ಗುಬ್ಬಿ | ತ್ಯಾಗಟೂರು ಗ್ರಾಮ ಪಂಚಾಯಿತಿ ಭವನ ಲೋಕಾರ್ಪಣೆ

Date:

ಆಡಳಿತ ವ್ಯವಸ್ಥೆಗೆ ಅತ್ಯವಶ್ಯ ಸುಸಜ್ಜಿತ ಗ್ರಾಮ ಪಂಚಾಯಿತಿ ಭವನ ಕಟ್ಟಲು ಹತ್ತಾರು ವರ್ಷದ ಪ್ರಯತ್ನ ಗುರುವಾರ ಫಲಿಸಿದ ಹಿನ್ನಲೆ ತ್ಯಾಗಟೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಭವನವನ್ನು ಲೋಕಾರ್ಪಣೆ ಗೊಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ತೆಂಗು ನಾರಿನ ಸಹಕಾರ ಮಂಡಳಿ ಅಧ್ಯಕ್ಷ ಟಿ.ಎಸ್.ಕಿಡಿಗಣ್ಣಪ್ಪ ಮಾತನಾಡಿ ಸಾವಿರಕ್ಕೂ ಅಧಿಕ ಜನಸಂಖ್ಯೆಯ ತ್ಯಾಗಟೂರು ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸುಸಜ್ಜಿತ ಕಟ್ಟಡ ಇಲ್ಲದೆ ಪಂಚಾಯಿತಿ ಆಡಳಿತ ಬೇಸರದಲ್ಲಿತ್ತು. ನೆನೆಗುದಿಗೆ ಬಿದ್ದಿದ್ದ ಕಟ್ಟಡ ಕಾಮಗಾರಿಯನ್ನು ನರೇಗಾ ಯೋಜನೆ ಬಳಸಿ ಈಗಿನ ಆಡಳಿತ ಮಂಡಳಿ ವ್ಯವಸ್ಥಿತವಾಗಿ ಕಟ್ಟಿದೆ. ಇದು ಇಡೀ ಪಂಚಾಯಿತಿಗೆ ಸಲ್ಲಬೇಕಾದ ಗೌರವ ಎಂದ ಅವರು ಸಭೆ, ತರಬೇತಿ, ಕಾರ್ಯಕ್ರಮಗಳು ನಡೆಸಲು ಅವಕಾಶ ಇದ್ದು ಆಡಳಿತ ಕರ್ತವ್ಯಕ್ಕೆ ಅನುವು ಮಾಡಿರುವುದು ಮೆಚ್ಚುವಂತಹದ್ದು ಎಂದರು.

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಪರಮಶಿವಯ್ಯ ಮಾತನಾಡಿ ಕೃಷಿ ಇಲಾಖೆಯ ಕಟ್ಟಡವನ್ನು ಪಡೆದು ಸಭೆ ನಡೆಸುವ ಅನಿವಾರ್ಯ ಎದುರಾಗಿತ್ತು. ಹತ್ತು ವರ್ಷಗಳ ಹಿಂದೆ 15 ಲಕ್ಷ ಹಣ ಬಳಸಿ ಕಟ್ಟಡ ಒಂದು ಹಂತಕ್ಕೆ ತರಲಾಗಿತ್ತು. ನಂತರ ಕೆಲ ವರ್ಷಗಳ ಸಾಹಸದಿಂದ ಭವನ ನಿರ್ಮಾಣ ಕೈಗೂಡಿದೆ. ಈಗಿನ ಎಲ್ಲಾ ಸದಸ್ಯರ ಮುತುವರ್ಜಿಯಿಂದ ಸುಸಜ್ಜಿತ ಭವನ ನಿರ್ಮಾಣ ಆಗಿದೆ ಎಂದರೆ ತಪ್ಪಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎನ್.ಓಂಕಾರ ಪ್ರಸಾದ್ ಮಾತನಾಡಿ ಅತ್ಯಂತ ಕಿರಿದಾದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಭೆ, ತರಬೇತಿ ಇನ್ನಿತರ ಕಾರ್ಯಕ್ರಮ ನಡೆಯಬೇಕಿತ್ತು. ಕಿಷ್ಕಿಂದೆ ಎಂತಹ ಸ್ಥಳದಲ್ಲಿ ನಮ್ಮ ಆಡಳಿತ ಕೆಲಸಕ್ಕೆ ಸಾಕಷ್ಟು ಮುಜುಗರ ಆಗುತ್ತಿತ್ತು. ಪಿಡಿಓ ಮೇಡಂ ಅವರ ಸಹಕಾರದಲ್ಲಿ ನರೇಗಾ ಯೋಜನೆ ಬಳಸಿ ಸುಸಜ್ಜಿತ ಭವನ ಸಾರ್ವಜನಿಕ ಸೇವೆಗೆ ಸಜ್ಜಾಗಿದೆ. ಎಲ್ಲಾ ಸದಸ್ಯರ ಶ್ರಮ ಇದರಲ್ಲಿದೆ ಎಂದರು.

ಇದೇ ಸಂದರ್ಭದಲ್ಲಿ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲರಿಗೂ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ನಳಿನಾ ಪ್ರಕಾಶ್, ಬಿಜೆಪಿ ಮುಖಂಡ ಸಾಗರನಹಳ್ಳಿ ನಂಜೇಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಆರ್.ವೆಂಕಟೇಶ್, ಗ್ರಾಪಂ ಸದಸ್ಯರಾದ ಶಿವಕುಮಾರಸ್ವಾಮಿ, ಲಕ್ಷ್ಮೀಪತಿ, ಮಂಜುನಾಥ್, ವಿಜಯಲಕ್ಷ್ಮಿ, ಭವ್ಯ, ಪಂಕಜ, ಜಯಮಾಲಾ, ಭೈರಮ್ಮ, ವಿದ್ಯಾಧರ, ಅಂಬಿಕಾ, ಶಿವನಂಜಯ್ಯ, ತಾಪಂ ಸಹಾಯಕ ನಿರ್ದೇಶಕ ರಂಗನಾಥ್, ಪಿಡಿಓ ವನಜಾಕ್ಷಿ, ಕಾರ್ಯದರ್ಶಿ ಲೋಕೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...