ಗುಬ್ಬಿ | ವಸತಿ ರಹಿತರಿಗೆ ನಿವೇಶನ ಹಂಚಿಕೆ ವಿಳಂಬ : ತ್ಯಾಗಟೂರು ಪಂಚಾಯಿತಿ ಮುಂದೆ ಸಂತ್ರಸ್ತರ ಅಳಲು

Date:

ಜಿಲ್ಲಾಧಿಕಾರಿಗಳ ಹೆಸರಿನ ಮೀಸಲು ಜಮೀನಲ್ಲಿ ನಾಲ್ಕು ಎಕರೆ ಆಶ್ರಯ ಯೋಜನೆಗೆ ಒಳಪಡಿಸಿ ತ್ಯಾಗಟೂರು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದ್ದರೂ ವಸತಿ ಹೀನರಿಗೆ ನಿವೇಶನ ಹಂಚಿಕೆ ಮಾಡಲು ಯಾವುದೇ ಕ್ರಮ ವಹಿಸದ ಪಂಚಾಯಿತಿ ಆಡಳಿತ ಮೀನಾಮೇಷ ಎಣಿಸುತ್ತಿದೆ ಎಂದು ಸಾಮಾನ್ಯ ಸಭೆ ನಡೆಯುವ ವೇಳೆ ಕಚೇರಿ ಮುಂದೆ ಸಂತ್ರಸ್ತ ಅರ್ಜಿದಾರರು ತಮ್ಮ ಅಳಲು ತೋಡಿ ಕೊಂಡರು.

ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಹ ಬೊಮ್ಮರಸನಹಳ್ಳಿಯ ಸರ್ವೇ ನಂಬರ್ 101/2 ಜಮೀನು ಜಿಲ್ಲಾಧಿಕಾರಿಗಳ ಹೆಸರಿನಲ್ಲಿದೆ. ಅಭಿವೃದ್ದಿ ಕೆಲಸಕ್ಕೆ ಮೀಸಲು ಇದ್ದ ಈ ಜಮೀನಲ್ಲಿ ನಾಲ್ಕು ಎಕರೆ ವಸತಿ ಹಿನರಿಗೆ ಹಂಚಿಕೆ ಮಾಡಲು ಸೂಚಿಸಿ ಹಸ್ತಾಂತರ ಮಾಡಿದರೂ ಬಡವರಿಗೆ ನಿವೇಶನ ನೀಡಲಾಗಿಲ್ಲ ಎಂಬ ವಿಚಾರ ಪ್ರಸ್ತಾಪವಾಗಿದೆ. ಈ ಬಗ್ಗೆ ಸೂಕ್ತ ಉತ್ತರಕ್ಕಾಗಿ ಅರ್ಜಿದಾರರು ಕಾದು ಕುಳಿತು ನಂತರ ಸುದ್ದಿಗಾರರ ಜತೆ ತಮ್ಮ ಅಳಲು ತೋಡಿಕೊಂಡರು.

ದಲಿತ ಮುಖಂಡ ಈಶ್ವರಯ್ಯ ಮಾತನಾಡಿ ಹಲವು ವರ್ಷದಿಂದ ಅರ್ಜಿ ಹಾಕಿ ನಿವೇಶನಕ್ಕೆ ಕಾದು ಕುಳಿತಿದ್ದೇವೆ. ಪಂಚಾಯಿತಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಮೀಸಲು ಜಮೀನು ಪರಿವರ್ತನೆ ಮಾಡಿ ನಿವೇಶನ ವಿಂಗಡನೆ ಮಾಡಲು ಮೀನಾ ಮೇಷ ಎಣಿಸಲು ಸೂಕ್ತ ಉತ್ತರ ನೀಡಬೇಕು. ಸರ್ಕಾರ ಜಮೀನು ನೀಡಿದರೂ ಸ್ಥಳೀಯ ಸಂಸ್ಥೆ ಪಂಚಾಯಿತಿ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಪಂ ಮಾಜಿ ಅಧ್ಯಕ್ಷ ಉಮೇಶ್ ಮಾತನಾಡಿ ಜಿಲ್ಲಾಧಿಕಾರಿಗಳು ಮೀಸಲು ಜಮೀನು ವಸತಿ ಯೋಜನೆಗೆ ಒಳಪಡಿಸಿ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಸೂಚಿಸಲಾಗಿದೆ. ಆದರೆ ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎಂಬಂತೆ ಹೇಳುತ್ತಿರುವುದು ನಮ್ಮಗಳ ವಿಪರ್ಯಾಸ ಎಂದು ಅಳಲು ತೋಡಿಕೊಂಡರು.

ಸಂತ್ರಸ್ತ ಅರ್ಜಿದಾರರು ಕೂಡಲೇ ನಿವೇಶನ ಹಂಚಿಕೆ ಮಾಡಿ ಬಡವರಿಗೆ ವಸತಿ ಕರುಣಿಸಬೇಕು ಎಂದು ಮತ್ತೊಮ್ಮೆ ಆಗ್ರಹಿಸಿ ಗ್ರಾಮ ಪಂಚಾಯಿತಿಗೆ ಒತ್ತಡ ಹೇರಿದರು.

ಸಂತ್ರಸ್ತರ ಅಳಲು ಆಲಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಂಕಾರ ಪ್ರಸಾದ್ ಮಾತನಾಡಿ ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೊಮ್ಮರಸನಹಳ್ಳಿ, ಸಾಗರನಹಳ್ಳಿ, ಕೋಡಿ ನಾಗೇನಹಳ್ಳಿ ಗ್ರಾಮದಲ್ಲಿ ನಿವೇಶನಕ್ಕೆ ಜಮೀನು ಮೀಸಲಿಟ್ಟು ಪಂಚಾಯಿತಿಗೆ ನೀಡಿದೆ. ಆದರೆ ಕೆಲ ಜಮೀನು ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ಜೊತೆಗೆ ಸಂಪನ್ಮೂಲ ಕೊರತೆ ಹಿನ್ನಲೆ ತಡವಾಗಿದೆ. ಭೂ ಪರಿವರ್ತನೆ ಆಗಿ ನಿವೇಶನ ಹಂಚಿಕೆ ಆಗಬೇಕು. ಸರ್ಕಾರದ ಆದೇಶ ಬಂದು ಒಂದು ತಿಂಗಳು ಆಗಿದೆ. ನಿಯಮಾನುಸಾರ ಕ್ರಮವಾಗಿ ನಡೆಯಲು ಸಮಯ ಬೇಕಿದೆ. ನ್ಯಾಯಾಲಯ ಮೆಟ್ಟಿಲೇರಿರುವ ಜಮೀನಿನಲ್ಲಿ ನಾವು ನಿವೇಶನ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...