ಗುಬ್ಬಿ | ಹೇಮಾವತಿ ಹೋರಾಟವನ್ನು ಪ್ರತಿಷ್ಠೆಯಾಗಿ ಪರಿಗಣಿಸಬೇಡಿ : ಡಿಸಿಎಂಗೆ ಬಿ.ವೈ.ವಿಜಯೇಂದ್ರ ಎಚ್ಚರಿಕೆ

Date:

ತುಮಕೂರು ಜಿಲ್ಲೆಯ ರೈತರ ಜೀವನಾಡಿ ಹೇಮಾವತಿ ನೀರು ಉಳಿವಿಗೆ ಹೋರಾಟ ಮಾಡುತ್ತಿರುವ ರೈತರ ಆಕ್ರೋಶವನ್ನು ಪ್ರತಿಷ್ಠೆಯಾಗಿ ಪರಿಗಣಿಸದೆ ರೈತರೊಟ್ಟಿಗೆ ಹಾಗೂ ಸರ್ವ ಪಕ್ಷಗಳ ಸಭೆ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು. ಹಗುರವಾಗಿ ತಿಳಿದುಕೊಂಡಲ್ಲಿ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದರು.

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಸಂಕಾಪುರ ಗ್ರಾಮದ ಬಳಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಸಾವಿರಾರು ರೈತರು ಕಾಮಗಾರಿಯ ಸ್ಥಳಕ್ಕೆ ಮುತ್ತಿಗೆ ಹಾಕಿ ಐತಿಹಾಸಿಕ ಹೋರಾಟ ನಡೆಸಿದ್ದಾರೆ. ರೈತರ ಬದುಕಿನ ಹಕ್ಕು ಪ್ರತಿಪಾದಿಸುವುದು ನಡೆದಿದೆ. ಇಲ್ಲಿ ಯಾವ ರಾಜಕಾರಣ ನಡೆದಿಲ್ಲ. ರೈತರನ್ನು ಬೆದರಿಸಿ ಎಫ್ಐಆರ್ ಮಾಡುತ್ತಾ ಬೆದರಿಸಿದ್ದಾರೆ. ಈ ನಡುವೆ ಡಿಸಿಎಂ ಶಿವಕುಮಾರ್ ಅವರು ಕಾಮಗಾರಿ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ರೈತರನ್ನು ಕೆಣಕಿ ದರ್ಪ ತೋರುವುದು ಸರಿ ಇಲ್ಲ. ರೈತರ ಸಹನೆ ಕಟ್ಟೆ ಒಡೆಯುವ ಮುನ್ನ ಎಚ್ಚೆತ್ತುಕೊಳ್ಳಿ ಎಂದು ತಿಳಿಸಿದರು.

ಪಾಳೆಗಾರಿಕೆ ನಡೆಸದೆ ರೈತರ ಬಗ್ಗೆ ಗೌರವ ಇಟ್ಟುಕೊಳ್ಳಿ. ಮುಖ್ಯಮಂತ್ರಿಗಳು ಈ ಹೇಮಾವತಿ ವಿಚಾರದಲ್ಲಿ ಮೌನ ವಹಿಸದೆ ರೈತರಿಗೆ ನ್ಯಾಯ ಒದಗಿಸಿ. ಕೂಡಲೇ ಸರ್ವಪಕ್ಷಗಳ ಸಭೆ ನಡೆಸಿ. ಯಾವುದೂ ಒಂದು ತಾಲ್ಲೂಕಿಗೆ ಎಂದು ಹೇಳಿ ಜಿಲ್ಲೆಯ ಎಲ್ಲಾ ತಾಲ್ಲೂಕಿಗೆ ಅನ್ಯಾಯ ಮಾಡಬೇಡಿ. ಅಧಿಕಾರಿಗಳ ಅಮಲಿನಲ್ಲಿ ಮಠಾಧೀಶರನ್ನು, ರೈತ ಹೋರಾಟಗಾರರ ವಿರುದ್ಧ ಕೇಸ್ ದಾಖಲಿಸುವ ಅಧಿಕಾರ ದುರ್ಬಳಕೆ ಮಾಡಿದ ಸರ್ಕಾರಕ್ಕೆ ರೈತರೇ ಉತ್ತರ ನೀಡುತ್ತಾರೆ. ತಾಳ್ಮೆ ಕಳೆದುಕೊಂಡಲ್ಲಿ ಸರ್ಕಾರ ಉರುಳುತ್ತದೆ ಎಂದ ಅವರು ಗೃಹಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕಾರಣ ಕೂಡಲೇ ಸರ್ವಪಕ್ಷಗಳ ಸಭೆ ಸೇರಿಸಿ ರೈತ ಮುಖಂಡರೊಟ್ಟಿಗೆ ಚರ್ಚಿಸಿ ರೈತಪರ ತೀರ್ಮಾನ ಕೈಗೊಳ್ಳಿ. ಇಲ್ಲವಾದಲ್ಲಿ ಮುಂದಿನ ಉಗ್ರ ಹೋರಾಟಕ್ಕೆ ರೈತರು ಸಜ್ಜಾಗುತ್ತಾರೆ. ಅವರ ಶಕ್ತಿ ಪರೀಕ್ಷಿಸಿ ಅವನತಿ ಹೊಂದಬೇಡಿ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001531699

