ಗುಬ್ಬಿ | ಸಂಘಟನೆ ಹೆಸರಿನಲ್ಲಿ ಸಂಪಾದನೆ ಮಾಡುವುದು ಸರಿಯಲ್ಲ : ಆದಿಜಾಂಬವ ಯುವ ಬ್ರಿಗೇಡ್ ಅಸಮಾಧಾನ.

Date:

ಅಂಬೇಡ್ಕರ್ ಸಾಹೇಬರ ವಿಚಾರಧಾರೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುಂದಿನ ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಮಾಡದೆ ಕೇವಲ ಹೊಟ್ಟೆಪಾಡಿಗಾಗಿ ಬಾಬಾ ಸಾಹೇಬರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲು ಕೆಲವು ಮಂದಿ ದಲಿತ ಮುಖಂಡರು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಯುವ ಬ್ರಿಗೇಡ್ ಸದಸ್ಯ ಶಿವಕುಮಾರ್.ಜಿ.ಡಿ. ತೀವ್ರ ಕಳವಳ ವ್ಯಕ್ತಪಡಿಸಿದರು.

ಗುಬ್ಬಿ ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ಗುಬ್ಬಿ ತಾಲ್ಲೂಕು ಆದಿಜಾಂಬವ ಯುವ ಬ್ರಿಗೇಡ್ ವತಿಯಿಂದ ನಡೆದ ಬಾಬಾ ಸಾಹೇಬ ಅಂಬೇಡ್ಕರ್ ಅವರ 68 ನೇ ಪರಿನಿರ್ವಾಣ ದಿನವನ್ನು ಮೇಣದ ಬತ್ತಿ ಹಚ್ಚುವ ಮೂಲಕ ಆಚರಣೆ ಮಾಡಿದ ಯುವಕರು ಪ್ರಸ್ತುತ ದಿನಮಾನದಲ್ಲಿ ಸಂಘಟನೆಯ ಹೆಸರಿನಲ್ಲಿ ಸಂಪಾದನೆಗೆ ಮುಂದಾದ ಕೆಲ ದಲಿತ ಮುಖಂಡರು ಹಣ ವಸೂಲಿ ಮಾಡುವ ಮೂಲಕ ತಮ್ಮ ಮನೆಗಳನ್ನು ಬೆಳೆಸಿಕೊಳ್ಳಲು ಮುಂದಾಗಿದ್ದಾರೆ. ಇದು ಸಂಘಟನೆಯ ಶಕ್ತಿ ಕುಂದಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಸ್ವಂತ ಶಕ್ತಿ ಇದ್ದರೆ ಅವರ ಹೆಸರು ಬಳಸಿಕೊಳ್ಳದೆ ಬದುಕಿ ತೋರಿಸಬೇಕಾದ ದಲಿತ ಮುಖಂಡರು ಅಂಬೇಡ್ಕರ್ ರಚಿತ ಸಂವಿಧಾನ ಪೀಠಿಕೆ ರೀತಿ ನಡೆದುಕೊಳ್ಳದೆ ಸಂಪೂರ್ಣ ಸ್ವಾರ್ಥ ಬದುಕಿಗೆ ಅವರ ಹೆಸರು ಬಳಸಿಕೊಳ್ಳುತ್ತಿರುವುದು ಬೇಸರದ ಸಂಗತಿ ಎಂದು ವಿಷಾದಿಸಿದ ಅವರು ಈ ಹಿಂದೆ ದಲಿತರು ಅನುಭವಿಸಿದ ನೋವುಗಳನ್ನು ಹೋಗಲಾಡಿಸಿದ ಅಂಬೇಡ್ಕರ್ ಅವರ ಹೆಸರು ದುರ್ಬಳಕೆ ಮಾಡಲು ಮುಂದಾಗಿರುವುದು ವಿಪರ್ಯಾಸ. ದಲಿತರೇ ದಲಿತರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಬ್ಬಿ ಪಿಎಸ್ಸೈ ಸುನೀಲ್ ಕುಮಾರ್ ಮಾತನಾಡಿ ಸಮಾಜದಲ್ಲಿ ಸಾಮಾಜಿಕ ನ್ಯಾಯ ಒದಗಿಸಿದ ಅಂಬೇಡ್ಕರ್ ಅವರು ಯುವ ಪೀಳಿಗೆಗೆ ಆದರ್ಶವಾಗಬೇಕು. ಶೋಷಿತ ವರ್ಗ, ದೀನ ದಲಿತರ ಉದ್ದಾರಕ್ಕೆ ಬರವಣಿಗೆ ಮೂಲಕ ಶ್ರಮಿಸಿದರು. ಸಂವಿಧಾನ ಬದ್ಧ ನಡವಳಿಕೆ ಎಲ್ಲರೂ ಪಾಲಿಸಿದಲ್ಲಿ ಸಮಾಜದ ಸ್ವಾಸ್ಥ್ಯ, ಸೌಖ್ಯ ತಾನಾಗಿಯೇ ಬರುತ್ತದೆ. ಇಂತಹ ಸಾಮಾಜಿಕ ಗ್ರಂಥ ವಿಶ್ವಮಾನ್ಯ ಗಳಿಸಿದೆ. ಅಂಬೇಡ್ಕರ್ ಸ್ಮರಣೆ ಎಲ್ಲರ ಕರ್ತವ್ಯ. ಹಾಗೆಯೇ ಅವರ ಶಿಕ್ಷಣ, ಸಂಘಟನೆ ಹಾಗೂ ಹೋರಾಟ ತತ್ವ ಎಲ್ಲರೂ ಪಾಲಿಸಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಆದಿ ಜಾಂಬವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಕೆಂಪರಾಜು ಮೌರ್ಯ, ಜಿ.ಸಿ.ಅಭಿಷೇಕ್, ಯೋಗೀಶ್, ದೊಡ್ಡಗುಣಿ ಕೀರ್ತಿ, ಪ್ರವೀಣ, ಬಾಲಕೃಷ್ಣ, ಮಧುಸೂದನ್, ರವಿಕಿರಣ್, ರವಿ, ಪುನೀತ್, ನರಸಿಂಹಮೂರ್ತಿ, ನಂದನ್, ಮಲ್ಲಿಕಾರ್ಜುನ್, ಅರುಣ್, ಹುಚ್ಚೇಗೌಡ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...