ಗುಬ್ಬಿ | ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ನಾಯಿ ದಾಳಿ

Date:

ನ್ಯಾಯಾಲಯದ ಆವರಣದಲ್ಲಿ ಪ್ರಕರಣವೊಂದರ ಹಿನ್ನಲೆ ಆಗಮಿಸಿದ್ದ ಮಹಿಳೆ ಮೇಲೆ ಡೆಡ್ಲಿ ಅಟ್ಯಾಕ್ ನಡೆಸಿದ ನಾಯಿ ಮುಖ, ಕುತ್ತಿಗೆ ಕಚ್ಚಿ ಭಯಾನಕ ಗಾಯಗೊಳಿಸಿದ ಘಟನೆ ಇಡೀ ಗುಬ್ಬಿ ಪಟ್ಟಣವನ್ನೇ ಬೆಚ್ಚಿಬೀಳಿಸಿದೆ.

ತಿಪಟೂರು ತಾಲೂಕಿನ ಬೀರಸಂದ್ರ ಗ್ರಾಮದ ಮಹಿಳೆ ಗಂಗಾಭವಾನಿ ಅವರ ಮೇಲೆ ದಾಳಿಮಾಡಿದ ನಾಯಿ ಹುಚ್ಚು ಹಿಡಿದಿರುವ ಸಾಧ್ಯತೆ ಇದೆ ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು. ಆಕೆಯ ಮುಖದ ಭಾಗಕ್ಕೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಕಣ್ಣಿನ ಕೆಳ ಭಾಗ ಕೆನ್ನೆ ಕಿತ್ತು ಹೊರ ಬಂದಿದೆ. ಗುಬ್ಬಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಗಂಭೀರ ಗಾಯಗೊಂಡ ಗಂಗಾಭವಾನಿ ಕೇಸ್ ಹಿನ್ನಲೆ ಬೆಳಿಗ್ಗೆ ಕೋರ್ಟ್ ಬಂದಿದ್ದರು. ಮಧ್ಯಾಹ್ನ ವೇಳೆ ಶೌಚಾಲಯ ಹೋಗಿ ಬರುವ ವೇಳೆ ಆವರಣದಲ್ಲಿದ್ದ ನಾಯಿ ಏಕಾಏಕಿ ಆಕೆಯ ಮೇಲೆರಗಿ ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ನಾಯಿಗೆ ಬೆದರಿಸಿದರೂ ಜಗ್ಗದ ನಾಯಿ ಆಕೆಯ ಮೇಲೆ ಮತ್ತೇ ಮೇಲೇರಗಿದೆ. ಕೊನೆಗೆ ಕೋಲು ಹಿಡಿದು ನಾಯಿಗೆ ಬಡಿದು ಆಕೆಯನ್ನು ಉಳಿಸಲಾಯಿತು. ತಡವಾಗಿದ್ದರೆ ಜೀವಕ್ಕೆ ಕುತ್ತು ಬರುತ್ತಿತ್ತು.

ಇತ್ತೀಚಿನ ದಿನದಲ್ಲಿ ಗುಬ್ಬಿ ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ಮನೆಯಿಂದ ಹೊರಗೆ ಬರಲು ಹೆದರಿದ್ಧಾರೆ. ಸಂಬಂಧಪಟ್ಟ ಇಲಾಖೆಯವರು ತುರ್ತಾಗಿ ಈ ನಾಯಿಗಳ ಹಾವಳಿ ಬಗ್ಗೆ ಗಮನ ಹರಿಸಿ ಸಾರ್ವಜನಿಕರ ಹಿತ ಕಾಪಾಡು ಬೇಕಾಗಿದೆ ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...