ಗುಬ್ಬಿ | ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ನಿಯಮಾವಳಿ : ಪೊಲೀಸರ ಶಾಂತಿ ಸಭೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ.

Date:

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ ಸರ್ಕಾರದ ಕೆಲ ನಿಯಮಾವಳಿಗಳನ್ನು ಸಾರ್ವಜನಿಕರಿಗೆ ತಿಳಿಸಲು ಪೊಲೀಸ್ ಇಲಾಖೆ ಶಾಂತಿ ಸಭೆಯನ್ನು ತಹಶೀಲ್ದಾರ್ ಬಿ.ಆರತಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಜೆ ಆಯೋಜಿಸಿದ್ದ ಶಾಂತಿ ಸಭೆಗೆ ಗಣೇಶ ಪ್ರತಿಷ್ಠಾಪನೆ ಮಾಡುವ ಎಲ್ಲಾ ಸಂಘ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು, ಬೆಸ್ಕಾಂ, ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಜರಾತಿಯಲ್ಲಿ ಗಣೇಶ ಹಬ್ಬದ ಆಚರಣೆ ಕುರಿತು ಸರ್ಕಾರದ ನಿಬಂಧನೆಗಳನ್ನು ಸಿಪಿಐ ಗೋಪಿನಾಥ್ ವಿವರಿಸಿದರು.

ಸಭೆಯಲ್ಲಿ ಡಿಜೆ ಸೌಂಡ್ಸ್ ಬಳಕೆಗೆ ಅನುಮತಿಗೆ ಒಕ್ಕೊರಲಿನ ಬೇಡಿಕೆ ಇಡಲಾಯಿತು. ಯಾವುದೇ ಕಾರಣಕ್ಕೂ ಡಿಜೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂಬ ಉತ್ತರಕ್ಕೆ ಹಲವು ನಗರದಲ್ಲಿ ನಡೆಯುವ ಗಣೇಶ ಉತ್ಸವದಲ್ಲಿ ಡಿಜೆ ಬಳಸಿರುವ ಕುರಿತು ಚರ್ಚೆ ಮಾಡಿದರು. ಸರ್ಕಾರದ ನಿಯಮದಂತೆ ಡಿಜೆ ಅನುಮತಿ ಇಲ್ಲ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಾದ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅನುಮತಿ ಪಡೆಯಬೇಕಿದೆ. ಸಿಂಗಲ್ ವಿಂಡೋ ಅರ್ಜಿ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಯಾ ಗ್ರಾಮ ಪಂಚಾಯಿತಿಯಲ್ಲಿ ಕೂಡಾ ಅರ್ಜಿ ಸ್ವೀಕರಿಸಿ ಅನುಮತಿ ಕೊಡಲು ವ್ಯವಸ್ಥೆ ಮಾಡಲಾಗುವುದು. ಈ ಜೊತೆಗೆ ಹಸಿರು ಪಟಾಕಿ ಬಳಕೆ, ಆರ್ಕೆಸ್ಟ್ರಾ ಕೂಡಾ ರಾತ್ರಿ 10 ರೊಳಗೆ ಮುಗಿಸಲು ಎಲ್ಲಾ ಆಯೋಜಕರಿಗೂ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರಾಧ ಕೃತ್ಯದಲ್ಲಿ ಭಾಗಿಯಾದವರನ್ನು ಸಂಘಗಳಲ್ಲಿ ಸೇರಿಸಿಕೊಳ್ಳದೆ ಜವಾಬ್ದಾರಿ ಹೊತ್ತ ಇಬ್ಬರ ಮುಂದಾಳತ್ವದಲ್ಲಿ ಗಣೇಶ ಹಬ್ಬ ಆಚರಿಸಲು ಸೂಚಿಸಲಾಗಿದೆ. ಧ್ವನಿ ವರ್ಧಕ ಬಳಕೆಗೆ ಅನುಮತಿ ಕಡ್ಡಾಯ ಪಡೆಯಬೇಕು. ಬಹಳ ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆ ಮಾಡದೆ ಶೀಘ್ರದಲ್ಲಿ ವಿಸರ್ಜನೆ ಮಾಡುವಂತೆ ಮನವಿ ಮಾಡಿ, ಖಾಸಗಿ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡುವ ಮುನ್ನ ಸ್ಥಳದ ಮಾಲೀಕರ ಅನುಮತಿ ಅತ್ಯಗತ್ಯ. ನಿಗದಿತ ಸ್ಥಳದಲ್ಲಿ ವಿಸರ್ಜನಾ ವೇಳೆ ಈಜುಗಾರರ ತಂಡ, ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ವಿದ್ಯುತ್ ಕಂಬ ತಂತಿ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಿಪಿಐ ಗೋಪಿನಾಥ್ ಮನವಿ ಮಾಡಿದರು.

ಗಣೇಶ ಹಬ್ಬದ ಜೊತೆ ಈದ್ ಮಿಲಾದ್ ಹಬ್ಬ ಬರುವ ಕಾರಣ ಯಾವುದೇ ಗಲಭೆಗೆ ಅವಕಾಶ ನೀಡದೆ ಸೌಹಾರ್ದತೆ ಕಾಪಾಡಬೇಕು. ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ ವಿದ್ಯುದ್ದೀಪ ಅಲಂಕಾರಕ್ಕೆ ನೇರ ಕಂಬದ ಮೂಲಕ ಕರೆಂಟ್ ಪಡೆದರೆ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ಹಿನ್ನಲೆ ಬೆಸ್ಕಾಂ ಅನುಮತಿ ಪಡೆದು ತಾತ್ಕಾಲಿಕ ಕರೆಂಟ್ ಪಡೆದುಕೊಳ್ಳಲು ಸೂಚನೆ ನೀಡಲಾಗಿದೆ. ಅರ್ಜಿ ಸಲ್ಲಿಸದೇ ಗಣೇಶ ಪ್ರತಿಷ್ಠಾಪನೆ ಮಾಡದಂತೆ ಎಚ್ಚರಿಕೆ ವಹಿಸಿ ಹಾಗೆಯೇ ಗಣೇಶ ಪೆಂಡಾಲ್ ಬಳಿ ಅಶ್ಲೀಲ ಹಾಡುಗಳು ಹಾಕುವುದು, ದುಶ್ಚಟಗಳು ನಡೆಸುವುದು, ಗುಂಪುಗಾರಿಕೆ, ಇವೆಲ್ಲವನ್ನೂ ನಿಷೇಧಿಸಿದೆ. ವಿಸರ್ಜನಾ ಮಹೋತ್ಸವ ಕೂಡಾ ಸಂಜೆಯೊಳಗೆ ಮುಗಿಸಲು ಎಲ್ಲಾ ಸಂಘಗಳಿಗೂ ಸೂಚಿಸಲಾಗಿದೆ ಎಂದು ಗುಬ್ಬಿ ಪಿಎಸ್ಸೈ ಸುನೀಲ್ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ, ಬೆಸ್ಕಾಂ ವಿಭಾಗಾಧಿಕಾರಿ ಪ್ರಕಾಶ್, ಅಗ್ನಿಶಾಮಕ ದಳ ಹರೀಶ್, ಪಪಂ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...