ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

Date:

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಮುಂದಿನ ದಿನಗಳಲ್ಲೂ ಯುವ ಪೀಳಿಗೆಗೆ ಆಕರ್ಷಣೆಯಾಗುವ ಜಾನಪದವನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರೂ ಒಟ್ಟಿಗೆ ಸೇರಿ ಮಾಡೋಣ ಎಂದು ಸಂಪನ್ಮೂಲ ವ್ಯಕ್ತಿ ಡಾ.ಮೂರ್ತಿ ತಿಮ್ಮನಹಳ್ಳಿ ಕರೆ ನೀಡಿದರು.

ತಾಲ್ಲೂಕಿನ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ‘ಕನ್ನಡ ಸಾಹಿತ್ಯ ಪರಿಷತ್ತಿನ ನಡೆ ಯುವಜನತೆ ಕಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಾಹಿತ್ಯದಲ್ಲಿ ಚಂಪೂ ಕಾವ್ಯ, ವಚನ ಸಾಹಿತ್ಯ, ಷಟ್ಪದಿ, ತ್ರಿಪದಿ, ರಗಳೆ, ಜನಪದ ಸಾಹಿತ್ಯ ಹೀಗೆ ಹಲವು ಪ್ರಕಾರಗಳಿವೆ ಎಂದು ವಿವರಿಸಿದರು.

ಸಾಹಿತ್ಯಾಸಕ್ತಿ ಮೂಡಿಸುವ ಕವನ, ಕಾದಂಬರಿ, ಗದ್ಯ, ನಾಟಕಗಳು ಸಹ ನಮ್ಮಲ್ಲಿ ಶ್ರೀಮಂತವಾಗಿ ಬೆಳೆದರೂ ಪ್ರಸ್ತುತ ಯುವಜನತೆ ಸಾಹಿತ್ಯದಿಂದ ಹೊರತಾಗಿ ಮೊಬೈಲ್ ಭಾಷೆಯತ್ತ ಮುಳುಗಿದ್ದಾರೆ. ಶಿಕ್ಷಣ ಪಡೆದ ನಂತರದಲ್ಲಿ ಸಾಹಿತ್ಯ ಅಭಿರುಚಿ ಬದಲಾಗಿರುವುದು ವಿಷಾದನೀಯ. ಆದರೆ ಅವಿದ್ಯಾವಂತ ಹಳ್ಳಿಗಾಡಿನ ಜನ ಲಿಖಿತ ರೂಪವಿಲ್ಲದ ಜನಪದ ಹಾಡುಗಳು ಎಂದೆಂದಿಗೂ ಅರ್ಥಪೂರ್ಣ ಎನಿಸಿದೆ. ಮನುಷ್ಯನ ಬದುಕಿಗೆ ಹತ್ತಿರವಾದ ಜನಪದ ಹಾಡುಗಳು ಮರೆಯಾಗದಂತೆ ಕಾಪಾಡುವ ಕೆಲಸ ಇಂದಿನ ಯುವ ಸಾಹಿತಿಗಳು ಮಾಡಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಮಾತನಾಡಿ ಕನ್ನಡ ಸಾಹಿತ್ಯ ಉಳಿಸಿ ಬೆಳೆಸಲು ಕಾಲೇಜು ವಿದ್ಯಾರ್ಥಿಗಳು ಮುಂದಾಗಬೇಕು. ಈ ಹಿನ್ನಲೆ ಸಾಹಿತ್ಯ ಪರಿಷತ್ತು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿಗೆ ತೆರಳಿ ಸಾಹಿತ್ಯಾಸಕ್ತಿ ಬೆಳೆಸುವ ಕೆಲಸ ಮಾಡುತ್ತಿದೆ. ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿದೆ. ನೂರಾರು ಕವಿಗಳ ಸಾಹಿತ್ಯ ಭಂಡಾರ ನಮ್ಮಗಳ ಮಧ್ಯೆ ಇದೆ. ಯುವ ಜನಾಂಗ ತಂತ್ರಜ್ಞಾನ ಜೊತೆ ಬೆರೆತು ಕನ್ನಡ ಸಾಹಿತ್ಯ ಓದುವ ಬರೆಯುವ ಹವ್ಯಾಸ ಮರೆತಿದ್ದಾರೆ. ಯುವ ಸಾಹಿತಿಗಳು ನಿರಂತರ ಸಾಹಿತ್ಯ ಕೃಷಿ ನಡೆಸಬೇಕು ಎಂದು ಕರೆ ನೀಡಿದರು.

ಪ್ರಾಚಾರ್ಯ ಎಚ್.ಎಂ.ಸದಾಶಿವಯ್ಯ ಮಾತನಾಡಿ ನಮ್ಮ ಕನ್ನಡ ಸಂಸ್ಕೃತಿ ಪರಂಪರೆ ಬಗ್ಗೆ ಯುವಕರು ಅರಿಯಬೇಕಿದೆ. ಶಿಕ್ಷಣ ಜೊತೆಗೆ ಕನ್ನಡ ಸಾಹಿತ್ಯ ಓದುವ ಅಭ್ಯಾಸ ಬೆಳೆಸಿಕೊಂಡರೆ ಬರೆಯುವ ಹವ್ಯಾಸ ಸಹ ಜೊತೆಯಲ್ಲೇ ಮೈಗೂಡುತ್ತದೆ. ಕಾಲೇಜಿನ ಗ್ರಂಥಾಲಯವನ್ನು ಬಳಸಿಕೊಂಡು ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ಮುಂದಾಗಿ ಗುರುತರ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಎಂದು ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಕೆಲ ಗಣ್ಯರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಉಪನ್ಯಾಸಕರಾದ ಪಾಲಾಕ್ಷ ಹಾಗಲವಾಡಿ, ಮಂಜುನಾಥ್, ಚಿಕ್ಕರಾಜು, ಶಂಭುಲಿಂಗಮೂರ್ತಿ, ವೇಣುಗೋಪಾಲ್, ವಿದ್ಯಾ, ಕುಸುಮಾ, ರಾಜೇಶ್ವರಿ ಸೇರಿದಂತೆ ಹಲವು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...