ಗುಬ್ಬಿ | ಹಂದಿ ಜೋಗರ ಕಾಲೋನಿಗೆ ಉಪ ಲೋಕಾಯುಕ್ತರ ಭೇಟಿ : ಎಲ್ಲಾ ಸಂತ್ರಸ್ತ ಕುಟುಂಬಕ್ಕೆ ವಸತಿ ಕಲ್ಪಿಸುವ ಭರವಸೆ

Date:

ಗುಬ್ಬಿ ಪಟ್ಟಣದ ಹಂದಿ ಜೋಗರ ಕಾಲೋನಿಗೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ಬಿ.ವೀರಪ್ಪ ಅಲ್ಲಿನ ವಾಸ್ತವ ಚಿತ್ರಣ ಪರಿಶೀಲಿಸಿ ಪ್ರತಿ ಗುಡಿಸಲಿನ ಸಂತ್ರಸ್ತರ ಜೊತೆ ಚರ್ಚಿಸಿ ಎಲ್ಲಾ ಮೂಲಭೂತ ಸೌಕರ್ಯದೊಂದಿಗೆ ವಸತಿ ಕಲ್ಪಿಸುವ ಭರವಸೆ ನೀಡಿದರು.

ಗುಬ್ಬಿ ಪಟ್ಟಣದ ಪೊಲೀಸ್ ಠಾಣೆ ಹಿಂಬದಿಯ ಮಾರನಕಟ್ಟೆ ಕೆರೆಯ ಬದಿಯಲ್ಲಿ ವಾಸಿಸುವ ಅಲೆಮಾರಿ ಹಂದಿ ಜೋಗ ಸಮುದಾಯದ ಸುಮಾರು 45 ಕುಟುಂಬಗಳ ಅವ್ಯವಸ್ಥೆ ವೀಕ್ಷಣೆ ಮಾಡಿದ ಉಪ ಲೋಕಾಯುಕ್ತರು ನಿವಾಸಿಗಳ ಜೊತೆ ಮಾತನಾಡಿ ಮಳೆ ಬಂದಾಗ ಗುಡಿಸಲುಗಳು ಮುಳುಗಡೆಯಾಗುತ್ತದೆ. ಬದುಕು ಮೂರಾಬಟ್ಟೆ ಆಗಿರುವ ಬಗ್ಗೆ ತಿಳಿದುಕೊಂಡರು. ಕೆರೆಯ ದಡದಲ್ಲಿ ಎಲ್ಲಾ ಗುಡಿಸಲು, ಶೆಡ್ ಬಳಿ ತೆರಳಿ ಸಂತ್ರಸ್ತರನ್ನು ಖುದ್ದು ಮಾತನಾಡಿಸಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸುರಕ್ಷತೆ ಇಲ್ಲದ ಈ ಸ್ಥಳದಿಂದ ಕೂಡಲೇ ಶಿಫ್ಟ್ ಮಾಡಿ ಅವರಿಗೆ ವಸತಿ ಊಟದ ವ್ಯವಸ್ಥೆಗೆ ಸೂಚಿಸಲಾಗಿತ್ತು. ಈ ಕಾರ್ಯ ಎರಡು ದಿನದ ಹಿಂದೆ ನಡೆದಿದೆ. ಆದರೆ ಕೆರೆಯ ಈ ಜಾಗದಲ್ಲಿ ಇವರು ಇರುವುದು ಸೂಕ್ತವಲ್ಲ. ಅವರನ್ನು ಕೂಡಲೇ ಮೂಲಭೂತ ಸವಲತ್ತು ಜೊತೆಯಲ್ಲಿ ವಸತಿಯನ್ನು ನಿರ್ಮಿಸಿ ಸಾತೇನಹಳ್ಳಿ ಬಳಿಯ ನಿವೇಶನಗಳತ್ತ ಕಳುಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ವಾಸ್ತವ ಚಿತ್ರಣ ಕಂಡು ಬಳಿಕ ಸಂತ್ರಸ್ಥರೊಂದಿಗೆ ಮಾತನಾಡಿ ಅಲೆಮಾರಿ ಕುಟುಂಬಗಳಿಗೆ ಮಂಜೂರಾದ ನಾಲ್ಕು ಎಕರೆ ಜಾಗದಲ್ಲಿ 72 ನಿವೇಶನ ಹಂಚಿಕೆ ಆಗಲಿದೆ. ಈ ಪೈಕಿ ಈಗಾಗಲೇ ಗುರುತಿಸಲಾದ 65 ಕುಟುಂಬಗಳನ್ನು ಅಲ್ಲಿಗೆ ಶಿಫ್ಟ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. 15 ಮಂದಿಗೆ ಹಕ್ಕುಪತ್ರ ನೀಡಲಾಗಿದ್ದು, ಉಳಿದವರಿಗೂ ಹಕ್ಕುಪತ್ರ ಸಿಗಲಿದೆ. ಹಂತ ಹಂತವಾಗಿ ಎಲ್ಲಾ ಸಂತ್ರಸ್ತ ಕುಟುಂಬ ಶಿಫ್ಟ್ ಮಾಡಿ ಕೆರೆಯ ಜಾಗವನ್ನು ಕೆರೆಯಾಗಿ ಉಳಿಸುವುದಾಗಿ ತಿಳಿಸಿದ ಅವರು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಬಗ್ಗೆ ಚಿಂತಿಸಿ ಕೂಡಲೇ ವಸತಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಿಕ್ಷಣ ನೀಡಬೇಕು. ಇಲ್ಲಿನ ಮಕ್ಕಳಿಗೆ ವಸತಿ ಶಾಲೆಗೆ ಸೇರಿಸಲು ತಹಶೀಲ್ದಾರ್ ಅವರಿಗೆ ಸೂಚಿಸಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000567680

