ಸದಾ ಕಾರ್ಯ ಒತ್ತಡದಲ್ಲೇ ಇರುವ ಪೊಲೀಸ್ ಸಿಬ್ಬಂದಿ ಇಂದು ಸುಮಾರು ಐದು ಕಿಲೋ ಮೀಟರ್ ಓಡುವುದರ ಮೂಲಕ ರಾಷ್ಟ್ರೀಯ ಏಕತೆಯನ್ನು ಸಾರಿದರು.
ಗುಬ್ಬಿ ಪೊಲೀಸ್ ವತಿಯಿಂದ ಇಂದು ಮುಂಜಾನೆ ಸುಮಾರು 6.30 ಕ್ಕೆ ಗುಬ್ಬಿಯ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಿಂದ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದವರೆಗೆ 5 ಕಿಮೀ ಓಟ ಏರ್ಪಡಿಸಲಾಗಿತ್ತು.
ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯಿ ಪಟೇಲ್ ರವರ 150 ನೇ ಜನ್ಮ ದಿನ ಇದರ ಅಂಗವಾಗಿ ಏರ್ಪಡಿಸಿದ್ದ ಈ ರಾಷ್ಟ್ರೀಯ ಏಕತಾ ಓಟದಲ್ಲಿ ತಹಸೀಲ್ದಾರ್ ಬಿ.ಆರತಿ, ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ, ಗುಬ್ಬಿ ಠಾಣಾಧಿಕಾರಿ ಸುನೀಲ್ ಕುಮಾರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಂಜುಳಾದೇವಿ, ಗುಬ್ಬಿ ಠಾಣೆಯ ಎಲ್ಲಾ ಸಿಬ್ಬಂದಿ ಭಾಗವಹಿಸಿದ್ದರು.