ವಿಧಾನ ಪರಿಷತ್ ಸಭಾ ಸದಸ್ಯ ಸಿ.ಟಿ.ರವಿ ಮಾತನಾಡಿ ರೈತರ ವಿರೋಧದ ಮಧ್ಯೆ ಮತ್ತೇ ಕಾಮಗಾರಿ ಆರಂಭಿಸಿದರೆ ನೀರು ಬೆಂಕಿ ಆಗುವುದು ಖಂಡಿತ. ರೊಚ್ಚಿಗೆದ್ದ ರೈತರ ಪ್ರವಾಹ ತಡೆಯೋದು ಕಷ್ಟ. ನೀವು ಕೊತ್ವಾಲ್ ಇರಬಹುದು. ಆದರೆ ತುಮಕೂರು ಜಿಲ್ಲೆಯ ರೈತರು ಈ ಕೊತ್ವಾಲ್ ಗೆ ಹೆದರೋದಿಲ್ಲ. ಕಾಮಗಾರಿ ಸ್ಥಗಿತಗೊಳಿಸಿ ಎಲ್ಲಾ ಹೋರಾಟಗಾರ ಮೇಲಿನ ಕೇಸ್ ವಾಪಸ್ ಪಡೆಯಬೇಕು. ಬಂಧಿಸಿರುವ ಮುಖಂಡರನ್ನು ಬಿಡುಗಡೆ ಮಾಡಿ ಸರ್ವಪಕ್ಷದ ಸಭೆ ಆಯೋಜಿಸಿ ಈ ಕಾಮಗಾರಿಯ ಸ್ಪಷ್ಟ ಉದ್ದೇಶವನ್ನು ರೈತರಿಗೆ ತಿಳಿಸಬೇಕು. ಇಲ್ಲವಾದಲ್ಲಿ ರೈತರು ಮುಂದುವರೆದು ನಡೆಸುವ ಹೋರಾಟ, ಅನಾಹುತಕ್ಕೆ ಸರ್ಕಾರವೇ ನೇರ ಹೊಣೆ ಹೊರಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ವೈಜ್ಞಾನಿಕ ಲಿಂಕ್ ಕೆನಾಲ್ ಕಾಮಗಾರಿ ಎಂಬುದು ಈ ಸ್ಥಳ ಪರಿಶೀಲನೆಯಲ್ಲೇ ತಿಳಿಯುತ್ತದೆ. ಜಿಲ್ಲೆಯ ಶಾಸಕರ ಸಭೆ ನಡೆಸಿ ಚರ್ಚೆ ಮಾಡಬೇಕಿದೆ. ಸಮಾಲೋಚನೆ ಮಾಡಿ ಒಂದು ತೀರ್ಮಾನ ಮಾಡಬೇಕಿದೆ. ಪ್ರಶ್ನೆ ಮಾಡಿದ ರೈತರನ್ನು ಬೆದರಿಸುವ ಧೋರಣೆ ಮಾಡಿರುವ ಸರ್ಕಾರ ಕಾನೂನು ಬಾಹಿರವಾಗಿ ಕೆಲಸ ನಡೆಸಿದೆ ಎಂಬ ಅಂಶ ನಿಜ ಎನಿಸಿದೆ. ಈ ಎಲ್ಲಾ ಧೋರಣೆ ಬಿಟ್ಟು ರೈತರಿಗೆ ನ್ಯಾಯ ಕೊಡಿ. ಇಲ್ಲವಾದಲ್ಲಿ ರೈತರೇ ಕಾನೂನು ಕೈಗೆತ್ತಿಕೊಂಡು ಹೋರಾಟ ನಡೆಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಬಿ.ಸುರೇಶಗೌಡ, ಜಿ.ಬಿ.ಜ್ಯೋತಿ ಗಣೇಶ್, ಧೀರಜ್ ಮುನಿರಾಜು, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್. ಬಿ.ಎಸ್.ನಾಗರಾಜ್, ಜಿ.ಎನ್.ಬೆಟ್ಟಸ್ವಾಮಿ, ಪಿ.ಬಿ.ಚಂದ್ರಶೇಖರ ಬಾಬು, ಬ್ಯಾಟರಂಗೇಗೌಡ, ಎನ್.ಸಿ.ಪ್ರಕಾಶ್, ಎಚ್.ಟಿ.ಭೈರಪ್ಪ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಬಿ.ಎಸ್.ಪಂಚಾಕ್ಷರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...