ಗುಬ್ಬಿ | ಸಂವಿಧಾನ ಆಶೋತ್ತರದಂತೆ ಇನ್ನೂ ಸಮಾನತೆ ತರಬೇಕಿದೆ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ತರುವಲ್ಲಿ ನಾವೆಲ್ಲರೂ ಇನ್ನೂ ಬದ್ಧತೆ ಬೆಳೆಸಿಕೊಳ್ಳಬೇಕಿದೆ. ಅಂಬೇಡ್ಕರ್ ಅವರ ಸಂವಿಧಾನ ಆಶೋತ್ತರದಂತೆ ಸಮಾನತೆ ತರಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ 76 ನೇ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಮಾತನಾಡಿದ ಅವರು ದೇಶದ ಪ್ರಜಾಪ್ರಭುತ್ವ ಗಣರಾಜ್ಯ ಮೂಲಕ ಸಾಮಾಜಿಕ ನ್ಯಾಯ ಬದ್ಧತೆಯ ದಿನ ಸಮಾಜಕ್ಕೆ ಕೊಡುಗೆ ನೀಡಿದ ವ್ಯಕ್ತಿಗಳ ಸನ್ಮಾನಿಸಿ ಗೌರವಿಸುವ ಕೆಲಸ ಮಾಡಬೇಕು ಎಂದರು.

ಸಂವಿಧಾನದಂತೆ ಕೆಲಸ ಮಾಡುವ ಮೂರು ಪ್ರಮುಖ ಅಂಗಗಳು ಇನ್ನೂ ಮೇಲು ಕೀಳು, ಬಡವ ಶ್ರೀಮಂತ ತೊಡೆದು ಹಾಕಲು ಸಾಧ್ಯವಾಗಿಲ್ಲ. ಅಂಬೇಡ್ಕರ್ ಅವರ ಆಶಯದಂತೆ ನವ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಅಧಿಕಾರ ಎನ್ನುವುದು ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದಲ್ಲಿ ಮಾತ್ರ ಸಂವಿಧಾನ ಸಾರ್ಥಕತೆ ಪಡೆಯುತ್ತದೆ. ಈ ಕೆಲಸಕ್ಕೆ ಉತ್ತಮ ಶಿಕ್ಷಣ ಒದಗಿಸುವ ಕೆಲಸ ಆಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಬಿ.ಆರತಿ ಸಂದೇಶ ನೀಡಿ ಭಾರತೀಯರು ದೇಶದ ಗಣ್ಯರನ್ನು ಸ್ಮರಿಸಬೇಕು. ತ್ಯಾಗ ಬಲಿದಾನ ನೀಡಿದ ಸೈನಿಕರು ಹಾಗೂ ದೇಶದ ಪ್ರಗತಿಗೆ ಸಹಕಾರಿಯಾದ ವಿಜ್ಞಾನಿಗಳಿಗೆ ಈ ದಿನ ಗೌರವ ಸಲ್ಲಬೇಕು. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಒಂದು ಉತ್ತಮ ಆಡಳಿತ ನೀಡಿ ದೇಶದ ಉನ್ನತಿಗೆ ಶ್ರಮಿಸುತ್ತವೆ. ಮೂರು ಅಂಗಗಳ ಜೊತೆ ನಾಗರೀಕ ತನ್ನ ಕರ್ತವ್ಯ ಅಚ್ಚುಕಟ್ಟಾಗಿ ಪಾಲಿಸಬೇಕು ಎಂದರು.

ಉಪನ್ಯಾಸಕ ತಿಮ್ಮೇಗೌಡ ಮಾತನಾಡಿ 1950 ಜನವರಿ 26 ರಂದು ಗಣರಾಜ್ಯ ರೂಪಿಸಿ ಸಂವಿಧಾನ ಜಾರಿ ಮಾಡಿಕೊಂಡು ನಮ್ಮ ದೇಶದ ಆಡಳಿತ ಆರಂಭಿಸಿದೆವು. ಬ್ರಿಟಿಷರ ಆಳ್ವಿಕೆಯಲ್ಲಿ ನಮ್ಮ ದೇಶದಲ್ಲಿ ನಾವೇ ತೃತೀಯ ಪ್ರಜೆಗಳಾಗಿ ಇದ್ದು ಸ್ವಾತಂತ್ರ್ಯ ಹೋರಾಟ ಮೂಲಕ ಸ್ವಾತಂತ್ರ್ಯ ಪಡೆದು ನಂತರ ವಿವಿಧ ರಾಜ್ಯಗಳನ್ನು ಒಗ್ಗೂಡಿಸಿ ಸಂವಿಧಾನ ಜಾರಿಗೆ ತರಲಾಯಿತು. ಹೀಗೆ ದೇಶದ ಅಭಿವೃದ್ದಿ ಹಂತ ಹಂತವಾಗಿ ಸಾಗಿ ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನ ಎನಿಸಿಕೊಂಡಿದ್ದೇವೆ. ಹೀಗೆ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಲವರ ಕೊಡುಗೆ ಇದೆ. ಅವರನ್ನೆಲ್ಲಾ ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.

ಪೋಲಿಸ್, ಗೃಹರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಅಂಡ್ ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು ನಡೆಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ, ಉಪಾಧ್ಯಕ್ಷೆ ಮಮತಾ ಶಿವಪ್ಪ ಸೇರಿದಂತೆ ಎಲ್ಲಾ ಸದಸ್ಯರು, ತಾಪಂ ಇಓ ಶಿವಪ್ರಕಾಶ್, ಬಿಇಓ ನಟರಾಜ್, ಸಿಪಿಐ ಗೋಪಿನಾಥ್, ಪ್ರಾಚಾರ್ಯ ಪ್ರಸನ್ನ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿಂದುಮಾಧವ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...