ಗುಬ್ಬಿ | ಪರಿಸರ ಕಾಳಜಿ ಪ್ರಸ್ತುತ ಮಕ್ಕಳಲ್ಲಿ ಮೂಡಬೇಕು : ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ಎಂ ಡಿ ಎಸ್.ರಘು

Date:

ಜಾಗತೀಕ ವಾತಾವರಣಕ್ಕೆ ಪರಿಸರ ಅಸಮತೋಲನವಾಗಿದೆ. ತಂತ್ರಜ್ಞಾನ ಬೆಳೆದಂತೆ ಪ್ರಕೃತಿ ಕೂಡಾ ಬದಲಾವಣೆಗೊಳ್ಳುತ್ತಿದೆ. ಮನುಷ್ಯ ಪ್ರಸ್ತುತ ಪರಿಸರದಲ್ಲಿ ಉಳಿಯಬೇಕಾದರೆ ಪರಿಸರ ಸಂರಕ್ಷಣೆ ಅತ್ಯಗತ್ಯ. ಇಂದಿನ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಪ್ರತಿ ಮಕ್ಕಳು ಎರೆಡೆರಡು ಸಸಿ ನೆಟ್ಟು ಪೋಷಿಸಬೇಕು ಎಂದು ಮೀಡಿಯಾ ಬ್ಯಾಕ್ ಆಫೀಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ತಿಳಿಸಿದರು.

ಪಟ್ಟಣದ ಎಂ.ಜಿ.ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಮ್ಮ 47 ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆ ವಿಶ್ವ ಪರಿಸರ ದಿನಾಚರಣೆ ಜೊತೆಗೆ ವಿವಿಧ ಸಸಿಗಳನ್ನು ನೆಟ್ಟು ಮಾತನಾಡಿದ ಅವರು ಅರಣ್ಯ ಸಂಪತ್ತು ವಿನಾಶದಂಚಿಗೆ ಬಂದಿರುವ ಕಾರಣ ಹಸಿರು ಕ್ರಾಂತಿ ಎಲ್ಲೆಡೆ ಆಗಬೇಕಿದೆ. ಶೇಕಡಾ 33 ಅರಣ್ಯ ಸಂಪತ್ತು ಅತ್ಯವಶ್ಯವಿದ್ದು, ಇನ್ನೂ ಶೇಕಡಾ 19 ರಷ್ಟು ಮಾತ್ರ ಅರಣ್ಯ ಉಳಿಸಿದ್ದೇವೆ ಎಂದರು.

ಮುಖಂಡ ಜಿ.ಎನ್.ಬೆಟ್ಟಸ್ವಾಮಿ ಮಾತನಾಡಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬ ನಾಗರೀಕ ಗಿಡ ಬೆಳೆಸಿ ಪೋಷಿಸುವ ಹೊಣೆ ಹೊರಬೇಕು. ಹುಟ್ಟುಹಬ್ಬದ ಸವಿ ನೆನಪಿಗೆ ಸಸಿ ನೆಡುವ ಕೆಲಸ ಮಾಡಿದ ರಘು ಅವರ ಸಾಮಾಜಿಕ ಕೆಲಸ ಮೆಚ್ಚುವಂತದ್ದು. ಪರಿಸರ ಬಗ್ಗೆ ಮಕ್ಕಳಿಗೆ ವರ್ಷಪೂರ್ತಿ ವಿವರಿಸಿ ಜಾಗೃತಿ ಮೂಡಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ಮಾತನಾಡಿ ಪರಿಸರ ಎಂದರೆ ಹಸಿರು ಉಳಿಸುವ ನಮ್ಮ ಸುತ್ತಲಿನ ಮಾಲಿನ್ಯ ಕೂಡಾ ಸ್ವಚ್ಚವಾಗಿರಬೇಕು. ಮನೆಯ ವಾತಾವರಣ ಸುಂದರವಾಗಿ ಇಟ್ಟುಕೊಳ್ಳುವ ಜನರು ತಮ್ಮ ಕಚೇರಿ, ದೇವಸ್ಥಾನ, ಶಾಲೆ, ಕಾಲೇಜು, ಪಾರ್ಕ್, ರಸ್ತೆ, ಚರಂಡಿ ಕೂಡಾ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಇದು ನಾಗರೀಕರ ಜವಾಬ್ದಾರಿ ಆಗಿದೆ ಎಂದರು.

ಈ ಸಂದರ್ಭದಲ್ಲಿ ಎಸ್.ರಘು ಅವರ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಮಕ್ಕಳಿಗೆ ಹಂಚಲಾಯಿತು. ಮುಖಂಡರಾದ ಸುರುಗೇನಹಳ್ಳಿ ರಂಗನಾಥ್, ಮಹಾಲಿಂಗಯ್ಯ, ಸತೀಶ್, ರಘು, ಚಿಕ್ಕರಾಜು, ಜಿ.ಎಸ್.ಮಂಜುನಾಥ್, ಮನೋಹರ್, ಸ್ಟ್ಯಾಂಪ್ ವೆಂಡರ್ ನರಸಿಂಹಮೂರ್ತಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...