ಗುಬ್ಬಿ | ಡಿಸೆಂಬರ್ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ.

Date:

ನವಂಬರ್ ಕಳೆದು ಡಿಸೆಂಬರ್ ತಿಂಗಳೊಳಗೆ ಈ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಗ್ಯಾರಂಟಿ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಭವಿಷ್ಯ ನುಡಿದರು.

ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಎನ್.ಪಾಳ್ಯ ಗ್ರಾಮದ ಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ಸರ್ಕಾರದ ನಡವಳಿಕೆ ಗಮನಿಸುತ್ತಿರುವ ಪ್ರತಿಯೊಬ್ಬ ಪ್ರಜೆಯ ಕಣ್ಣಿಗೂ ಸರ್ಕಾರ ಬಿದ್ದು ಹೋಗುವ ಲಕ್ಷಣ ಕಾಣುತ್ತಿದೆ. ಈ ಬಗ್ಗೆ ಭವಿಷ್ಯ ಹೇಳುವ ಅಗತ್ಯವಿಲ್ಲ ಎಂದರು.

ಸಹಕಾರ ಸಚಿವ ರಾಜಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋದಾಗ ಪೊಲೀಸರು ಆತಂಕ ಪಟ್ಟರು. ಖಾಸಗಿ ಕಾರ್ಯಕ್ರಮದಲ್ಲಿ ಯಾವ ರೀತಿಯ ಗದ್ದಲ ಮಾಡುವ ಸಣ್ಣ ಬುದ್ಧಿ ನಮ್ಮದಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹೇಳಿದೆ. ಹೇಮಾವತಿ ಹೋರಾಟ ಹಿನ್ನಲೆ ಮಾಧ್ಯಮದಲ್ಲಿ ಹೇಳಿಕೆ ನೀಡಿಯೇ ಹೋರಾಟ ಮಾಡುತ್ತೇವೆ ಎಂದ ಅವರು ಜುಲೈ 5 ರಂದು ಮುಖ್ಯಮಂತ್ರಿಗಳು ಹೇಮಾವತಿ ವಿಚಾರಕ್ಕೆ ಮೀಟಿಂಗ್ ಆಯೋಜನೆ ಮಾಡುತ್ತಾರೆ ಎಂಬ ವದಂತಿ ಇದೆ. ಈವರೆವಿಗೂ ನಮಗೆ ಆಹ್ವಾನ ಬಂದಿಲ್ಲ. ಬಂದರೆ ಸಭೆಗೆ ತೆರಳಿ ಜಿಲ್ಲೆಯ ಪರ ವಾದ ಮಾಡುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರುವೇಕೆರೆಗೆ ಕಾನೂನು ಕಾಲೇಜು ಮಂಜೂರು ಹಾಗೂ ಸಿ.ಎಸ್.ಪುರದಲ್ಲಿ ಪಾಲಿಟೆಕ್ನಿಕ್ ಕಾಲೇಜು ಬಗ್ಗೆ ಮುಖ್ಯಮಂತ್ರಿಗಳಿಗೆ ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಂದುಬಿಡು. ಎಲ್ಲವೂ ಮಂಜೂರು ಮಾಡುತ್ತೇನೆ ಎನ್ನುತ್ತಾರೆ. ದೇವೇಗೌಡರ ಜೊತೆ ಪಕ್ಷ ಕಟ್ಟಿದವನು ನಾನು. ಜೆಡಿಎಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದ ಅವರು ರೊಟ್ಟಿ ಕಟ್ಟಿಕೊಂಡು ಪಕ್ಷ ಕಟ್ಟಿದ ದೇವೇಗೌಡರಿಗೆ ವಯಸ್ಸಾಗಿದೆ. ಕುಮಾರಣ್ಣ ಕೇಂದ್ರದ ಸಚಿವರಾಗಿ ಜವಾಬ್ದಾರಿ ಹೆಚ್ಚಿದೆ. ಆ ಕಾರಣ ನಿಖಿಲ್ ಕುಮಾರಸ್ವಾಮಿ ಅವರೇ ರಾಜ್ಯ ಪ್ರವಾಸ ಮಾಡಿ ಪಕ್ಷ ಬಲಗೊಳಿಸುತ್ತಿದ್ದಾರೆ. ಬೇಸಿಗೆಯಲ್ಲಿ ಒಣಗಿ ಮಳೆಗಾಲದಲ್ಲಿ ಚಿಗುರುವ ಗರಿಕೆ ಹುಲ್ಲಿನ ರೀತಿ ಜೆಡಿಎಸ್ ಪಕ್ಷ ಮತ್ತೇ ಶಕ್ತಿಯುತವಾಗಲಿದೆ ಎಂದರು.

