ಗುಬ್ಬಿ | ಹನಿಟ್ರ್ಯಾಪ್ ಗೆ ಸಿಲುಕಿ ಬ್ಲ್ಯಾಕ್ ಮೇಲ್ ಗೊಳಗಾದ ಪಪಂ ಮಾಜಿ ಅಧ್ಯಕ್ಷ : ಪ್ರಕರಣ ದಾಖಲು

Date:

ಹನಿಟ್ರ್ಯಾಪ್ ಗೆ ಸಿಲುಕಿ ಲಲನೆಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಬ್ಲ್ಯಾಕ್ ಮೇಲ್ ಗೆ ಒಳಗಾದ ಪಪಂ ಮಾಜಿ ಅಧ್ಯಕ್ಷ ಜಿ.ಎನ್.ಅಣ್ಣಪ್ಪಸ್ವಾಮಿ ಬೆದರಿಕೆಗೆ ಹೆದರಿ ಲಕ್ಷಾಂತರ ರೂಗಳ ದಂಡ ತೆತ್ತುವ ಮುನ್ನ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಳೆದ 45 ದಿನಗಳಿಂದ ನಡೆದ ಈ ಹೈಡ್ರಾಮಾ ಫೇಸ್ ಬುಕ್ ಮೂಲಕ ಲಲನೆಯೊಬ್ಬಳ ಸ್ನೇಹ ಬೆಳೆಸಿ ದಿನ ಕಳೆದಂತೆ ಹನಿ ಟ್ರ್ಯಾಪ್ ಗೆ ಸಿಲುಕಿದ ಪಟ್ಟಣ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಜಿ.ಎನ್.ಅಣ್ಣಪ್ಪಸ್ವಾಮಿ ಬರೋಬ್ಬರಿ 20 ಲಕ್ಷ ರೂಗಳ ಹಣದ ಬೇಡಿಕೆಗೆ ಹೆದರಿ ಗುಬ್ಬಿ ಪೊಲೀಸರ ಮೊರೆಹೋಗಿದ್ದಾರೆ.

ಫೇಸ್ ಬುಕ್ ನಲ್ಲಿ ಸ್ನೇಹ ಬೆಳೆದ ನಂತರ ಹಾಯ್, ಬಾಯ್, ಗುಡ್ ಮಾರ್ನಿಂಗ್, ಅಂತೆಲ್ಲ ಬೆಳೆದ ಸ್ನೇಹ ಸಲುಗೆ ಮಿತಿ ಮೀರಿ ವಿಡಿಯೋ ಕಾಲಿಂಗ್ ಮಾಡಿ ಮಾತನಾಡುವ ಘಟ್ಟ ತಲುಪಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಆ ಮಹಿಳೆ ಹಲವು ಕಡೆ ಬಲವಂತವಾಗಿ ಕರೆಸಿಕೊಂಡು ಮದುವೆಯಾಗುವಂತೆ ಒತ್ತಾಯಿಸುತ್ತಿದಳು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001160469

ತಿಪಟೂರು, ದೊಡ್ಡಬಳ್ಳಾಪುರ, ನೆಲಮಂಗಲ ಹೀಗೆ ನಾನಾ ಕಡೆ ಕರೆದು ಪ್ರೀತಿಸುತ್ತಿದ್ದೇನೆ ನನ್ನನ್ನು ಮದುವೆ ಮಾಡಿಕೊಳ್ಳಿ ಎಂದು ಒತ್ತಡ ಹಾಕಿ ಇದಕ್ಕೆ ಒಪ್ಪದಿದ್ದ ಕಾರಣ ಸ್ನೇಹಿತರೊಂದಿಗೆ ಸೇರಿ ಅವಳ ಜೊತೆಗಿನ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿ ಹಣದ ಬೇಡಿಕೆ ಇಟ್ಟಿದ್ದಾಳೆ ಎಂಬುದು ಮಾಜಿ ಅಧ್ಯಕ್ಷರ ಗಂಭೀರ ಆರೋಪವಾಗಿದೆ.

ದೂರು ಅರ್ಜಿ ಹೊರತಾಗಿ ಕೆಲ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹಲವು ಬಿಸಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಮುಖಂಡ ಅಣ್ಣಪ್ಪಸ್ವಾಮಿ ಬ್ಲ್ಯಾಕ್ ಮೇಲರ್ ಮಹಿಳೆಯ ಗೆಳೆತನ ನಂತರ ಭೇಟಿ, ದಿಢೀರ್ ಪ್ರೇಮ, ಆಮೇಲೆ ಅಲ್ಲಲ್ಲಿ ಮೀಟಿಂಗ್ ಮಾಡಿಕೊಂಡು ಒಂದು ಕಡೆ ಸೇರೋದು ಈಗೆಲ್ಲಾ ನಡೆಯುತ್ತಿದ್ದ ಸಲುಗೆ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ಜೊತೆ ಮತ್ತೊಬ್ಬ ಮಹಿಳೆಯ ಹೆಸರು ತಳುಕು ಹಾಕಿಕೊಂಡಿದೆ.

ಬೆಂಗಳೂರು ಕಡೆಗೆ ತೆರಳಲು ಹೇಳಿ ದೊಡ್ಡಬಳ್ಳಾಪುರ ಕಡೆ ಕರೆದುಕೊಂಡು ಹೋದ ಮಹಿಳೆ ದಾರಿಯುದ್ಧಕ್ಕೂ ಬೆದರಿಕೆ ಹಾಕಿ ಸಾಮಾಜಿಕ ಜಾಲ ತಾಣಗಳಲ್ಲಿ ಪೋಟೋ ವಿಡಿಯೋ ವೈರಲ್ ಮಾಡಿ ಮಾನ ಮರ್ಯಾದೆ ತೆಗೆಯುವ ಬೆದರಿಕೆಯಲ್ಲೇ ಹೊಟೇಲ್ ರೂಂ ನಲ್ಲಿ ಇಬ್ಬರು ಯುವಕರನ್ನು ಕರೆಸಿ ಬೆದರಿಕೆ ಹಾಕಿ ಕೊನೆಗೆ ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದು ದೂರು ಉಲ್ಲೇಖ ಮಾಡಿದ್ದಾರೆ.

ದೂರು ಆಧರಿಸಿ ಗುಬ್ಬಿ ಪೊಲೀಸರು ಪ್ರಕರಣ ದಾಖಲಾಗಿಸಿ ಈ ಸಂಬಂಧ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಮಹಿಳೆಯರ ಜೊತೆ ಸೇರಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಗುಬ್ಬಿ ಪಟ್ಟಣದ ಯುವಕ ಭರತ್ ಮತ್ತು ಬಿಲ್ಲೇಪಾಳ್ಯ ಬಸವರಾಜು ಎಂಬುವರ ಸೆರೆಗೆ ತಂಡ ರಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...