ಗುಬ್ಬಿ | ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಬಿ ನಂಜುಂಡಸ್ವಾಮಿ ಆಯ್ಕೆ

Date:

ಪುಸ್ತಕಗಳ ಓದುವವರ ಸಂಖ್ಯೆ ವಿರಳವಾದ ಸಂದರ್ಭದಲ್ಲಿ ಮನೆಯನ್ನೇ ಗ್ರಂಥಾಲಯ ಮಾಡಿ ಪ್ರತಿ ಪುಸ್ತಕದ ಮುನ್ನುಡಿಯಿಂದ ಬೆನ್ನುಡಿಯವರೆಗೆ ಓದುವ ವ್ಯಕ್ತಿ ಡಾ.ಬಿ.ನಂಜುಂಡಸ್ವಾಮಿ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದೇ ಅರ್ಥಪೂರ್ಣ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.

ನಾಡಿನ ಶ್ರೇಷ್ಠ ವಿಮರ್ಶಕರ ಪಟ್ಟಿಯಲ್ಲಿ ನಂಜುಂಡಸ್ವಾಮಿ ಅವರು ಕೂಡ ಒಬ್ಬರು ಎನ್ನುವುದು ನಮ್ಮ ಗುಬ್ಬಿ ತಾಲ್ಲೂಕಿನ ಹೆಮ್ಮೆ. ಖ್ಯಾತ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ನಿಕಟ ಸಂಪರ್ಕದಲ್ಲಿದ್ದು ನಾಡಿನ ಐತಿಹಾಸಿಕ ಹಿನ್ನಲೆಯ ಮಠಗಳ ಅಧ್ಯಯನ ನಡೆಸಿ ಅದನ್ನು ಲಿಖಿತ ರೂಪದಲ್ಲಿ ದಾಖಲೆ ಸೃಷ್ಟಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. 50 ಕ್ಕೂ ಅಧಿಕ ಕೃತಿಗಳನ್ನು ರಚಿಸಿ ಸಂಪಾದಿಸಿ ಅಧಿಕೃತ ಮಾಹಿತಿ ದಾಖಲೆ ಸಹಿತ ಸಾಹಿತ್ಯ ಸಂಗ್ರಹದಲ್ಲಿ ಏಕೈಕ ಪಂಡಿತ ಎಂದರೂ ಅತಿಶಯೋಕ್ತಿಯಲ್ಲ. ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರರ ಚರಿತ್ರೆಗೆ ದಾಖಲೆಯ ಪುಸ್ತಕ ರಚಿಸಿ ಸ್ವಾಮಿಯ ಭಕ್ತರಿಗೆ ಅವರ ಪವಾಡ ಬಗ್ಗೆ ವಿವರಿಸಿದ್ದಾರೆ.

ಜಿ.ಹೊಸಹಳ್ಳಿ ಸಂಸ್ಥಾನದ ಮೂಲಕ ಅಧಿಕೃತ ದಾಖಲೆಯನ್ನು ಕಲೆ ಹಾಕಿದ ನಂಜುಂಡಸ್ವಾಮಿ ವೀರಶೈವ ಧರ್ಮ ಸಂಸ್ಕೃತಿ ಸಾಹಿತ್ಯ ಕುರಿತ ಆಳವಾದ ಅಧ್ಯಯನ ನಡೆಸಿದವರು 300 ಕ್ಕೂ ಅಧಿಕ ಲೇಖನಗಳು ಪ್ರಕಟಗೊಂಡಿವೆ. ಶಿವಗಂಗಾ ಕ್ಷೇತ್ರ, ಸಿದ್ಧಾಂತ ಶಿಖಾಮಣಿ, ಹೊನ್ನಸಿರಿ, ಕಾಯಕ ಯೋಗಿ, ಹೊನ್ನುಡಿಕೆ ದರ್ಶನ, ಕಲ್ಪಸಿರಿ ಹೀಗೆ ಅನೇಕ ಕೃತಿಗಳನ್ನು ನಾಡಿಗೆ ನೀಡಿ ಎಲೆ ಮರೆಯ ಕಾಯಿಯಂತೆ ಆಯುರ್ವೇದ ವೈದ್ಯ ವೃತ್ತಿಯನ್ನು ನಡೆಸಿಕೊಂಡು ಸಾಹಿತ್ಯ ಕೃಷಿ ನಡೆಸಿದವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಗುರುತಿಸಿ ಸಮ್ಮೇಳನಾಧ್ಯಕ್ಷರಾಗಿ ಘೋಷಣೆ ಮಾಡಿದ್ದೇ ಅರ್ಥಪೂರ್ಣ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಳೆಗರಿ, ತಾಮ್ರ ಶಾಸನ ಓದುವ ಏಕೈಕ ಪಂಡಿತರು ಎಂಬ ಹೆಗ್ಗಳಿಕೆ ಗಳಿಸಿ ಮನೆಯನ್ನೇ ಗ್ರಂಥಾಲಯ ಮಾಡಿಕೊಂಡು ಎಲ್ಲಾ ಪುಸ್ತಕವನ್ನು ಓದುವ ಜೊತೆಗೆ ಕನ್ನಡ ವ್ಯಾಕರಣ ತಿದ್ದುವ ಹಾಗೂ ತಪ್ಪಿನ ಅಕ್ಷರಗಳ ಬಗ್ಗೆ ಸಂಬಂಧಿಸಿದ ಲೇಖಕರಿಗೆ ಪತ್ರ ಮೂಲಕ ತಿಳಿಸುವ ನೇರವಾದಿಯಾಗಿ ಕಂಡಿದ್ದಾರೆ. 64 ನೇ ವಯಸ್ಸಿನಲ್ಲಿ ಅವರ ಸಾಹಿತ್ಯಾಸಕ್ತಿ ಹದಿಹರೆಯದ ವಯಸ್ಸು ಮನಸ್ಸು ತೋರುತ್ತದೆ. ಅವರ ಸಾಹಿತ್ಯ ಕೃಷಿಗೆ ಉತ್ತೇಜನ ನೀಡುವ ಸಮ್ಮೇಳನ ಮತ್ತಷ್ಟು ಚಿಂತನೆ, ಅರಿವು, ಸಾಹಿತ್ಯಾಸಕ್ತಿ ಮೂಡಿ ಬರಲಿ ಎಂಬುದು ತಾಲ್ಲೂಕಿನ ಜನತೆಯ ಆಶಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...