ಗುಬ್ಬಿ | ಉತ್ಪಾದನಾ ವೆಚ್ಚ ಅನುಸಾರ ರೈತರ ಬೆಳೆಗೆ ಬೆಲೆ ನಿಗದಿ ಮಾಡಿ : ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಆಗ್ರಹ

Date:

ರೈತರು ಬೆಳೆದ ಬೆಳೆಯನ್ನು ರೋಡಿಗೆ ತಂದು ಬಿಸಾಡುವ ದೃಶ್ಯ ಎಲ್ಲರೂ ಕಂಡಿದ್ದಾರೆ. ಲಕ್ಷಾಂತರ ರೂ ಸಾಲ ಮಾಡಿಕೊಂಡು ನಿರಾಸೆ ಅನುಭವಿಸುತ್ತಾನೆ. ಈ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರ ಉತ್ಪಾದನಾ ವೆಚ್ಚ ತಿಳಿದು ಬೆಳೆಗೆ ಬೆಲೆ ನಿಗದಿ ಮಾಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಗ್ರಹಿಸಿದರು.

ತಾಲ್ಲೂಕಿನ ಕಡಬ ಹೋಬಳಿ ಕೋಣೆಮಾದೇನಹಳ್ಳಿ ಗ್ರಾಮದಲ್ಲಿ ರೈತಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು ಕುಡಿಯುವ ನೀರಿಗೂ ಹಾಲಿಗೂ ಒಂದೇ ಬೆಲೆ ಮಾರುಕಟ್ಟೆಯಲ್ಲಿ ಸಾಕ್ಷಿಯಾಗಿ ನಮ್ಮ ಮುಂದಿದೆ. ಒಂದು ಲೀಟರ್ ನೀರಿನ ಬಾಟಲ್ ಶೋ ಕೇಸ್ ನಲ್ಲಿ ಇದ್ದರೆ, ಹಾಲು ಪ್ಯಾಕೆಟ್ ನಲ್ಲಿದೆ. ಆದರೆ ಹಾಲು ಸಿದ್ಧವಾಗಲು ಆಗುವ ವೆಚ್ಚ ಗಮನಿಸಿದರೆ ಒಂದು ಲೀಟರ್ ಹಾಲು 80 ರೂಗಿಂತ ಹೆಚ್ಚಿರಬೇಕು ಎಂದು ಉದಾಹರಣೆ ನೀಡಿದರು.

1001302490

ದಿನದ 16 ಗಂಟೆ ದುಡಿಯುವ ಏಕೈಕ ವರ್ಗ ರೈತರು. ಆದರೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೆ ಆತ್ಮಹತ್ಯೆಗೆ ಶರಣಾಗುವವರ ಸಂಖ್ಯೆ ಸಹ ರೈತರದ್ದೇ ಆಗಿದೆ. ಪ್ರತಿ ಗಂಟೆಗೆ 24 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಳೆದ ಹತ್ತು ವರ್ಷದಲ್ಲಿ 3.50 ಲಕ್ಷ ಮಂದಿ ರೈತರನ್ನು ಈಗಾಗಲೇ ಕಳೆದುಕೊಂಡಿದ್ದೇವೆ. ದಿನದ 8 ಗಂಟೆ ದುಡಿಯುವ ಕಾರ್ಮಿಕ ನೆಮ್ಮದಿ ಕಾಣುತ್ತಾನೆ. ರೈತರಿಗೆ ಯಾಕೆ ನೆಮ್ಮದಿ ಸಿಕ್ಕಿಲ್ಲ ಎಂಬುದು ಸಮೀಕ್ಷೆ ನಡೆಸಿ ಸರ್ಕಾರ ರೈತ ಪರ ನಿಲ್ಲಬೇಕಿದೆ. ನೀರು, ಗೊಬ್ಬರ, ಕರೆಂಟ್ ನೀಡಿದರೆ ಸ್ವಾಭಿಮಾನಿ ಬದುಕು ನಡೆಸುತ್ತಾನೆ. ಈ ನಿಟ್ಟಿನಲ್ಲಿ ನಮ್ಮ ಹಕ್ಕು ಪಡೆಯಲು ರೈತ ಸಂಘ ಹಳ್ಳಿಗಳಲ್ಲಿ ಬಲವರ್ಧನೆಗೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ರೈತರಲ್ಲಿ ಅಸಂಘಟಿತ ವಾತಾವರಣ ಹೆಚ್ಚಾಗಿದೆ. ಕೃಷಿಗೆ ಪ್ರಾಮುಖ್ಯತೆ ನೀಡದ ಸರ್ಕಾರದ ವಿರುದ್ಧ ಹೋರಾಟ ಮೂಲಕವೇ ನಮ್ಮ ಕೆಲಸ ಸಾಧಿಸಬೇಕಿದೆ. ಪ್ರತಿ ಗ್ರಾಮದಲ್ಲಿ ರೈತ ಸಂಘ ಘಟಕ ಕೆಲಸ ಮಾಡಿದರೆ ನಮ್ಮ ಹೋರಾಟಕ್ಕೆ ಬಲ ಸಿಗಲಿದೆ. ಸರ್ಕಾರದ ಗಮನ ಸೆಳೆಯಲು ಸಂಘಟಿತ ಶಕ್ತಿ ಪ್ರದರ್ಶನ ಮಾಡಬೇಕಿದೆ. ಈ ನಿಟ್ಟಿನಲ್ಲಿ ರೈತರು ಒಗ್ಗೂಡಿ ಸಂಘದ ಮೂಲಕ ತಮ್ಮ ಹಕ್ಕು ಪ್ರತಿಪಾದಿಸಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ 50 ಮಂದಿ ರೈತರ ಸಂಘಕ್ಕೆ ಚಾಲನೆ ನೀಡಲಾಯಿತು.

ವೇದಿಕೆಯಲ್ಲಿ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಮಂಜುನಾಥ್, ಚನ್ನಬಸವಣ್ಣ, ಜಗದೀಶಯ್ಯ, ಗಂಗಣ್ಣ, ಪ್ರಕಾಶ್, ಬಸವರಾಜು, ಮಹದೇವಣ್ಣ, ಯತೀಶ್, ಕನ್ನಿಗಪ್ಪ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...