ಗುಬ್ಬಿ | ಮನೆ ಕುಸಿಯುವ ಭೀತಿ : ಗೌರಮ್ಮನ ಕುಟುಂಬಕ್ಕೆ ಬೇಕಿದೆ ‘ಮನೆ ಭಾಗ್ಯ’

Date:

ಸುರಕ್ಷಿತ ಸೂರು ಪ್ರತಿಯೊಬ್ಬ ಮನುಷ್ಯನ ಕನಸು. ಆದರೆ ಇಂದಿಗೂ ಹಲವಾರು ಕುಟುಂಬಗಳು ಸರಿಯಾದ ಸೂರಿಲ್ಲದೆ ಜೀವ ಕೈಯ್ಯಲ್ಲಿ ಹಿಡಿದು ಬದುಕು ಸಾಗಿಸುತ್ತಿದ್ದಾರೆ ಎಂಬುದಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ. ಎನ್ ಕೋಟೆ ಗ್ರಾಮದ ಗೌರಮ್ಮ ಅವರ ಕುಟುಂಬವೇ ನಿದರ್ಶನವಾಗಿ ನಿಲ್ಲುತ್ತದೆ.

ಹೌದು. ಮಳೆ ಬಂದರೆ ಸೋರುತ್ತದೆ. ಮಳೆಗೆ ಮಣ್ಣಿನ ಗೋಡೆಗಳು ಶಿಥಿಲಗೊಂಡು ಬಿರುಕುಬಿಟ್ಟಿವೆ. ಯಾವಾಗ, ಏನೋ ಎಂಬ ಭಯದಲ್ಲೇ ಗೌರಮ್ಮ ಮತ್ತು ಆಕೆಯ ಎರಡು ಮಕ್ಕಳು ಜೀವನ ಸಾಗಿಸುತ್ತಿದ್ದಾರೆ.

ಒಬ್ಬ ಮಗ ಅಂಗವಿಕಲ, ಇನ್ನೊಬ್ಬ ಮಗನ ಕೂಲಿ ಕೆಲಸ ನೆಚ್ಚಿಕೊಂಡು ಈ ಕುಟುಂಬ ಕಾಲ ಹಾಕುತ್ತಿದೆ. ಏನಾದರೂ ಮಾಡಿ ಒಂದು ಸುರಕ್ಷಿತ ಮನೆ ಕಟ್ಟುವ ಇವರ ಕನಸಿಗೆ ಇಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸ್ಪಂದಿಸುತ್ತಿಲ್ಲ. ಈ ಬಡ ಕುಟುಂಬದ ಮನವಿಯನ್ನು ಆಲಿಸದಷ್ಟು ಮೊಂಡುತನ ಪ್ರದರ್ಶಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಯಾವುದೇ ಪ್ರಭಾವ ಇಲ್ಲದ ಈ ದಲಿತ ಕುಟುಂಬಕ್ಕೆ ಮನೆ ಕಟ್ಟಿಕೊಳ್ಳಲು ಸರ್ಕಾರದ ನೆರವು ನೀಡಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಾನೆ

15 ವರ್ಷದ ಹಿಂದೆ ಅನಾರೋಗ್ಯದಿಂದ ಗೌರಮ್ಮ ಅವರ ಗಂಡ ಲಕ್ಷ್ಮೀರಂಗಯ್ಯ ನಿಧನರಾಗಿದ್ದಾರೆ. ಆಗಿನಿಂದ ಈ ಕುಟುಂಬಕ್ಕೆ ಅಸರೆಯೇ ಇಲ್ಲದಂತಾಗಿದೆ. ಇರುವ ಮಣ್ಣಿನ ಮನೆಯು ಬೀಳುವ ಹಂತ ತಲುಪಿದೆ. ಮನೆಕಳೆದುಕೊಂಡರೆ ಈ ಕುಟುಂಬ ಅಕ್ಷರಶಃ ಬೀದಿಗೆ ಬೀಳಲಿದೆ.

ಕೆಲವು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಮನೆ ಇನ್ನಷ್ಟು ಹಾಳಾಗಿದೆ. ಸೋರುತ್ತಿರುವ ಮನೆಗೆ ಬಕೆಟ್ ಪಾತ್ರೆಗಳನ್ನಿಟ್ಟು ರಾತ್ರಿಯಿಡೀ ನಿದ್ದೆಗೆಟ್ಟು ನೀರನ್ನು ಹೊರಗೆ ಹಾಕುತ್ತಿದ್ದಾರೆ. ಹಲವಾರು ಬಾರಿ ಎಂ ಎನ್ ಕೋಟೆ ಗ್ರಾಮ ಪಂಚಾಯಿತಿಗೆ ವಸತಿ ಯೋಜನೆಯಲ್ಲಿ ಮನೆ ಮಂಜೂರಾತಿ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದ್ದರೂ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗ ಮತ್ತು ಚುನಾಯಿತ ಜನಪ್ರತಿನಿಧಿಗಳು ಗಮನ ಕೊಡುತ್ತಿಲ್ಲ ಎಂಬುದು ಕುಟುಂಬದವರ ಆರೋಪವಾಗಿದೆ.

ಅಸಹಾಯಕ ಸ್ಥಿತಿಯಲ್ಲಿರುವ ಈ ಕುಟುಂಬಕ್ಕೆ ಎಂ. ಎನ್. ಕೋಟೆ ಗ್ರಾಮ ಪಂಚಾಯಿತಿ ಮನೆ ನಿರ್ಮಿಸಿಕೊಳ್ಳಲು ನೆರವಾಗುತ್ತ ಎಂಬುದನ್ನು ಕಾದು ನೋಡಬೇಕಿದೆ.

ಮನೆ1 1
WhatsApp Image 2024 02 22 at 5.42.38 PM
ಚಂದನ್ ಡಿ ಎನ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...