ಗುಬ್ಬಿ | ಜಿಪಂ, ತಾಪಂ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರಕ್ಕೆ ತಾಕತ್ತಿಲ್ಲ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ

Date:

ಕಾರ್ಯಕರ್ತರನ್ನು ಗುರುತಿಸಿ ಜನಸೇವೆಗೆ ಅವಕಾಶ ನೀಡುವ ಅವಕಾಶ ಇರುವುದು ಸ್ಥಳೀಯ ಚುನಾವಣೆ ಮೂಲಕ ಎಂಬುದು ತಿಳಿದ ವಿಚಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸ್ಥಳೀಯ ಚುನಾವಣೆ ಜಿಪಂ ತಾಪಂ ಹಾಗೂ ಎಪಿಎಂಸಿ ಚುನಾವಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಸ್ಥಳೀಯ ಚುನಾವಣೆ ಮಾಡುವ ತಾಕತ್ತು ಇಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಟುಕಿದರು.

ತಾಲ್ಲೂಕಿನ ಕಡಬ ಹೋಬಳಿ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಬೆನಕನಗುಂದಿ ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಸ್ಥಳೀಯವಾಗಿ ಒಂದಿಷ್ಟು ಅಭಿವೃದ್ದಿ ಕೆಲಸ ನಡೆಸಲು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅವಶ್ಯವಿದೆ. ಅನುದಾನ ಬಳಸಿ ಸದಸ್ಯರು ಅವರವರ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ಸಾರ್ವಜನಿಕರಿಗೂ ಕೊಂಚ ಸಮಾಧಾನ ಬರುತಿತ್ತು. ನಮ್ಮ ಕಾರ್ಯಕರ್ತರಿಗೂ ಅವಕಾಶ ಒದಗಿಸುವ ಜಿಪಂ ತಾಪಂ ಚುನಾವಣೆ ಶೀಘ್ರವಾಗಿ ಸರ್ಕಾರ ನಡೆಸಬೇಕು ಎಂದು ಒತ್ತಾಯಿಸಿದರು.

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯಾವುದೇ ಕಾರಣಕ್ಕೂ ಮಾಡಲು ಬಿಡುವುದಿಲ್ಲ. ಅಧಿಕಾರಿಗಳು ಒತ್ತಡಕ್ಕೆ ಮಣಿದ ಆಗಾಗ್ಗೆ ಬಂದು ನಮ್ಮನ್ನು ಕೆಣುಕುತ್ತಿದ್ದಾರೆ. ಈಗಾಗಲೇ ರೈತರೇ ಬಹಳಷ್ಟು ಬಾರಿ ಕೆಲಸ ನಿಲ್ಲಿಸಿದ್ದಾರೆ. ಹೀಗೆ ಮುಂದುವರೆದರೆ ಉಗ್ರ ಹೋರಾಟಕ್ಕೆ ಸಿದ್ಧರಾಗುತ್ತಾರೆ ಎಂದು ಎಚ್ಚರಿಸಿದ ಅವರು ಪಿಎಂಆರ್ ಯೋಜನೆ ಮೂಲಕ ಕೇಂದ್ರ ಸರ್ಕಾರದ ಯೋಜನೆ ಕೆಲಸ ನಡೆಸಿದ್ದೇವೆ. ರಾಜ್ಯ ಸರ್ಕಾರ ಇನ್ನೂ ಅನುದಾನ ಕೊಡುವುದರಲ್ಲೇ ಇದೆ. ಜನಕ್ಕೆ ಸಮಾಧಾನ ತರಲು ಕೇಂದ್ರ ಸರ್ಕಾರದ ಯೋಜನೆ ಸಹಕಾರ ನೀಡಿದೆ ಎಂದು ತಿಳಿಸಿ ನಮ್ಮ ಸೈನ್ಯದ ಶಕ್ತಿ ಬಲವಾಗಿದೆ. ಒಂದು ವಾರ ಯುದ್ಧ ನಡೆದಿದ್ದರೆ ಪಾಕಿಸ್ತಾನ ಸಂಪೂರ್ಣ ನಾಶವಾಗುತಿತ್ತು. ಶರಣಾಗತಿ ಬಯಸಿರುವ ಪಾಕಿಸ್ತಾನದ 12 ಏರ್ ಬೇಸ್ ನಾಶ ಮಾಡಿದ್ದಾರೆ ಎಂದು ಹೆಮ್ಮೆಯಿಂದ ಹೇಳಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಲೂರು ಗ್ರಾಪಂ ಮಾಜಿ ಸದಸ್ಯ ಮಹಮ್ಮದ್ ಯೂಸಫ್ ಮಾತನಾಡಿ ಕಲ್ಲೂರು ಗ್ರಾಮ ಪಂಚಾಯಿತಿ ಮೂಲಕ ಕೆ.ಕಲ್ಲಹಳ್ಳಿ ಗ್ರಾಮದಲ್ಲಿ ಅತ್ಯವಶ್ಯವಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕ 9 ಲಕ್ಷದಲ್ಲಿ ಸಿದ್ಧವಾಗಿದೆ. ಅಧ್ಯಕ್ಷೆ ಜುಲೇಖಾಬೀ ಅವರ ಅವಧಿಯಲ್ಲಿ ನರೇಗಾ ಯೋಜನೆ ಕೆಲಸ ಸಾಕಷ್ಟು ನಡೆದಿದೆ. ಎರಡು ಹಂತದಲ್ಲಿ ಎರಡು ಕೋಟಿ ಕೆಲಸ ಚಾಲ್ತಿಯಲ್ಲಿದೆ. ಬಾಕ್ಸ್ ಚರಂಡಿ, ರಸ್ತೆ, ಕಾಂಪೌಂಡ್, ಕಟ್ಟೆ ಹೀಗೆ ಅನೇಕ ಕೆಲಸ ನಡೆದಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜುಲೇಖಾಬೀ, ಉಪಾಧ್ಯಕ್ಷೆ ಸುಮಿತ್ರಾ ಶಿವಯ್ಯ, ಸದಸ್ಯರಾದ ಮಂಜುಳಾ, ಶಿವಾನಂದಯ್ಯ, ಮಾಯಣ್ಣ, ಸಿದ್ದರಾಜು, ಲಾವಣ್ಯ, ರಾಜು, ನಾಗರಾಜು, ಚಂದ್ರು, ಮಹಮದ್ ವಾರಿಸ್, ರಾಮಕೃಷ್ಣಯ್ಯ, ಲಕ್ಷ್ಮಣ, ಹನುಮಂತಯ್ಯ, ದೊಡ್ಡ ಹನುಮಯ್ಯ, ಹೋಬಳಿ ಜೆಡಿಎಸ್ ಅಧ್ಯಕ್ಷ ಜಗದೀಶ್, ಮುಖಂಡರಾದ ವೀರಣ್ಣಗುಡಿ ರಾಮಣ್ಣ, ಕೃಷ್ಣೇಗೌಡ, ಜಾವೀದ್ ಪಾಷಾ, ಅಶ್ವಕ್ ಪಾಷಾ, ಗುತ್ತಿಗೆದಾರರಾದ ರಾಮಲಿಂಗೇಗೌಡ, ರುದ್ರಪ್ರಸಾದ್, ಎಇಇ ನಟರಾಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...