ಗುಬ್ಬಿ | ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ ರೈತಸಂಘಕ್ಕೆ ಮತ್ತಷ್ಟು ಬಲ : ಕೆ.ಎನ್.ವೆಂಕಟೇಗೌಡ

Date:

ಗುಬ್ಬಿ ತಾಲ್ಲೂಕಿನ ಸಾರ್ವಜನಿಕರಿಗೆ ಧೈರ್ಯ ತುಂಬುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಚೇರಿ ಮುಂಭಾಗ ಅನಾವರಣಗೊಂಡಿದ್ದು ರೈತಸಂಘಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಲೋಕಾರ್ಪಣೆಗೊಂಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ರೈತರ ಪರವಾಗಿ ಪುಷ್ಪಮಾಲೆ ಸಮರ್ಪಿಸಿ ಮಾತನಾಡಿದ ಅವರು ಬಡವರು ದೀನ ದಲಿತರ ಪರ ನಿಲ್ಲುವ ಕೆಚ್ಚು ತುಂಬುವ ಮಹಾನಾಯಕರ ಪ್ರತಿಮೆ ತಾಲ್ಲೂಕು ಕಚೇರಿ ಕಡೆಗೆ ಬೊಟ್ಟು ತೋರುತ್ತಿರುವುದು ಹೆಮ್ಮೆ ತಂದಿದೆ ಎಂದರು.

ಸರಿ ದಾರಿ ತೋರುವ ಹಾಗೂ ಸಮ ಸಮಾಜ ನಿರ್ಮಾಣಕ್ಕೆ ಅಗತ್ಯ ಕಾನೂನು ಸಂವಿಧಾನ ನೀಡಿದ ಅವರ ಆಶಯದಂತೆ ಇಂದಿನ ಸರ್ಕಾರಗಳು ನಡೆದುಕೊಳ್ಳುತ್ತಿಲ್ಲ. ಬಡವರಿಗೆ ನೀಡಬೇಕಾದ ಭೂಮಿಯನ್ನು ಮಂಜೂರು ಮಾಡದೆ ಅರ್ಜಿ 50, 53, 57 ನಮೂನೆ ಪೆಡ್ಡಿಂಗ್ ಇಟ್ಟಿರುವುದು ತೀವ್ರ ಅಸಮಾಧಾನ ತಂದಿದೆ. ಈ ಬಗ್ಗೆ ಹೋರಾಟ ನಡೆಸಲು ರೈತಸಂಘ ಸಜ್ಜಾಗಿದೆ ಎಂದ ಅವರು ಅಂಬೇಡ್ಕರ್ ಅವರ ಕಾಲದಲ್ಲಿದ್ದ ಶೇ.10 ರಷ್ಟು ಭ್ರಷ್ಟಾಚಾರ ಎಂದು ಶೇ.80 ಕ್ಕೆ ಏರಿಕೆಯಾಗಿರುವುದು ವಿಷಾದನೀಯ. ಇನ್ನಾದರೂ ಅಂಬೇಡ್ಕರ್ ಪುತ್ಥಳಿ ನೋಡಿಯಾದರೂ ಅವರ ಆಶಯದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ನಡೆದುಕೊಳ್ಳಲಿ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಲೋಕೇಶ್ ಅವರ ತಂಡ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಮಾಲೆ ಹಾಕಿದರು. ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ರವೀಶ್, ಸುರೇಶ್, ಬಸವರಾಜು, ಈಶಣ್ಣ, ಯತೀಶ್, ಬಾಂಬೆ ಬಸವರಾಜು, ಮೋಹನ್, ಗಂಗರೇವಣ್ಣ, ನರಸಿಂಹಮೂರ್ತಿ, ರಮೇಶ್ ಸೇರಿದಂತೆ ರೈತಸಂಘದ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...