ಗುಬ್ಬಿ | ಯಾವುದೇ ಆಮಿಷಕ್ಕೆ ಒಳಗಾಗಬೇಡಿ : ರೈತರಿಗೆ ಶಾಸಕರ ಮನವಿ

Date:

ಜಮೀನು ಮಂಜೂರು ಮಾಡಿಸುವ ಆಮಿಷ ತೋರಿಸಿ ಮುಗ್ಧ ರೈತರನ್ನು ವಂಚಿಸಿ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕೆಲ ಸಂಘಗಳು ಮುಂದಾಗಿವೆ. ಈಗಾಗಲೇ ಯಾವುದೇ ದಾಖಲೆ ಇಲ್ಲದ ಆರು ಸಾವಿರ ಅರ್ಜಿಗಳನ್ನು ತಾಲ್ಲೂಕು ಕಚೇರಿಗೆ ನೀಡಿದ್ದಾರೆ. ಇದೆಲ್ಲಾ ಫೇಕ್ ಅರ್ಜಿಗಳು. ಯಾವುದೇ ಕಾರಣಕ್ಕೂ ಮರುಳಾಗಬೇಡಿ ಎಂದು ಶಾಸಕ ಎಸ್.ಆರ್ ಶ್ರೀನಿವಾಸ್ ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು 1998-99 ರ ಸುಪ್ರೀಂ ಕೋರ್ಟ್ ಆದೇಶದಂತೆ ನೂರು ಜಾನುವಾರು ಇರುವ ಹಳ್ಳಿಗೆ 33 ಎಕರೆ ಗೋಮಾಳ ಜಮೀನು ಮೀಸಲು ಇರಬೇಕಿದೆ. ಈ ಗೈಡ್ ಲೈನ್ ಪ್ರಕಾರ ತಾಲ್ಲೂಕಿನಲ್ಲಿ ಗೋಮಾಳ ಜಮೀನು ಮಂಜೂರು ಮಾಡಲು ಅಸಾಧ್ಯವಾಗಿದೆ. ಸರ್ಕಾರ ಈಗ ಯಾವುದೇ ಅರ್ಜಿ ಆಹ್ವಾನಿಸಿಲ್ಲ. ವಸ್ತು ಸ್ಥಿತಿ ಅರಿತು ರೈತರು ವರ್ತಿಸಬೇಕು. ಕೆಲ ಸಂಘಗಳು ಅವರ ನಿಲುವು ಉಳಿಸಿಕೊಳ್ಳಲು ಮುಗ್ಧ ರೈತರನ್ನು ಪ್ರತಿಭಟನೆಗೆ ಇಳಿಸುತ್ತಾರೆ. ಯಾವುದೇ ಆಮಿಷಕ್ಕೆ ಬಲಿಯಾಗಬೇಡಿ ಎಂದು ಮತ್ತೊಮ್ಮೆ ಮನವಿ ಮಾಡಿದರು.

ಬಗರ್ ಹುಕುಂ ಸಮಿತಿ ಮೂಲಕ ಈಗಾಗಲೇ 1991-92 ರ 50 ಅರ್ಜಿ ನಮೂನೆಯಲ್ಲಿ ಆರು ಸಾವಿರ ಅರ್ಜಿಗಳಿವೆ. 1997-98 ರ 53 ಅರ್ಜಿ ನಮೂನೆಯಲ್ಲಿ 4800 ಅರ್ಜಿ ಹಾಗೂ 2018-19 ರ 57 ಅರ್ಜಿ ನಮೂನೆಯಲ್ಲಿ 28 ಸಾವಿರ ಅರ್ಜಿ ಇದ್ದು ಅವುಗಳನ್ನು ಇತ್ಯರ್ಥ ಮಾಡುವುದೇ ಕಷ್ಟ ಎನಿಸಿರುವಾಗ ಬಗರ್ ಸಮಿತಿಯಲ್ಲಿ ಸಿಂಧು ಆಗದ ರೈತ ಸಂಘದ ಅರ್ಜಿ ಹೇಗೆ ಸಿಂಧು ಮಾಡುವುದು ಎಂಬ ಆಲೋಚನೆ ರೈತರು ಮಾಡಬೇಕು. ತಹಶೀಲ್ದಾರ್ ಅವರ ಕರ್ತವ್ಯ ಮೀರಿ ಮಾಡಲು ಸಾಧ್ಯವಿಲ್ಲ. ಪ್ರತಿಯೊಂದು ಸರ್ಕಾರದ ಅರ್ಜಿಗೆ ಹಲವು ನಿಯಮ ಇರುವಾಗ ಖಾಸಗಿ ಸಂಘ ಏನೂ ಮಾಡಲು ಸಾಧ್ಯ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಪ್ರಾಂತ ರೈತ ಸಂಘದ ಹೆಸರಿನ ದಾಖಲೆ ಇಲ್ಲದ ಅರ್ಜಿ ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯದಿಂದಲೂ ಬಂದಿದೆ. ವಿಳಾಸ ಇಲ್ಲ. ಹಿಂದೆ ಸಲ್ಲಿಸಿದ್ದ ಅರ್ಜಿ ನಕಲು ಇಲ್ಲ. ಆಧಾರ್ ಕಾರ್ಡ್ ಇಲ್ಲ, ಕೇವಲ ಅರ್ಜಿ ಮುಖ್ಯಮಂತ್ರಿಗೆ ಸಲ್ಲಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿ ಅರ್ಜಿಗಳನ್ನು ಪ್ರದರ್ಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...