ಗುಬ್ಬಿ | ಸಂಸ್ಕಾರ ಜೊತೆಯಲ್ಲಿ ಶಿಸ್ತು, ಸ್ವಚ್ಛತೆ ಕಲಿಯಬೇಕು : ಸಿಪಿಐ ಗೋಪಿನಾಥ್

Date:

ಆಧುನಿಕತೆ ತಕ್ಕಂತೆ ಬದಲಾದ ಶಿಕ್ಷಣ ಪದ್ಧತಿ ಮಕ್ಕಳ ಶಿಕ್ಷಣಕ್ಕೆ ಪೂರಕ ತಂತ್ರಜ್ಞಾನ ಬಳಕೆಗೆ ಬಂದಿದೆ. ಆದರೆ ಸಂಸ್ಕಾರಯುತ ಶಿಕ್ಷಣ ಜೊತೆಗೆ ಮಕ್ಕಳು ಶಿಸ್ತುಪಾಲನೆ, ಸ್ವಚ್ಚತೆ ಕಲಿಯಬೇಕು ಎಂದು ಸಿಪಿಐ ಗೋಪಿನಾಥ್ ಕರೆ ನೀಡಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇನ್ನರ್ ವೀಲ್ ಕ್ಲಬ್ ಆಯೋಜಿಸಿದ್ದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪಠ್ಯ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಇಲಾಖೆ ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿವೆ ಎಂದರು.

ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್ ಬಳಕೆ ಜೊತೆಗೆ ಹೆಣ್ಣು ಮಕ್ಕಳು ಇತ್ತೀಚಿಗೆ ಹೆಚ್ಚಾದ ಗಂಭೀರ ಲೈಂಗಿಕ ದೌರ್ಜನ್ಯ ಬಗ್ಗೆ ಜಾಗೃತರಾಗಿರಬೇಕು. ರಸ್ತೆ ಸುರಕ್ಷತಾ ನಿಯಮ ಪಾಲನೆ, ಅಪ್ರಾಪ್ತರು ವಾಹನ ಚಾಲನೆ ಮಾಡದಂತೆ ಎಚ್ಚರಿಕೆ ಹಾಗೂ ಮೊಬೈಲ್ ಬಳಕೆ ಬಗ್ಗೆ ಪೋಷಕರು ಎಚ್ಚರವಹಿಸಬೇಕು ಎಂದು ಅರಿವು ಮೂಡಿಸುವ ವಿಚಾರ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000811314

ಇನ್ನರ್ ವೀಲ್ ಕ್ಲಬ್ ಜಿಲ್ಲಾ ಚೇರ್ಮನ್ ಮಾಯರತ್ನನ್ ಮಾತನಾಡಿ ಮಕ್ಕಳಿಗೆ ಆಧುನಿಕ ಶಿಕ್ಷಣ ಸುಲಭ ಹಾಗೂ ಆಸಕ್ತಿದಾಯಕವಾಗಿದೆ. ಆದರೆ ಕಲಿಯುವ ಮಕ್ಕಳಲ್ಲಿ ಆಸಕ್ತಿ ಏಕಾಗ್ರತೆ ಮೂಡಿಸುವ ಪ್ರಯತ್ನ ಅತ್ಯಗತ್ಯ. ಶಾಲೆಯಲ್ಲಿ ಕಲಿಯುವ ವಿಚಾರದಷ್ಟೇ ಹೊರಗಿನ ಪ್ರಪಂಚದಲ್ಲಿ ಕಲಿಯುವ ಅಗತ್ಯವಿದೆ. ಹೆಣ್ಣು ಗಂಡು ತಾರತಮ್ಯ ಮನೆಯಲ್ಲಿ ಬಾರದಿದ್ದರೆ ಸಮಾಜದಲ್ಲಿ ಹೆಣ್ಣು ಏನೂ ಬೇಕಾದರೂ ಸಾಧನೆ ಮಾಡುತ್ತಾರೆ. ಈ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ಜೊತೆ ಮಕ್ಕಳಿಗೆ ಮುಂದಿನ ಪ್ರಪಂಚದ ಅರಿವು ಮೂಡಿಸಿ ಎಂದು ಕರೆ ನೀಡಿದರು.

ಇನ್ನರ್ ವೀಲ್ ಸೀಮಾ ಮಾತನಾಡಿ ನಮ್ಮ ಕ್ಲಬ್ ಈವರೆವಿಗೂ 64 ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಿಸಿದ್ದೇವೆ. ಎಲ್ಲಾ ಪಠ್ಯ ವಿಷಯಗಳು ಸಿದ್ಧಪಡಿಸಿದ ರೀತಿಯಲ್ಲಿ ಪೆನ್ ಡ್ರೈವ್ ಮೂಲಕ ಡಿಜಿಟಲ್ ಸ್ಕ್ರೀನ್ ಶಿಕ್ಷಣ ನೀಡಲಾಗುತ್ತದೆ. ಈ ಜೊತೆಗೆ ಮಕ್ಕಳ ಆಸಕ್ತಿ ಪೂರಕ ಶಿಕ್ಷಣಕ್ಕೆ ಅಗತ್ಯ ಪರಿಕರವನ್ನು ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಇನ್ನರ್ ವೀಲ್ ಕ್ಲಬ್ ಉಮಾ ನಾಗರಾಜ್, ಸುನೀತಾ ರಾಜ್, ಪಲ್ಲವಿ, ಅನು ಭಾಸ್ಕರ್, ಶಾಂತಿ ಸುಬ್ರಹ್ಮಣ್ಯ, ಲತಾ, ಚೇತನಾ, ಮಂಜುಳಾ, ಆಶಾ, ಆಕರ್ಷಿತಾ, ಸಿಆರ್ ಪಿ ನಾಗಭೂಷಣ್, ಸಂಪನ್ಮೂಲ ವ್ಯಕ್ತಿ ಈರಣ್ಣ, ಶಿಕ್ಷಕಿ ಶಶಿಕಲಾ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...