2014 ರಲ್ಲಿ ಮಂಜೂರಾದ ಸಿ.ಎಸ್.ಪುರ ಡಿಗ್ರಿ ಕಾಲೇಜು ಈಗ ಸ್ವಂತ ಕಟ್ಟಡ ಹೊಂದಿದೆ. ಈ ಹೋಬಳಿಯ ರೈತಾಪಿ ವರ್ಗ ತಮ್ಮ ಮಕ್ಕಳನ್ನು ಕಾಲೇಜಿಗೆ ಸೇರಿಸಿ ದಾಖಲಾತಿ ಹೆಚ್ಚಿಸಿ. ಉತ್ತಮ ಉಪನ್ಯಾಸಕರ ತಂಡ ಇಲ್ಲಿದೆ. ನೂರು ಸಂಖ್ಯೆ ದಾಟಿರುವ ದಾಖಲಾತಿ 300 ಕ್ಕೆ ಹೆಚ್ಚಿದಲ್ಲಿ ಮತ್ತಷ್ಟು ಕಟ್ಟಡಗಳು, ಅವಶ್ಯ ಎಲ್ಲಾ ಸವಲತ್ತು ಒದಗಿಸುವ ಭರವಸೆ ನೀಡಿದ ಅವರು ಹೌಸಿಂಗ್ ಬೋರ್ಡ್ ಮೂಲಕ ಮತ್ತೆ ಎರಡು ಕೋಟಿ ಮಂಜೂರಾತಿಗೆ ಸಚಿವರ ಜೊತೆ ಮಾತನಾಡುತ್ತೇನೆ. ಕೇಂದ್ರ ಸಚಿವ ಕುಮಾರಣ್ಣ ಅವರ ಮೂಲಕ ತುರುವೇಕೆರೆ ಕ್ಷೇತ್ರಕ್ಕೆ ಹೆಚ್ಚುವರಿ 50 ಬಸ್ಸುಗಳನ್ನು ಮಜೂರು ಮಾಡಿಸುವ ಭರವಸೆ ನೀಡಿದರು.

ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಕೆ.ರಾಮಕೃಷ್ಣ ರೆಡ್ಡಿ ಮಾತನಾಡಿ ಹೋಬಳಿ ಮಟ್ಟದಲ್ಲಿ ಮೂರು ಎಕರೆ ಪ್ರದೇಶದಲ್ಲಿ 3.50 ಕೋಟಿ ವೆಚ್ಚದ ಸುಸಚ್ಚಿತ ಕಟ್ಟಡ ಕಾಲೇಜು ವಾತಾವರಣಕ್ಕೆ ಮಕ್ಕಳ ಶಿಕ್ಷಣ ಉತ್ತಮವಾಗಲಿದೆ. ಪ್ರತಿಭಾವಂತ ಉಪನ್ಯಾಸಕರು ಇರುವ ಕಾಲೇಜಿನಲ್ಲಿ ಮಕ್ಕಳ ಅಧ್ಯಯನ ಮಾಡಿಸಿದಲ್ಲಿ ಮಕ್ಕಳ ಭವಿಷ್ಯ ಉಜ್ವಲ ಆಗಲಿದೆ. ಈ ಜೊತೆಗೆ ಕಾಲೇಜು ಅಬಿವೃದ್ದಿ ಸಮಿತಿ ಈ ವರ್ಷ ದಾಖಲಾಗುವ ಎಲ್ಲಾ ಮಕ್ಕಳ ಶುಲ್ಕ ಭರಿಸುವ ವಾಗ್ದಾನ ಮೆಚ್ಚುವಂತದ್ದು ಎಂದು ಸ್ಥಳೀಯ ಮುಖಂಡರ ಆಸಕ್ತಿಯನ್ನು ಶ್ಲಾಘಿಸಿದರು.

ಕಾಲೇಜು ಅಭಿವೃದ್ದಿ ಸಮಿತಿಯ ನಂಜೇಗೌಡ, ಜನ್ನೇನಹಳ್ಳಿ ನರಸಿಂಹಮೂರ್ತಿ, ಬಿರ್ಲೇಗೌಡ ಮಾತನಾಡಿದರು.

ನಂತರ ವೇದಿಕೆಯಲ್ಲಿ ನೂತನ ಕಾಲೇಜು ಕಟ್ಟಡ ನಿರ್ಮಾಣ ಮಾಡಿಸಿದ ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ದುರ್ಗಮ್ಮ, ಪ್ರಾಂಶುಪಾಲ ಡಾ.ಆರ್.ಪುಟ್ಟರಾಜು, ಗೃಹ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಸೌಮ್ಯ, ಸಹಾಯಕ ಅಭಿಯಂತರರಾದ ಆಶಾ, ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯರಾದ ರಾಜ್ ಗೋಪಾಲ್, ನರಸೇಗೌಡ, ಈಶ್ವರ್ ಗೌಡ, ನವೀನ್, ತಾಪಂ ಮಾಜಿ ಅಧ್ಯಕ್ಷ ಸಿದ್ದರಾಮಣ್ಣ, ಬೋರಪ್ಪನಹಳ್ಳಿ ಕುಮಾರ್, ಜಗದೀಶ್, ಗಿರೀಶ್, ಅನುಸೂಯಮ್ಮ, ಮಹಾಲಕ್ಷಮ್ಮ, ಪಿಯು ಕಾಲೇಜಿನ ಪ್ರಾಚಾರ್ಯ ವೆಂಕಟಾಚಲಯ್ಯ, ಉಪ ಪ್ರಾಚಾರ್ಯ ಗೋವಿಂದರಾಜು
ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...