ಗುಬ್ಬಿ | ಜೈ ಭೀಮ್ ಹಾಡು ಹಾಕಿದ್ದಕ್ಕೆ ದಲಿತ ಯುವಕನ ಮೇಲೆ ಗಂಭೀರ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು

Date:

ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿ ಬರುತ್ತಿದ್ದ ಅಂಬೇಡ್ಕರ್ ಅವರ ಜೈ ಭೀಮ್ ಹಾಡು ಕೇಳಿ ಆಕ್ರೋಶಗೊಂಡು ಹಾಲಿನ ವಾಹನ ತಡೆದು ಈ ಹಾಡು ಹಾಕದಂತೆ ವಾಹನದಲ್ಲಿದ್ದ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮರ್ಮಾಂಗಕ್ಕೆ ಗಂಭೀರವಾಗಿ ಹೊಡೆದು ಜಾತಿ ನಿಂದನೆ ಮಾಡಿರುವ ಘಟನೆಯ ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ಗುಬ್ಬಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದ ರೈಲ್ವೆ ಇಲಾಖೆ ಪೊಲೀಸ್ ಚಂದ್ರಶೇಖರ್ ಮತ್ತು ಮತ್ತೊಬ್ಬ ವ್ಯಕ್ತಿ ನರಸಿಂಹರಾಜು ಎನ್ನುವವರು ಜಾತಿ ನಿಂದನೆ ಮಾಡಿ ದಲಿತ ಯುವಕನ ಮರ್ಮಾಂಗಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಹಲ್ಲೆಗೊಳಗಾದ 19 ವರ್ಷದ ದೀಪು ಎಂಬಾತ ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ ಯುವಕ ಎನ್ನಲಾಗಿದ್ದು ಮತ್ತೊಬ್ಬ ನರಸಿಂಹಮೂರ್ತಿ ಸೇರಿದಂತೆ ಇಬ್ಬರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಂದಿನಂತೆ ಹಾಲಿನ ವಾಹನ ಚಾಲನೆ ಮಾಡಿಕೊಂಡು ಇಬ್ಬರು ದಲಿತ ಸಮುದಾಯದ ಯುವಕರು ಸರಿಸುಮಾರು ಸಂಜೆ 6 ಗಂಟೆ ಸಮಯದಲ್ಲಿ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಅವರಿಗೆ ಇಷ್ಟವಾದ ಬಾಬಾ ಸಾಹೇಬ ಅಂಬೇಡ್ಕರ್ ಅವರ ಬಗೆಗಿನ ಜೈ ಭೀಮ್ ಹಾಡು ಹಾಕಿಕೊಂಡು ಬರುತ್ತಿದ್ದ ವೇಳೆ ಈ ಇಬ್ಬರು ವ್ಯಕ್ತಿಗಳು ರಸ್ತೆಯಲ್ಲಿ ಅಡ್ಡಗಟ್ಟಿ ನೀವು ಯಾವ ಜಾತಿಯವರು ಎಂದು ಜಾತಿ ನಿಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೊತೆಗೆ ಈ ಹಾಡು ಎಲ್ಲಿಯೂ ಹಾಕದಂತೆ ತಾಕೀತು ಮಾಡಿರುವ ಘಟನೆ ಖಂಡನೀಯ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಎಂದು ದಲಿತ ಮುಖಂಡರು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...