ಸಂತ್ರಸ್ತ ಹಂದಿ ಜೋಗರ ಕುಟುಂಬದ ಜೊತೆ ತೆಲುಗಿನಲ್ಲೇ ಮಾತನಾಡಿದ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಎಲ್ಲರಿಗೂ ನಿವೇಶನ ಹಂಚಿ ವಸತಿ ಕಲ್ಪಿಸುವ ಭರವಸೆ ನೀಡಿ ನಂತರ ಸಂತ್ರಸ್ತರಿಗೆ ವಸತಿ ಊಟ ವ್ಯವಸ್ಥೆ ಮಾಡಿದ್ದ ಬಾಬು ಜಗಜೀವನ ರಾಂ ಭವನಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದರು. ನಂತರ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಚತೆ, ಉಗ್ರಾಣ, ವಾರ್ಡ್ ಗಳ ಸ್ಥಿತಿ, ವೈದ್ಯರು ಹಾಗೂ ರೋಗಿಗಳ ಜೊತೆ ಮಾತನಾಡಿ ಅಗತ್ಯ ಸೌಕರ್ಯ ಬಗ್ಗೆ ಚರ್ಚಿಸಿ ನೇರ ಸಾತೇನಹಳ್ಳಿ ಬಳಿಯ ಹಂದಿ ಜೋಗರಿಗೆ ಮೀಸಲಿಟ್ಟ ನಿವೇಶನಗಳ ಜಾಗಕ್ಕೆ ತೆರಳಿ ವ್ಯವಸ್ಥೆಯನ್ನು ಪರಿಶೀಲಿಸಿದರು.

1000567692 1

ಈ ಸಂದರ್ಭದಲ್ಲಿ ನ್ಯಾಯಮೂರ್ತಿ ಜಯಂತ್ ಕುಮಾರ್, ನೂರುನ್ನೀಸಾ, ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ, ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿ, ತಹಶೀಲ್ದಾರ್ ಬಿ.ಆರತಿ, ತಾಪಂ ಇಓ ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...