ಗುಬ್ಬಿ | ಬಡವರ ಔಷಧಿ ಕಸಿದ ಕಾಂಗ್ರೆಸ್ ಸರ್ಕಾರ : ಬಿಜೆಪಿ ಆರೋಪ

Date:

ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿದ ಜನೌಷಧಿ ಕೇಂದ್ರವನ್ನು ರಾಜ್ಯ ಸರ್ಕಾರ ಮುಚ್ಚಿಸುವ ಕೆಲಸ ಮಾಡಿ ಬಡವರ ಔಷಧಿ ಕಸಿದಿದೆ. ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಜನವಿರೋಧಿ ಎಂದು ರುಜುವಾತು ಮಾಡಿದೆ ಎಂದು ಆರೋಪಿಸಿ ಗುಬ್ಬಿ ಬಿಜೆಪಿ ಘಟಕದ ಎಲ್ಲಾ ಮುಖಂಡರು ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಮೌನ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಭೈರಪ್ಪ ಮಾತನಾಡಿ ಸಂಯುಕ್ತ ಆಡಳಿತ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜೊತೆಗೂಡಿ ಕೆಲಸ ಮಾಡಿ ಜನಪರ ಯೋಜನೆ ಅನುಷ್ಠಾನ ಮಾಡಬೇಕಿದೆ. ಈ ಹಿಂದೆ ಮೋದಿ ಅವರ ಆಡಳಿತಾವಧಿಯಲ್ಲಿ ನಮ್ಮ ರಾಜ್ಯದ ಅನಂತಕುಮಾರ್ ಅವರ ಕೊಡುಗೆಯಾದ ಜನೌಷಧಿ ಕೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭವಾಯಿತು. ಬಡವರ ಪಾಲಿಗೆ ಜೀವಾಮೃತವಾದ ಈ ಕೇಂದ್ರವನ್ನು ಈಗ ಕಾಂಗ್ರೆಸ್ ಸರ್ಕಾರ ಮುಚ್ಚುವ ಕೆಲಸ ಮಾಡಿದೆ. ಹೀಗೆ ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿದ ಹೊಸ ಶಿಕ್ಷಣ ನೀತಿಯನ್ನು ಸಹ ರದ್ದು ಮಾಡಿದ್ದರು. ಒಟ್ಟಾರೆ ಜನಪರ ಕೆಲಸ ಮಾಡುವ ಕಾರ್ಯಕ್ರಮವನ್ನು ಜಾರಿ ಮಾಡದೆ ಕಾಂಗ್ರೆಸ್ ಸಲ್ಲದ ರಾಜಕಾರಣ ಮಾಡುತ್ತಿದೆ. ಮತ್ತೊಮ್ಮೆ ಜನವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಗುಡುಗಿದ ಅವರು ಮೆಡಿಕಲ್ ಮಾಫಿಯಾ ಜೊತೆ ಕೈಜೋಡಿಸಿರುವ ಆರೋಗ್ಯ ಸಚಿವರು ಈ ಕೆಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ ಮಾತನಾಡಿ ಕೇಂದ್ರದ ಮೋದಿ ಅವರ ನೇತೃತ್ವದ ಸರ್ಕಾರ ಜನಪರ ಯೋಜನೆಗಳನ್ನು ನಿರಂತರವಾಗಿ ಜಾರಿ ಮಾಡುತ್ತಿದೆ. ಇಂತಹ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕಾದ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುತ್ತಿದೆ. ಕ್ರೆಡಿಟ್ ಬಿಜೆಪಿಗೆ ಬರುತ್ತದೆ ಎಂಬ ಕಾರಣಕ್ಕೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಮುಚ್ಚಿದ್ದು ಬೇಸರದ ಸಂಗತಿಯಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಸರ್ಕಾರ ಕೊಡುವ ನಾಲ್ಕು ಮತ್ತೊಂದು ಔಷಧಿ ಮಾತ್ರ ಜನರನ್ನು ಕಾಪಾಡುವುದಿಲ್ಲ. ಕೇಂದ್ರ ಸರ್ಕಾರ ಹಲವು ಔಷಧಿ ಕಂಪೆನಿಯ ಜೊತೆ ಸಹಯೋಗ ಬೆಳೆಸಿ ಕಡಿಮೆ ಬೆಲೆಗೆ ಉತ್ತಮ ಔಷಧಿ ನೀಡುತ್ತಿದೆ. ಜನರ ಮನಸ್ಸು ಗೆದ್ದ ಈ ಕೇಂದ್ರ ಮುಚ್ಚುವ ಆಲೋಚನೆ ಮಾಡಿದ ರಾಜ್ಯ ಸರ್ಕಾರ ಕೆಟ್ಟ ರಾಜಕೀಯ ಮಾಡಿದೆ. ಇದು ಸರಿಯಲ್ಲ. ಕೂಡಲೇ ಔಷಧಿ ಕೇಂದ್ರ ಮೊದಲಿನಂತೆ ನಡೆಸಿ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್, ಬ್ಯಾಟರಂಗೇಗೌಡ, ಪಿ.ಬಿ.ಚಂದ್ರಶೇಖರ ಬಾಬು, ಯತೀಶ್, ಸಿದ್ದರಾಮಯ್ಯ, ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ, ಬಿ.ಎಸ್.ಪಂಚಾಕ್ಷರಿ, ಜಿ.ಆರ್.ಪ್ರಕಾಶ್, ಪ್ರಮೋದ್, ಬಸವರಾಜು, ಎಪಿಕೆ ರಾಜು, ಅನಿಲ್, ಸ್ವಾಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...