ಗುಬ್ಬಿ | ದೇವನಹಳ್ಳಿ ಹೋರಾಟಕ್ಕೆ ಜಯ : ರೈತ ಸಂಘದಿಂದ ಸಂಭ್ರಮಾಚರಣೆ

Date:

ದೇವನಹಳ್ಳಿ ಚನ್ನರಾಯಪಟ್ಟಣ ರೈತರ ಸಾವಿರ ದಿನಗಳ ಹೋರಾಟಕ್ಕೆ ಕೊನೆಗೂ ಮಹತ್ವದ ಜಯ ದೊರಕಿದೆ. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ ಹಿನ್ನಲೆ ಗುಬ್ಬಿ ಪಟ್ಟಣ ಬಸ್ ಸ್ಟ್ಯಾಂಡ್ ಬಳಿ ರೈತ ಸಂಘದ ಪದಾಧಿಕಾರಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ರೈತರ ಹೋರಾಟ ಎಂದಿಗೂ ಗಟ್ಟಿತನ ಬೆಳೆಸಿಕೊಂಡಿದೆ. ರೈತರು ತಮ್ಮ ಕೃಷಿ ಭೂಮಿ ಬಿಟ್ಟು ಕೊಡುವುದಿಲ್ಲ. ನಿರಂತರ 1200 ದಿನಗಳ ಸುಧೀರ್ಘ ಹೋರಾಟ ಎಲ್ಲೂ ದಿಕ್ಕು ತಪ್ಪದೆ ನಡೆಸಿದ್ದರ ಫಲ ಸರ್ಕಾರ ರೈತರ ಮುಂದೆ ಸೋತಿದೆ. ಕೆ ಐಡಿಬಿಎಲ್ ಮೂಲಕ ಭೂಮಿ ವಶಕ್ಕೆ ಪಡೆಯಲು ಮುಂದಾದಾಗ ರೈತರ ವಿರೋಧ ವ್ಯಕ್ತಪಡಿಸಿದ್ದರು. ಹೋರಾಟದ ತೀವ್ರತೆ ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ರೈತ ಪರ ನಿರ್ಧಾರ ಕೈಗೊಂಡಿದ್ದಾರೆ. ಈ ರೀತಿಯ ದಿಟ್ಟ ಹೋರಾಟ ನಮ್ಮ ಜಿಲ್ಲೆಯಲ್ಲಿ ಹೇಮಾವತಿ ನೀರಿಗಾಗಿ ನಡೆಯಬೇಕಿದೆ. ಇಲ್ಲಿಯೂ ರೈತರು ಇದೇ ಮಾದರಿ ಅನುಸರಿಸಿ ಯಾವುದೇ ಬೆದರಿಕೆಗೆ ಅಂಜದೆ ನಿರಂತರ ಹೋರಾಟ ನಡೆಸಿ ಹೋರಾಟ ಸಫಲ ಗೊಳಿಸಬೇಕಿದೆ. ಹೇಮಾವತಿ ಲಿಂಕ್ ಕೆನಾಲ್ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಕೆಲಸ ನಡೆಯಲಿದೆ ಎಂದಿರುವುದು ಸರಿಯಲ್ಲ. ಈ ಹೇಳಿಕೆ ಹಿಂಪಡೆದು ಜಿಲ್ಲೆಯ ರೈತರ ಪರ ನಿಲ್ಲಬೇಕು ಎಂದು ಒತ್ತಾಯಿಸಿದ ಅವರು ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಂತೆ ನಮ್ಮ ಜಿಲ್ಲೆಯಲ್ಲಿ ರೈತ ಮುಖಂಡರ ಸಭೆ ನಡೆಸಿದರೆ ಹೇಮಾವತಿ ವಿಚಾರ ಮನದಟ್ಟು ಮಾಡುತ್ತೇವೆ ಎಂದರು.

1001737395

ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ದೇವನಹಳ್ಳಿ ಚನ್ನರಾಯಪಟ್ಟಣ ರೈತರ ದಿಟ್ಟತನಕ್ಕೆ ಸರ್ಕಾರ ಮಂಡಿಯೂರಿದೆ. ಸಿಎಂ ನೇತೃತ್ವದ ಸಭೆಯಲ್ಲಿ ಸರ್ಕಾರ 13 ಹಳ್ಳಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. 1198 ದಿನಗಳ ಇಂತಹ ಹೋರಾಟ ನಮ್ಮ ಜಿಲ್ಲೆಯಲ್ಲಿ ಕಾಣುತ್ತಿಲ್ಲ. ರೈತರ ಜೀವನಾಡಿ ಹೇಮಾವತಿ ನೀರು ನಮ್ಮಿಂದ ಕೈ ಬಿಡುತ್ತಿದೆ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳಲ್ಲೇ ಒಮ್ಮತ ಮೂಡುತ್ತಿಲ್ಲ. ರೈತರೇ ದೇವನಹಳ್ಳಿ ಹೋರಾಟವನ್ನೇ ಮುಂದಿಟ್ಟುಕೊಂಡು ದಿಟ್ಟ ಹೋರಾಟಕ್ಕೆ ಮುಂದಾಗಿ ಹೋರಾಟ ನಡೆಸಬೇಕಿದೆ. ಸರ್ಕಾರವೇ ರೈತರ ಒಕ್ಕೊರಲಿನ ಆಗ್ರಹಕ್ಕೆ ಮಣಿಯಬೇಕಿದೆ. ನಾವು ಹೇಮಾವತಿ ಉಳಿಸಲು ಈ ಮಾದರಿಯಲ್ಲೇ ಹೋರಾಟ ನಡೆಸೋಣ. ಸರ್ಕಾರದ ಗಮನ ಸೆಳೆದು ಇದೇ ರೀತಿ ಸಭೆಯಲ್ಲಿ ಕಾಮಗಾರಿ ರದ್ದು ಮಾಡಿಸೋಣ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರೈತಸಂಘದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ರೈತ ಮುಖಂಡರಾದ ಕಾಳೆಗೌಡ, ಗಂಗರೇವಣ್ಣ, ದೇವೇಗೌಡ, ಬಡವನಪಾಳ್ಯ ಕುಮಾರಸ್ವಾಮಿ, ನಾಗರಾಜು, ಸತ್ತಿಗಪ್ಪ, ಬಸವರಾಜು, ಸಣ್ಣಪ್ಪ, ಯತೀಶ್, ಎ.ಎಸ್.ಬಸವರಾಜು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...