ಗುಬ್ಬಿ | ಕಾಲ್ತುಳಿತಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ : ಬಿಜೆಪಿ ಆರೋಪ

Date:

ಖಾಸಗಿ ಕ್ಲಬ್ ಆಯೋಜನೆಯ ಕ್ರಿಕೆಟ್ ಪಂದ್ಯಾವಳಿ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ವಿಜಯೋತ್ಸವ ಆಚರಣೆ ಮಾಡಿದ ಕಾಂಗ್ರೆಸ್ ಸರ್ಕಾರ 11 ಜನ ಕ್ರಿಕೆಟ್ ಅಭಿಮಾನಿಗಳ ಬಲಿ ಪಡೆದಿದೆ. ಈ ದುರಂತಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ. ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ತಾಲ್ಲೂಕು ಘಟಕ ಒತ್ತಾಯಿಸಿತು.

ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಆಗಿರುವ ದುರ್ಘಟನೆಗೆ ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿರುವ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ಸಲ್ಲಿಸಬೇಕು ಎಂದು ಒಕ್ಕೊರಲಿನ ಒತ್ತಾಯ ಮಾಡಿದರು.

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಎತ್ತಿಗೆ ಜ್ವರ ಬಂದ್ರೆ ಕೋಣನಿಗೆ ಬರೆ ಎಂಬಂತೆ ಕಾಂಗ್ರೆಸ್ ಸರ್ಕಾರದ ನಡೆ ಕಂಡು ಬಂದಿದೆ. ಸರ್ಕಾರವೇ ಮುಂದೆ ನಿಂತು ವಿಜಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದೆ. ಕಾಲ್ತುಳಿತಕ್ಕೆ ಅಮಾಯಕರ ಬಲಿ ಪಡೆದು ಈಗ ಪೊಲೀಸ್ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ನುಣುಚಿಕೊಂಡಿದೆ. ಖಾಸಗಿ ಕ್ರೀಡಾಕೂಟದಲ್ಲಿ ಗೆದ್ದರೆ ಈ ಮಟ್ಟದ ಸಂಭ್ರಮ ಅಗತ್ಯವಿಲ್ಲ. ಇವರೇ ಆಡಿದಂತೆ ಬೀಗುತ್ತಾ ಸಿದ್ದರಾಮಯ್ಯ ಬ್ಯಾಟಿಂಗ್, ಶಿವಕುಮಾರ್ ಬೋಲಿಂಗ್ ಮಾಡಿದಂತೆ ವರ್ತಿಸಿ ಈಗ ಕ್ರಿಕೆಟ್ ಬೋರ್ಡ್ ಸಮಿತಿಯ ಮೇಲೆ ಗೂಬೆ ಕೂರಿಸಿದ್ದಾರೆ. ಇದೆಲ್ಲಾ ಅಚಾತುರ್ಯಕ್ಕೆ ಸಿದ್ದರಾಮಯ್ಯ ಅವರೇ ಹೊಣೆ ಹೊರಬೇಕು ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಕ್ರಿಕೆಟ್ ಯಾವ ಸಂಸ್ಥೆ ಈ ವಿಜಯೋತ್ಸವ ಆಚರಣೆಗೆ ಒಪ್ಪಿಗೆ ನೀಡಿಲ್ಲ. ಪೊಲೀಸ್ ಇಲಾಖೆ ಕೂಡ ಸ್ಪಷ್ಟವಾಗಿ ಹೇಳಿತ್ತು ಕಾರ್ಯಕ್ರಮ ಮಾಡುವುದು ಬೇಡವೆಂದು. ಆದರೆ ಸರ್ಕಾರವೇ ಒತ್ತಾಯದಿಂದ ಆಯೋಜನೆ ಮಾಡಿ ಅಮಾಯಕ 11 ಜನರನ್ನು ಬಲಿ ಪಡೆದಿದೆ. ರಾಷ್ಟ್ರ ಅಥವಾ. ರಾಜ್ಯ ಪ್ರತಿನಿಧಿಸಿ ಪ್ರತಿಷ್ಠಿತ ಕ್ರೀಡೆ ಗೆದ್ದವರಿಗೆ ಸನ್ಮಾನ ಮಾಡುವುದು ಸರಿ. ಆದರೆ ಖಾಸಗಿ ಕ್ಲಬ್ ಆಯೋಜನೆಯ ಕ್ರಿಕೆಟ್ ಪಂದ್ಯಾವಳಿಗೆ ಇಷ್ಟೆಲ್ಲಾ ಬಿಲ್ಡಪ್ ಬೇಕಿಲ್ಲ. ಅಮಾಯಕರ ಸಾವಿಗೆ ಮುಖ್ಯಮಂತ್ರಿಗಳು ನೇರ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ ಮಾತನಾಡಿ ಕಳೆದೆರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕುರಿತು ಬಿಜೆಪಿ ಹಲವು ಬಾರಿ ರಸ್ತೆಗಿಳಿದಿದೆ. ಉತ್ತರ ಪ್ರದೇಶದ ಮುಖ್ಯಂತ್ರಿಗಳ ವಿರುದ್ಧ ವ್ಯಂಗ್ಯವಾಗಿ ಮಾತನಾಡಿದ್ದ ಸಿದ್ದರಾಮಯ್ಯ ಅವರು ಯೋಚನೆ ಮಾಡಬೇಕಿದೆ. 66 ಕೋಟಿ ಜನರನ್ನು ಒಂದು ಕಾರ್ಯಕ್ರಮದಲ್ಲಿ ಸೇರಿಸಿ ಒಂದು ಚೂರೂ ಲೋಪ ಬಾರದಂತೆ ಮಹಾ ಕುಂಭಮೇಳ ಯಶಸ್ವಿಯಾಗಿ ನಡೆಸಿದ್ದರು. ಆದರೆ ಇಲ್ಲಿ ಎರಡು ಲಕ್ಷ ಜನರನ್ನು ಹತೋಟಿಗೆ ತರಲಾಗದೆ ಹನ್ನೊಂದು ಜನರ ಬಲಿ ಪಡೆದಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಮಾಜಿ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ, ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಸಿ.ಕೃಷ್ಣಮೂರ್ತಿ, ಮುಖಂಡರಾದ ಯತೀಶ್, ಸಿದ್ದರಾಮಯ್ಯ, ಪುಟ್ಟರಾಜು, ಎಚ್.ಎಲ್.ಬಸವರಾಜು, ನರಸಿಂಹಮೂರ್ತಿ, ಪ್ರಮೋದ್, ಕೃಷ್ಣಮೂರ್ತಿ, ಅರೇನಹಳ್ಳಿ ರಾಜು, ಸ್ವಾಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...