ಗುಬ್ಬಿ | ದಲಿತ ಕುಟುಂಬ ಒಕ್ಕಲೆಬ್ಬಿಸುವ ಹುನ್ನಾರ : ತಾಲೂಕು ಆಡಳಿತಕ್ಕೆ ದೂರು ನೀಡಿದ ಹಿಂಡಿಸಿಗೆರೆ ಕಾಲೋನಿ ನಿವಾಸಿಗಳು

Date:

ಹಲವು ವರ್ಷಗಳಿಂದ ಕೃಷಿ ನಡೆಸಿಕೊಂಡು ಬದುಕು ಕಟ್ಟಿಕೊಂಡ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿರುವ ಪ್ರಭಾವಿಗಳ ಮಾತಿಗೆ ಮಣೆ ಹಾಕಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹತ್ತು ಕುಟುಂಬವನ್ನು ಬೀದಿಗೆ ತಂದಿದ್ದಾರೆ. ಈ ಜಮೀನು ನಂಬಿ ಬದುಕು ಕಟ್ಟಿಕೊಂಡ ದಲಿತ ಕುಟುಂಬಕ್ಕೆ ತಾಲ್ಲೂಕು ಆಡಳಿತ ನೆರವಾಗಿ ನಿಂತು ಸ್ಥಳ ಪರಿಶೀಲಿಸಿ ಜಮೀನು ಉಳಿಸಿಕೊಡಬೇಕು ಎಂದು ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹಿಂಡಿಸಿಗೆರೆ ಗ್ರಾಮದ ಕಾಲೋನಿಯ ಸಂತ್ರಸ್ತ ದಲಿತ ಕುಟುಂಬ ಸದಸ್ಯರು ಅರ್ಜಿ ಮೂಲಕ ತಮ್ಮ ಅಳಲು ತೋಡಿಕೊಂಡರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿಗೆ ಬಂದ ಹಿಂಡಿಸಿಗೆರೆ ದಲಿತ ಕುಟುಂಬದ ಸದಸ್ಯರು ತಮ್ಮ ಬದುಕಿಗೆ ಅತ್ಯಗತ್ಯ ಗೋಮಾಳ ಜಮೀನು ನಮಗೆ ನೀಡಿ ಜೀವನ ಕಟ್ಟಿಕೊಡಬೇಕು. ದುರುದ್ದೇಶದಿಂದ ಕೆಲ ಪ್ರಭಾವಿಗಳು ತಮ್ಮ ಜಮೀನಿಗೆ ರಸ್ತೆ ಮಾಡಿಕೊಳ್ಳಲು ಈ ದಲಿತರ ಜಮೀನಿನ ಮೇಲೆ ಕಣ್ಣು ಹಾಕಿದ್ದಾರೆ. ಗ್ರಾಮ ಪಂಚಾಯಿತಿ ಮೂಲಕ ಉದ್ದೇಶವಾಗಿ ಆಶ್ರಯ ಯೋಜನೆಯಡಿ ಇದೇ ಜಮೀನು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ದಲಿತ ಕುಟುಂಬವನ್ನು ಅಮಾನವೀಯವಾಗಿ ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಕೂಡಲೇ ವಾಸ್ತವ ಚಿತ್ರಣ ಪರಿಶೀಲಿಸಿ ದಲಿತರನ್ನು ಉಳಿಸಿ ಎಂದು ಸಂತ್ರಸ್ತರು ತಹಶೀಲ್ದಾರ್ ಬಿ.ಆರತಿ ಅವರಿಗೆ ಮನವಿ ಸಲ್ಲಿಸಿದರು.

ಸರ್ವೇ ನಂಬರ್ 48 ರಲ್ಲಿನ 8.13 ಎಕರೆ ಗೋಮಾಳದಲ್ಲಿ ಐದು ದಶಕಗಳಿಂದ ಸುಮಾರು ಹತ್ತು ಕುಟುಂಬ ಬದುಕು ನಡೆಸಿದೆ. ತುಂಡು ಭೂಮಿಯಲ್ಲೇ ಕೃಷಿ ನಡೆಸುವ ಮುಗ್ಧ ದಲಿತ ಕುಟುಂಬದ ಮೇಲೆ ಇಲ್ಲಿನ ಸ್ಥಳೀಯ ಪ್ರಭಾವಿ ಮುಖಂಡರ ಕಣ್ಣು ಬಿದ್ದಿದೆ. ಪ್ರಭಾವಿಗಳ ಜಮೀನಿಗೆ ಸೂಕ್ತ ರಸ್ತೆ ಮಾಡಿಕೊಳ್ಳಲು ಈ ದಲಿತರ ಭೂಮಿ ಕಸಿದು ಆಶ್ರಯ ಹೆಸರಿನಲ್ಲಿ ಅವರ ತೋಟಕ್ಕೆ ರಸ್ತೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅಕ್ರಮ ಸಕ್ರಮ ಅರ್ಜಿ ಹಾಕಿ ತುಂಡು ಜಮೀನು ಉಳಿಸಿಕೊಳ್ಳುವ ಯತ್ನದಲ್ಲಿದ್ದ ಹತ್ತು ಕುಟುಂಬಕ್ಕೆ ಶಾಕ್ ನೀಡಿದ ಗ್ರಾಮ ಪಂಚಾಯಿತಿ ದಿಢೀರ್ ನಿವೇಶನ ಮಾಡಲು ಮುಂದಾಗಿರುವುದು ದಲಿತ ಕುಟುಂಬಕ್ಕೆ ಆತಂಕ ತಂದಿದೆ. ಈ ಹುನ್ನಾರಕ್ಕೆ ದಲಿತರು ಬಲಿಯಾಗದಂತೆ ತಾಲ್ಲೂಕು ಆಡಳಿತ ಕ್ರಮ ವಹಿಸಬೇಕು. ಈ ಗೋಮಾಳದಲ್ಲಿ ಮೂವರು ದಲಿತರಿಗೆ ಮಾತ್ರ ಸುಮಾರು ಒಂದು ಎಕರೆಯಷ್ಟು ಮಾತ್ರ ಪಹಣಿ ಆಗಿದ್ದು ದುರಸ್ಥಿ ಕಾರ್ಯ ಆಗಿಲ್ಲ. ಈ ಜಮೀನಲ್ಲಿ ಹಿರಿಯರ ಅಂತ್ಯ ಸಂಸ್ಕಾರ ಕೂಡಾ ನಡೆಸಲಾಗಿದೆ ಎಂದು ದಲಿತ ಮುಖಂಡ ಮಂಜುನಾಥ್ ವಾಸ್ತವಾಂಶ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ತಾಪಂ ಇಓ ಶಿವಪ್ರಕಾಶ್ ಅವರಿಗೂ ಮನವಿ ಸಲ್ಲಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿ ದಲಿತ ಕುಟುಂಬವನ್ನು ಉಳಿಸುವಂತೆ ಮನವಿ ಮಾಡಿದರು.

ಮೂಡಲಗಿರಿ, ವೆಂಕಟೇಶಯ್ಯ, ಮಂಜುನಾಥ್, ತಿಮ್ಮಯ್ಯ, ದೊಡ್ಡಮ್ಮ, ಶಿವಕುಮಾರ್, ಸಿದ್ದಯ್ಯ, ಜಯಲಕ್ಷ್ಮಮ್ಮ, ಮಂಗಳಮ್ಮ, ಕೆಂಪಮ್ಮ, ಲಕ್ಷ್ಮಮ್ಮ, ಸ್ವಾಮಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...