ಗುಬ್ಬಿ| ಸದ್ದಿಲ್ಲದೆ ಆರಂಭವಾದ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ವಿರುದ್ಧ ರೈತರು ಹೋರಾಟಕ್ಕೆ ಸಿದ್ಧರಾಗಿ : ಎಸ್.ಡಿ.ದಿಲೀಪ್ ಕುಮಾರ್

Date:

ಗುಬ್ಬಿ ತಾಲ್ಲೂಕಿನ ರೈತರ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಹೋರಾಟದಿಂದ ಸ್ಥಗಿತಗೊಳಿಸಲಾಗಿತ್ತು. ಆದರೆ ಕಳೆದೆರಡು ದಿನದಿಂದ ಮಳೆಯಲ್ಲೇ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲು ಪೈಪ್ ತಂದಿದ್ದಾರೆ. ರೈತರಿಗೆ ಮರಣ ಶಾಸನವಾಗುವ ಈ ಲಿಂಕ್ ಕೆನಾಲ್ ಕೆಲಸ ಮಾಡದಂತೆ ರೈತರು ಒಗ್ಗೂಡಿ ಹೋರಾಟಕ್ಕೆ ಸಜ್ಜಾಗಬೇಕು ಎಂದು ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಕರೆ ನೀಡಿದರು.

ಗುಬ್ಬಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಲಿಂಕ್ ಕೆನಾಲ್ ಕೆಲಸ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದ ನಮ್ಮ ಶಾಸಕರು ಡೈರಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಸರ್ಕಾರದ ಜೊತೆ ಏನು ಮಾತನಾಡಿದ್ದಾರೆ ಎಂಬುದು ತಿಳಿದಿಲ್ಲ. ಕೂಡಲೇ ತಾಲ್ಲೂಕಿನ ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ತಿಳಿಸಿದರು.

ಕಾಮಗಾರಿ ಮರು ಆರಂಭಿಸಲು ಸಜ್ಜಾದ ಸರ್ಕಾರ ರೈತರನ್ನು ಕಡೆಗಣಿಸಿದೆ. ಇಲ್ಲಿನ ಸಾವಿರಾರು ರೈತರ ಮಾರಣ ಹೋಮ ನಡೆಸಿ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಸಿದ್ದವಿದ್ದಾರೆ. 10 ಟಿಎಂಸಿ ನೀರು ಹರಿಯುವ ಲೆಕ್ಕಾಚಾರದಲ್ಲಿ ಪೈಪ್ ಲೈನ್ ನಡೆಯಲಿದೆ. ಈ ಕಾಮಗಾರಿ ನಡೆದಲ್ಲಿ ತಾಲ್ಲೂಕಿನ ರೈತರು ಬೀದಿಗೆ ಬೀಳುತ್ತಾರೆ. ಈ ನಿಟ್ಟಿನಲ್ಲಿ ರೈತರು ಯಾವ ಪಕ್ಷದ ಮುಖಂಡರಾದರೂ ಇಲ್ಲಿಗೆ ಬಂದು ಹೋರಾಟಕ್ಕೆ ಕೈ ಜೋಡಿಸಲು ಕರೆ ನೀಡಬೇಕು. ರೈತರ ಪರ ಪಕ್ಷಾತೀತ ಉಗ್ರ ಹೋರಾಟ ಅನಿವಾರ್ಯ. ಎಲ್ಲರೂ ಒಗ್ಗೂಡಿ ಬಂದು ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕಿದೆ ಎಂದು ಕರೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...