ಆರೋಗ್ಯವಾಗಿರಲು ಆಹಾರ ಮತ್ತು ನಮ್ಮ ಜೀವನಶೈಲಿಯ ಜೊತೆಗೆ ಶುಚಿತ್ವವೂ ಬಹಳ ಮುಖ್ಯವಾಗಿರುತ್ತದೆ. ರೋಗಾಣುಗಳು ನಮ್ಮಿಂದ ದೂರವಿರಬೇಕು ಎಂದರೆ ಆಗಾಗ ಕೈ ತೊಳೆಯಬೇಕು. ಈ ನಿಟ್ಟಿನಲ್ಲಿ ಅಕ್ಟೋಬರ್ ಮಾಹೆಯ 15 ರಂದು ವಿಶ್ವ ಕೈ ತೊಳೆಯುವ ದಿನವಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಕೈ ತೊಳೆಯುವ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ.ಶೇಖರ್ ಮಾತನಾಡಿ ಬಹುಪಾಲ ರೋಗ ಬರುವುದು ಬರುವುದು ನಮ್ಮ ಕೈಗಳ ಮೂಲಕ. ಹಾಗಾಗಿ ಅದನ್ನು ಶುಚಿಯಾಗಿ ಇಟ್ಟುಕೊಂಡರೆ ಪದೇ ಪದೇ ಕಾಡುವ ಆರೋಗ್ಯ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದು. ಹಾಗಾಗಿ ನಾವು ಸುರಕ್ಷಿತವಾಗಿ ಮತ್ತು ಆರೋಗ್ಯಕರವಾಗಿರಲು ಆಗಾಗ ಕೈ ತೊಳೆಯುವು ಬಹಳ ಮುಖ್ಯ ಎಂಬುದನ್ನು ನೆನಪಿಸುವ ಸಲುವಾಗಿ ಜಾಗತಿಕವಾಗಿ ಅಕ್ಟೋಬರ್ 15 ರಂದು ಕೈ ತೊಳೆಯುವ ದಿನವನ್ನು ಆಚರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕೈ ತೊಳೆಯುವ ಬಗ್ಗೆ ಜಾಗೃತಿ ಮೂಡಿಸಿ ಸೋಪಿನ ಮೂಲಕ ಸ್ವಚ್ಚವಾಗಿ ಕೈ ತೊಳೆದು ಪ್ರತಿ ದಿನ ಹೀಗೆಯೇ ಕೈ ತೊಳೆಯಲು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ರಾಮಕ್ಕ, ಮಹೇಂದ್ರ ಕುಮಾರ್, ಗೀತಾ ನಂದೀಶ್, ಗ್ರಾಪಂ ಗುಮಾಸ್ತೆ ಗೀತಾ, ಉಪೇಂದ್ರ ಕುಮಾರ್, ನಾಗಣ್ಣ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಇದ್ದರು.





