿದೆ. ಆಂಬುಲೆನ್ಸ್ ಎಂಬ ಮಾತು ಸರಿಯಲ್ಲ. ಹೆಲಿಕಾಪ್ಟರ್ ನಲ್ಲಿ ಬಂದು ಪಟ್ಟಾಭಿಷೇಕ ನೆರವೇರಿಸುತ್ತಾರೆ. ಗೆಲುವಿನ ಸೂಚನೆಗೆ ಹತಾಶೆಯಲ್ಲಿ ಅಸಂಬದ್ಧ ಪದ ಬಳಕೆ ಸಲ್ಲದು ಎಂದು ಖಂಡಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೀಶ್ವರ್ ಅವರಿಗೆ ಟಿಕೆಟ್ ನೀಡಲು ಕುಮಾರಣ್ಣ ಆಹ್ವಾನ ನೀಡಿದ್ದರು. ಆದರೆ ಈ ಮೊದಲೇ ಒಪ್ಪಂದ ಮಾಡಿಕೊಂಡ ಹಿನ್ನಲೆ ಟಿಕೆಟ್ ನೀಡಲಿಲ್ಲ ಎಂದು ಸಿಂಪತಿ ಗಿಟ್ಟಿಸಿಕೊಳ್ಳುವ ನಾಟಕ ಎಲ್ಲರಿಗೂ ತಿಳಿದಿದೆ ಎಂದು ಕುಟುಕಿದ ಅವರು ತುಮುಲ್ ಒಕ್ಕೂಟದ ಚುನಾವಣೆಯಲ್ಲಿ ತುರುವೇಕೆರೆ ತಾಲ್ಲೂಕಿನ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವನವಿದೆ. ಕಾಂಗ್ರೆಸ್ ಪಕ್ಷ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಆದರೆ ನಾವು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಾಗುತ್ತಿದ್ದೇವೆ. ನಮ್ಮಲ್ಲಿ 113 ಮತಗಳಿದ್ದು 95 ಮತಗಳಿಗೆ ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000608439

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಬೃಹತ್ ಪಾದಯಾತ್ರೆ ಖಂಡಿತಾ ಮಾಡುತ್ತೇವೆ. 70 ಕಿಮೀ ನಾಲೆಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತೇವೆ. ಹೆದ್ದಾರಿ ಬಂದ್ ಆಗಲಿದೆ. ಕೆಲ ಮುಖಂಡರು ಪೊಲೀಸ್ ಕೇಸ್ ಎಂದು ಹೆದರಿ ತಪ್ಪಿಸಿಕೊಳ್ಳುತ್ತಾರೆ. ಯಾರೋ ಎದೆಗುಂದುವ ಅವಶ್ಯವಿಲ್ಲ. ರೈತರು ಯಡೆಮಟ್ಟೆ ಜೊತೆ ಬರಲು ಖುದ್ದು ನಾನೇ ಕರೆ ನೀಡಿದ್ದೇನೆ. ಪೊಲೀಸರು ಸಾವಿರಾರು ರೈತರನ್ನು ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿ ಸಣ್ಣ ನೀರಾವರಿ ಇಲಾಖೆಗೆ ಸಂಬಂಧಪಟ್ಟ ಕೆರೆಗಳು ಹೆಚ್ಚಾಗಿವೆ. ಹೇಮಾವತಿ ಅಚ್ಚುಕಟ್ಟು ಪ್ರದೇಶ ಘೋಷಣೆಗೆ ತುರುವೇಕೆರೆ ತಾಲ್ಲೂಕಿನ 55 ಸಾವಿರ ಹೆಕ್ಟೇರ್ ಜಮೀನು ಸೇರಿದೆ. ಗುಬ್ಬಿ ತಾಲ್ಲೂಕಿನ ಅಚ್ಚುಕಟ್ಟು ವಿಚಾರ ಅಲ್ಲಿನ ಶಾಸಕರು ಮಾತನಾಡುತ್ತಾರೆ ಎಂದು ಉತ್ತರಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚನ್ನನೇಹಳ್ಳಿ ಮೂರ್ತಣ್ಣ, ನಂಜೇಗೌಡ, ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ನರಸೇಗೌಡ, ಹೋಬಳಿ ಅಧ್ಯಕ್ಷ ಜಗದೀಶ್, ಯುವ ಜೆಡಿಎಸ್ ಅಧ್ಯಕ್ಷ ನವೀನ್ ಕುಮಾರ್, ಶಾಸಕರ ಪುತ್ರ ವೆಂಕಟೇಶ್, ವೀರಣ್ಣಗುಡಿ ರಾಮಣ್ಣ, ಮಾವಿನಹಳ್ಳಿ ರವಿ, ಕೆ.ರಾಮಣ್ಣ, ಈಶ್ವರ್, ಕೃಷ್ಣೇಗೌಡ, ಅವ್ವೇರಹಳ್ಳಿ ಕೃಷ್ಣಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...